Get Updates
Get notified of breaking news, exclusive insights, and must-see stories!

CM-DCM ನಡುವಿನ ಕಿತ್ತಾಟದ ಬಗ್ಗೆ ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯೆ

ಹಾವೇರಿ, ಜೂನ್ 30: ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರ್ಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಸುದ್ದಿಗಾರರ ಜೊತೆಗೆ ಭಾನುವಾರ ಮಾತನಾಡಿದ ಅವರು, ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್‌ ನೀಡಿರುವ ಹೇಳಿಕೆಗೆ ತಿರುಗೇಟು ಅವರು ತಿರುಗೇಟು ನೀಡಿದರು.

Ex CM Basavaraj Bommai Reaction Fight Between CM Siddaramaiah and DCM DK Shivkumar

ಸಿಎಂ-ಡಿಸಿಎಂ ನಡುವೇ ಏನಾಗುತ್ತಿದೆ?

ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತದೆ? ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ.? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ? ಎಂದು ಮೊದಲು ತಿಳಿದುಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೊ ನನಗೆ ಗೊತ್ತಿಲ್ಲಾ ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಲೇವಡಿ ಮಾಡಿದರು.

ಶಾಸಕರಿಗೆ ನೀಡುವ ಬತ್ತೆ ಚಹಾ ಕುಡಿಯಲಿಕ್ಕೆ ಸಾಲುವುದಿಲ್ಲಾ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು.

Ex CM Basavaraj Bommai Reaction Fight Between CM Siddaramaiah and DCM DK Shivkumar

ಸರ್ಕಾರ ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ವಹಿಸಲಿ

ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಹಾವಳಿ ಕುರಿತು ಮಾತನಾಡಿದ ಅವರು, ಒಂದು ಕಾಲದಲ್ಲಿ ಹೇಗೆ ಕಾಲರಾ, ಮಲೇರಿಯಾ ಹೇಗೆ ಬಂದಿತ್ತೊ ಹಾಗೆ ಈಗಾ ಡೆಂಗ್ಯೂ ಬಂದಿದೆ. ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳ ಬೇಕು. ಅಧಿಕಾರಿಗಳು ಯಾವುದೇ ಮುಂಜಾಗ್ರತ ಕ್ರಮ ತೆಗೆದು ಕೊಳ್ಳುತ್ತಿಲ್ಲ. ಹೀಗಾಗಿ ಡೆಂಗ್ಯೂ ಉಲ್ಬಣವಾಗುತ್ತದೆ ಆಗ ಮೇಲಾಧಿಕಾಗಳ ಗಮನಕ್ಕೆ ತರುತ್ತಾರೆ. ನಾನು ಡಿಸಿ, ಡಿಎಚ್ಓ, ಡಿ.ಎಸ್ ಗೆ ಆಗ್ರಹ ಮಾಡುತ್ತೆನೆ ಡೆಂಗ್ಯೂ ಪ್ರಕರಣದ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.

ಡೆಂಗ್ಯೂ ಸಾವಿನ ನಿಖರ ಮಾಹಿತಿಯನ್ನು ಮರೆಮಾಚುತ್ತಿದ್ದಾರೆ ಎಂಬ ಆರೋಪದ‌ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡೆಂಗ್ಯೂವಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಅಧಿಕಾರಿಗಳು ಸರಕಾರಿ ಆಸ್ಪತ್ರೆಯ ಸಂಖ್ಯೆ ಮಾತ್ರ ಗಣನೆಗೆ ತೆಗೆದುಕೊಳ್ಳುತ್ತಿದ್ದಾರೆ. ಡೆಂಗ್ಯೂ ಸೊಂಕಿತರು ಹುಬ್ಬಳ್ಳಿ ದಾವಣಗೆರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಅವುಗಳನ್ನು ಲೆಕ್ಕಕ್ಕೆ ತೆಗೆದು ಕೊಳ್ಳಬೇಕು ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+