ಇಸ್ಲಾಂ ವಿರುದ್ಧ ಅವಹೇಳನಕಾರಿ ಪೋಸ್ಟ್– ದುಬೈನಲ್ಲಿ ಕೆಲಸದಿಂದ ಹಾವೇರಿ ಯುವಕ ವಜಾ
ಹಾವೇರಿ, ಏಪ್ರಿಲ್ 11: ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎಂಬ ಕಾರಣಕ್ಕೆ ದುಬೈನಲ್ಲಿ ಕೆಲಸದಲ್ಲಿದ್ದ ಹಾವೇರಿ ಮೂಲದ ಯುವಕನನ್ನು ನೌಕರಿಯಿಂದ ವಜಾ ಮಾಡಲಾಗಿದ್ದು, ಆತನಿಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿರುವುದಾಗಿ ತಿಳಿದುಬಂದಿದೆ.
ರಾಣೇಬೆನ್ನೂರಿನ ರಾಕೇಶ್ ಬಿ. ಕಿತ್ತೂರಮಠ್ ದುಬೈನ ಯುಎಇಯ ಎಮ್ರಿಲ್ ಸರ್ವೀಸ್ ಎಂಬ ಖಾಸಗಿ ಸಂಸ್ಥೆಯಲ್ಲಿ ಟೀಮ್ ಲೀಡರ್ ಆಗಿದ್ದ. ಕೊರೊನಾ ವೈರಸ್ ವಿಚಾರದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಅನ್ನು ಫೇಸ್ಬುಕ್ ನಲ್ಲಿ ರಾಕೇಶ್ ಹಾಕಿದ್ದ ಎನ್ನಲಾಗಿದೆ. ಈ ಪೋಸ್ಟ್ ಪ್ರಕಟವಾಗಿದ್ದನ್ನು ಗಮನಿಸಿದ್ದ ಸಂಸ್ಥೆ ರಾಕೇಶ್ ನನ್ನು ವಜಾಗೊಳಿಸಿರುವುದಾಗಿ ತಿಳಿದುಬಂದಿದೆ.
"ರಾಕೇಶ್ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಕಾರಣಕ್ಕೆ ಸಂಸ್ಥೆಯಿಂದ ರಾಕೇಶ್ ವಜಾಗೊಂಡಿದ್ದು, ದುಬೈ ಪೊಲೀಸರಿಗೆ ಹಸ್ತಾಂತರಿಸಲಾಗುವುದು. ಯಾವುದೇ ಧರ್ಮದ ವಿರುದ್ಧ ಪೋಸ್ಟ್ ಮಾಡುವವರನ್ನು ಸಂಸ್ಥೆ ಕ್ಷಮಿಸುವುದಿಲ್ಲ" ಎಂದು ಹೇಳಿದ್ದಾರೆ ಎಮ್ರಿಲ್ ಸರ್ವಿಸಸ್ ನ ಸಿಇಒ ಸ್ಟುವರ್ಟ್ ಹ್ಯಾರಿಸನ್.

ಈಗ ಯುಎಇನಲ್ಲಿ ರಾಕೇಶ್ ನೆಲೆಸಿದ್ದಾರೋ, ಇಲ್ಲವೋ ಎನ್ನುವುದನ್ನು ಸಂಸ್ಥೆ ಪತ್ತೆ ಮಾಡುತ್ತಿದೆ. ಅವರು ಇನ್ನೂ ದುಬೈನಲ್ಲೇ ಇದ್ದರೆ ದುಬೈ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಎಲ್ಲಾ ಧಾರ್ಮಿಕ ಅಥವಾ ಜನಾಂಗೀಯ ತಾರತಮ್ಯ ನಿಷೇಧಿಸಿ ಯುಎಇ 2015ರಲ್ಲಿ ಕಾನೂನು ತಂದಿದೆ. ಯಾವುದೇ ಧರ್ಮವನ್ನು ನಿಂದಿಸಿ ಅಭಿಪ್ರಾಯ ನೀಡುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ.
ಈ ಮೊದಲು ಅಬುಧಾಬಿ ನಿವಾಸಿ ಮಿತೇಶ್ ಉದೇಶಿ ಇಸ್ಲಾಂ ವ್ಯಂಗ್ಯಚಿತ್ರ ಮಾಡಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಈ ಸಂಬಂಧ ದೂರು ದಾಖಲಾಗಿ ಆತನನ್ನು ಕೆಲಸದಿಂದ ವಜಾ ಮಾಡಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications