Hangal Assembly Constituency Analysis: ಕಾಂಗ್ರೆಸ್ ತೆಕ್ಕೆಯಿಂದ ಅಧಿಕಾರ ಕಸಿದುಕೊಳ್ಳುತ್ತಾ ಬಿಜೆಪಿ?
ಮಂಡ್ಯ, ಮಾರ್ಚ್ 20: ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಹಾವೇರಿ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು. ಖ್ಯಾತ ಹಿಂದೂಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ಹುಟ್ಟೂರು ಹಾನಗಲ್. ರಾಜಕೀಯ ಸೇರಿದಂತೆ ಇತರ ವಿಚಾರಗಳಿಂದಲೂ ಕ್ಷೇತ್ರ ಕರ್ನಾಟಕದಲ್ಲಿ ಜನಪ್ರಿಯತೆ ಗಳಿಸಿದೆ.
ಇತಿಹಾಸ ಪ್ರಸಿದ್ಧವಾದ ಜಕಣಾಚಾರಿ ಕಟ್ಟಿಸಿದ ಶ್ರೀ ತಾರಕೇಶ್ವರ ದೇವಾಲಯ ಕ್ಷೇತ್ರದ ಪ್ರಮುಖ ಆಕರ್ಷಣೆಯಾಗಿದ್ದು, ಹಾನಗಲ್ ತಾಲೂಕು ಹಾವೇರಿ ಜಿಲ್ಲೆಯ ಮಲೆನಾಡು ಪ್ರದೇಶಕ್ಕೆ ಸೇರಿದೆ. ವರದಾ ನದಿಯು ಇಲ್ಲಿನ ರೈತರಿಗೆ ವರವಾಗಿದ್ದು, ಭತ್ತ, ಅಡಿಕೆ, ಮೆಣಸಿನಕಾಯಿ ಜೊತೆಗೆ ಶ್ರೀಗಂಧವನ್ನು ಸಹ ಇಲ್ಲಿ ಬೆಳೆಯಲಾಗುತ್ತದೆ.

ಬಿಜೆಪಿ ಭದ್ರಕೋಟೆಯಾಗಿದ್ದ ಹಾನಗಲ್ ಕ್ಷೇತ್ರ ಸದ್ಯ ಕಾಂಗ್ರೆಸ್ ತೆಕ್ಕೆಯಲ್ಲಿದ್ದು, ಹಾನಗಲ್ ಕ್ಷೇತ್ರದ ಜನತೆ ಸದ್ಯ ಎರಡೂ ಪಕ್ಷಗಳ ಅಧಿಕಾರವಧಿಯನ್ನು ಕಂಡಂತಾಗಿದೆ. ಹಾನಗಲ್ ಎಂದರೆ ಸಿಎಂ ಉದಾಸಿ ಎನ್ನುವ ಮಟ್ಟಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಆಪ್ತ ಹಿರಿಯ ರಾಜಕಾರಣಿಯಾಗಿದ್ದ ಸಿಎಂ ಉದಾಸಿ ಅವರು ಕ್ಷೇತ್ರದಲ್ಲಿ ಜನಪ್ರಿಯತೆ ಪಡೆದಿದ್ದರು. ಇವರು 1985ರಿಂದ ಹಾನಗಲ್ ಕ್ಷೇತ್ರದಲ್ಲಿ ರಾಜಕೀಯ ಮಾಡುತ್ತಿದ್ದು, 2021ರಲ್ಲಿ ಅಧಿಕಾರದಲ್ಲಿರುವಾಗಲೇ ನಿಧನರಾದರು.
ಸಿಎಂ ಉದಾಸಿ ನಿಧನದ ನಂತರ ಹಾನಗಲ್ ಕ್ಷೇತ್ರದ ಶಾಸಕ ಸ್ಥಾನ ತೆರವಾಗಿತ್ತು. ಹೀಗಾಗಿ 2021ರ ಅಕ್ಟೋಬರ್ನಲ್ಲಿ ಹಾನಗಲ್ನಲ್ಲಿ ಉಪ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ನ ಶ್ರೀನಿವಾಸ ಮಾನೆ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದರು.
ಶ್ರೀನಿವಾಸ ಮಾನೆ 2010 ರಿಂದ 2021 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಧಾರವಾಡ ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರವನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿದ್ದರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಶ್ರೀನಿವಾಸ ಮಾನೆ ಅವರು ಕಾಂಗ್ರೆಸ್ನ ಪ್ರಮುಖ ಮುಖಂಡರಾಗಿದ್ದು, ಎಐಸಿಸಿ ಮತ್ತು ಕೆಪಿಸಿಸಿಯ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿ ಜನಪ್ರಿಯತೆಗಳಿಸಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಬಿಜೆಪಿ ಅಭ್ಯರ್ಥಿ ಸಿ.ಎಂ.ಉದಾಸಿ ವಿರುದ್ಧ ಕೆಲವೇ ಕೆಲವೇ ಅಂತರದಲ್ಲಿ ಸೋತಿದ್ದರು.
ಸಿಎಂ ಉದಾಸಿ ನಿಧನದ ತೆರವಾಗಿದ್ದ ಹಾನಗಲ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಶ್ರೀನಿವಾಸ ಮಾನೆ ಕ್ಷೇತ್ರದ ಶಾಸಕರಾಗಿದ್ದಾರೆ. ಸದ್ಯ ಶಾಸಕರಾಗಿ ಕ್ಷೇತ್ರದಲ್ಲಿ ತಳ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಹಾಲಿ ಶಾಸಕರಾಗಿರುವ ಶ್ರೀನಿವಾಸ ಮಾನೆ ಈ ಬಾರಿಯೂ ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಇನ್ನು ಕಾಂಗ್ರೆಸ್ನಿಂದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಕೂಡ ಈ ಬಾರಿ ಕಾಂಗ್ರೆಸ್ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಕಾಂಗ್ರೆಸ್ ತೆಕ್ಕೆಯಲ್ಲಿರುವ ಹಾನಗಲ್ ಕ್ಷೇತ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಹವಣಿಸುತ್ತಿದೆ. ಹೀಗಾಗಿ ಈ ಬಾರಿ ಬಿಜೆಪಿಯಲ್ಲಿ ಮಾಜಿ ಶಾಸಕ ಶಿವರಾಜ್ ಸಜ್ಜನರ್, ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಯಾಣ್ ಕುಮಾರ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಜಿದ್ದಾಜಿದ್ದಿಯ ಪೈಟ್ ನಡುವೆ ಜೆಡಿಎಸ್ ಕೂಡ ಪ್ರಚಾರ ಆರಂಭಿಸಿದ್ದು, ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ.
ಹಾನಗಲ್ ಕ್ಷೇತ್ರದ ಮತದಾರರ ವಿವರ
ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,07,411 ಮತದಾರರಿದ್ದು, ಇಲ್ಲಿ ಲಿಂಗಾಯತ ಸಮುದಾಯದ ಮತವೇ ನಿರ್ಣಾಯಕವಾಗಿದೆ.ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 73,000 ಲಿಂಗಾಯತರು ಮತದಾರರಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದಿಂದ 38,000 ಮಂದಿ ಮತದಾರರಿದ್ದಾರೆ.
ಇನ್ನು ಹಾನಗಲ್ ಕ್ಷೇತ್ರದಲ್ಲಿ 35,000 ಮತಗಳಿದ್ದು, 10,600 ಮರಾಠ ಮತಗಳಿವೆ. ಗಂಗಾಮತಸ್ಥ 25,000 ಮತದಾರರಿದ್ದು, ಒಟ್ಟು 15,000 ಇತರ ಸಮುದಾಯದ ಮತಗಳಿವೆ ಎನ್ನುವ ಮಾಹಿತಿ ಲಭ್ಯವಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications