ಹೌಹಾರಿದ ಹಾವೇರಿ ಮಂದಿ; ಮೊದಲ ಕೊರೊನಾ ಸೋಂಕಿತನ ಹಿಸ್ಟರಿ ಭಯಂಕರ!
ಹಾವೇರಿ, ಮೇ.04: ಹಚ್ಚ ಹಸಿರಾಗಿ ಗ್ರೀನ್ ಝೋನ್ ನಲ್ಲಿ ನೆಮ್ಮದಿಯೊಗಿದ್ದ ಹಾವೇರಿ ಜಿಲ್ಲೆಗೂ ಕೊರೊನಾ ವೈರಸ್ ಮಹಾಮಾರಿ ವಕ್ಕರಿಸಿದೆ. ಸೋಮವಾರ ಜಿಲ್ಲೆಯಲ್ಲಿ ಮೊದಲ ಕೊವಿಡ್-19 ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ.
ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಮೊದಲ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಏಪ್ರಿಲ್.28ರಂದು ಮುಂಬೈನಿಂದ ಸೋಂಕಿತ ವ್ಯಕ್ತಿಯು ರಾತ್ರಿ 11 ಗಂಟೆಗೆ ಅಣ್ಣ ಹಾಗೂ ಪುತ್ರನ ಜೊತೆಗೆ ಸವಣೂರಿಗೆ ಆಗಮಿಸಿದ್ದು ನೇರವಾಗಿ ಮನೆಗೆ ತೆರಳಿದ್ದಾನೆ. ಅಂದು ವ್ಯಕ್ತಿಯಲ್ಲಿ ಯಾವುದೇ ಸೋಂಕಿತ ಲಕ್ಷಣಗಳು ಕಂಡು ಬಂದಿರಲಿಲ್ಲ.
ಮುಂಬೈನಿಂದ ಆಗಮಿಸಿದರು ಎಂಬ ಮಾಹಿತಿ ಆಧರಿಸಿ ಮೂವರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಮೇ.03ರಂದು ಒಬ್ಬನಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಮೇ.04ರಂದು ಮತ್ತೊಬ್ಬನಿಗೆ ಸೋಂಕು ಇರುವುದು ಮೊದಲ ಹಂತದ ತಪಾಸಣೆಯಲ್ಲಿ ದೃಢಪಟ್ಟಿದೆ. ಎರಡನೇ ಹಂತದ ಮರುಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.

ಮೊದಲ ಸೋಂಕಿತನೊಂದಿಗೆ 25 ಮಂದಿಗೆ ಸಂಪರ್ಕ
ಕೊರೊನಾ ವೈರಸ್ ಸೋಂಕಿತನ ಜೊತೆಗೆ ಆತನ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಆತನಿಗೆ ಚಿಕಿತ್ಸೆ ನೀಡಿದ ವೈದ್ಯರ ತಂಡ ಹೀಗೆ ಪ್ರಾಥಮಿಕ ಸಂಪರ್ಕವನ್ನು ಹೊಂದಿದ್ದ 21 ಮಂದಿಯನ್ನು ಗುರುತಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರನ್ನೂ ಹಾವೇರಿ ಜಿಲ್ಲಾಸ್ಪತ್ರೆಯ ಐಸೋಲೇಟೆನ್ ವಾರ್ಡ್ ನಲ್ಲಿ ಪ್ರತ್ಯೇಕವಾಗಿರಿಸಿ ತಪಾಸಣೆ ನಡೆಸಲಾಗುತ್ತಿದೆ.

ದ್ವಿತೀಯ ಸಂಪರ್ಕದಲ್ಲಿ ಇದ್ದವರಿಗೂ ಗೃಹ ದಿಗ್ಬಂಧನ
ಇನ್ನು, ಕೊರೊನಾ ಸೋಂಕಿತನ ದ್ವಿತೀಯ ಸಂಪರ್ಕವನ್ನು ಹೊಂದಿದ್ದ 14 ಜನರನ್ನು ಪತ್ತೆ ಮಾಡಲಾಗಿದ್ದು, ಎಲ್ಲರನ್ನೂ ಗೃಹ ದಿಗ್ಬಂಧನದಲ್ಲಿ ಇರಿಸಲಾಗಿದೆ. ಎಲ್ಲರ ರಕ್ತ ಹಾಗೂ ಗಂಟಲು ದ್ರವ್ಯದ ಮಾದರಿಯನ್ನು ಸಂಗ್ರಹಿಸಿದ್ದು ಪರೀಕ್ಷೆಗೆ ರವಾನಿಸಲಾಗಿದೆ. ಇದಲ್ಲದೇ ಸೋಂಕಿತ ಪ್ರದೇಶದ 5 ಕಿಲೋ ಮೀಟರ್ ವ್ಯಾಪ್ತಿಯನ್ನು ಬಫರ್ ಝೋನ್ ವ್ಯಾಪ್ತಿ ಎಂದು ಗುರುತಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಬ್ಯಾರಿಕೇಡ್ ಹಾಕಿ ಹೊರ ಪ್ರದೇಶಗಳಿಂದ ಜನರ ಬಾರದಂತೆ ನಿರ್ಬಂಧ ವಿಧಿಸಲಾಗಿದೆ.

ಮೊದಲ ಸೋಂಕಿತನಿದ್ದ ಬಡಾವಣೆ ಸೀಲ್ ಡೌನ್
ಕೊರೊನಾ ವೈರಸ್ ಸೋಂಕಿತನು ವಾಸವಿದ್ದ ಸವಣೂರಿನ ಎರಡು ಬಡಾವಣೆಗಳಲ್ಲಿ 394 ಮನೆಗಳಿದ್ದು, 1,789 ಜನರು ವಾಸಿಸುತ್ತಿದ್ದಾರೆ. ಈ ಪೂರ್ಣ ಪ್ರದೇಶವನ್ನು ಇದೀಗ ಸೀಲ್ ಡೌನ್ ಮಾಡಲಾಗಿದೆ. ಸದರಿ ಪ್ರದೇಶದಲ್ಲಿ ಒಳ ಬರುವ ಹಾಗೂ ಹೊರ ಹೋಗುವ ಒಂದೇ ಮಾರ್ಗವನ್ನು ತೆರೆಯಲಾಗಿದೆ. ಇನ್ಸಿಡೆಂಟಲ್ ಕಮಾಂಡರ್ ಅನುಮತಿಯಿಲ್ಲ ಯಾರೂ ಈ ಪ್ರದೇಶ ಪ್ರವೇಶಿಸುವಂತಿಲ್ಲ, ಇಲ್ಲಿಯವರು ಹೊರಗೆ ಹೋಗುವಂತೆಯೂ ಇಲ್ಲ.

ಅಗತ್ಯ ವಸ್ತುಗಳನ್ನು ಪೂರೈಸಲು ಕಂಟ್ರೋಲ್ ರೂಮ್ ಸ್ಥಾಪನೆ
ಸವಣೂರಿನ ಎರಡು ಬಡಾವಣೆಗಳಲ್ಲಿನ ಜನರಿಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಪೂರೈಸುವುದಕ್ಕೆ ಹಾಗೂ ವೈದ್ಯಕೀಯ ಅವಶ್ಯಕತೆಗಳನ್ನು ಒದಗಿಸಲು ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದೆ. ಸಹಾಯಕ ಆಯುಕ್ತರು ಹಾಗೂ ಸವಣೂರಿನ ಡಿಎಸ್ ಪಿ ಇದರ ಮೇಲ್ವಿಚಾರಣೆ ವಹಿಸಿರುತ್ತಾರೆ. ಕೊವಿಡ್-19 ಪರಿಸ್ಥಿತಿ ನಿಭಾಯಿಸಲು ಜಿಲ್ಲಾ ಮಟ್ಟದಲ್ಲಿ ಪ್ರಮುಖ ವಿಪತ್ತು ನಿರ್ವಹಣಾ ತಂಡವನ್ನು ರಚಿಸಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications