ಹಾವೇರಿ ಜಿ.ಪಂ ನೂತನ ಅಧ್ಯಕ್ಷರಾಗಿ ಏಕನಾಥ ಬಾನುವಳ್ಳಿ ಅವಿರೋಧ ಆಯ್ಕೆ
ಹಾವೇರಿ, ಅಕ್ಟೋಬರ್ 23: ಹಾವೇರಿ ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಕೋಳ ಜಿ.ಪಂ ಕ್ಷೇತ್ರದ ಸದಸ್ಯ ಏಕನಾಥ ಬಾನುವಳ್ಳಿ ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಐದು ವರ್ಷ ಅವಧಿಯ ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಹುದ್ದೆಯ ಉಳಿದ ಅವಧಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಏಕನಾಥ ಬಾನುವಳ್ಳಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಅವರು, ನಿಯಮಾನುಸಾರ ಏಕನಾಥ ಬಾನುವಳ್ಳಿ ಅವರು ಹಾವೇರಿ ಜಿ.ಪಂ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಉಪ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ ಅವರು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಚುನಾವಣೆ ಪ್ರಕ್ರಿಯೆ ನಿರ್ವಹಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕಾರಡಗಿ ರಮೇಶ ಬಸಪ್ಪ ದುಗ್ಗತ್ತಿ, ಅಗಡಿ ಕ್ಷೇತ್ರದ ಕೊಟ್ರೇಶಪ್ಪ ಬಸೆಗಣ್ಣಿ, ಮಾಸೂರ ಕ್ಷೇತ್ರದ ಎಸ್.ಕೆ ಕರಿಯಣ್ಣನವರ, ಕಾಗಿನೆಲೆ ಕ್ಷೇತ್ರದ ಅಬ್ದುಲ್ ಮುನಾಫ್ ಬಾಬುಲಿಸಾಬ್ ಎಲಿಗಾರ ಅವರುಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರಾಣೇಬೆನ್ನೂರು ತಾಲ್ಲೂಕಿನ ಕಾಕೋಳ ಕ್ಷೇತ್ರದ ಏಕನಾಥ ಭೀಮರೆಡ್ಡಿ ಬಾನುವಳ್ಳಿ ಅವರನ್ನು ಸೂಚಿಸಿ ನಾಮನಿರ್ದೇಶನ ಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿದರು.
34 ಸದಸ್ಯ ಬಲದ ಹಾವೇರಿ ಜಿಲ್ಲಾ ಪಂಚಾಯಿತಿಯಲ್ಲಿ ಒಬ್ಬ ಸದಸ್ಯ ನಿಧನ ಹೊಂದಿದ ಕಾರಣ, 17 ಸದಸ್ಯರ ಕೋರಂ ಅವಶ್ಯವಿದ್ದು, 23 ಸದಸ್ಯರು ಚುನಾವಣಾ ಸಭೆಯಲ್ಲಿ ಭಾಗವಹಿಸಿದ್ದರು. ಒಬ್ಬರೇ ನಾಮನಿರ್ದೇಶನ ಸೂಚಿಸಿದ ಕಾರಣ ಅವಿರೋಧ ಆಯ್ಕೆಯಾಯಿತು. ಬಸವನಗೌಡ ದೇಸಾಯಿ ಅವರ ನಿಧನದಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಸಲಾಯಿತು.
ನೂತನ ಅಧ್ಯಕ್ಷರಾಗಿ ಆಯ್ಕೆ ಹೊಂದಿರುವ ಏಕನಾಥ ಭೀಮರೆಡ್ಡಿ ಬಾನುವಳ್ಳಿ ಅವರು ರಾಣೇಬೆನ್ನೂರು ತಾಲ್ಲೂಕು ಕಾಕೋಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪ್ರತಿನಿಧಿಯಾಗಿದ್ದಾರೆ. ಬಿ.ಎ ಪದವೀಧರರಾದ ಇವರು ಕೃಷಿ ವೃತ್ತಿಯಲ್ಲಿ ತೊಡಗಿದ್ದು, ರಾಣೇಬೆನ್ನೂರ ತಾಲ್ಲೂಕಿನ ಗುಡಗೂರು ಗ್ರಾಮದವರು.
1982 ರಿಂದ 1987 ರಲ್ಲಿ ರಾಣೆಬೆನ್ನೂರು ತಾಲ್ಲೂಕು ಹೊನ್ನತ್ತಿ ಮಂಡಲ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಪ್ರವೇಶಿಸಿ 1992 ರವರೆಗೆ ಕಾರ್ಯನಿರ್ವಹಿಸಿದ್ದಾರೆ.
1995ರ ಚುನಾವಣೆಯಲ್ಲಿ ಗುಡಗೂರ ಕ್ಷೇತ್ರದ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಗೊಂಡು 2000 ದವರೆಗೆ ಕಾರ್ಯನಿರ್ವಹಿದ್ದಾರೆ. 2000 ರಿಂದ 2005 ರವರೆಗೆ ರಾಣೇಬೆನ್ನೂರು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ರೂಪಾಂತರ ಸಹಕಾರಿ ಸಂಘದ ಸದಸ್ಯರು ಹಾಗೂ ಅಧ್ಯಕ್ಷರಾಗಿ ಹಾಗೂ 2005 ರಿಂದ 2011 ರವರೆಗೆ ರಾಣೆಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾಗಿದ್ದರು.
2016ರ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ರಾಣೇಬೆನ್ನೂರು ತಾಲ್ಲೂಕು ಕಾಕೋಳ ಜಿಲ್ಲಾ ಪಂಚಾಯತಿ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿದ್ದರು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications