ಹಾವೇರಿ: ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ; 300 ಕ್ಕೂ ಹೆಚ್ಚು ಜನರ ಮೇಲೆ ದೂರು
ಹಾವೇರಿ, ಸೆಪ್ಟೆಂಬರ್ 21: ರಾಣೇಬೆನ್ನೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವ ವೇಳೆ 300ರಿಂದ 500 ಜನರ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ಕಾಕಿ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆ ನಡೆದಿದ್ದು, ದರ್ಗಾ ಸರ್ಕಲ್ಗೆ ಬಂದಾಗ ಅನ್ಯಕೋಮಿನ ಗುಂಪು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಹಲವು ಯುವಕರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಘಟನೆ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ದರ್ಗಾ ಸರ್ಕಲ್ನಲ್ಲಿ ಸೇರಿದ್ದ ನೂರಾರು ಜನರನ್ನು ಚದುರಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಹೆಚ್ಚುವರಿ ಎಸ್ಪಿ ವಿಜಯಕುಮಾರ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನೂ ಚಾಕು ಇರಿತವಾಗಿದೆ ಎಂಬ ಗಾಳಿ ಸುದ್ದಿ ಕೂಡ ಹಬ್ಬಿತ್ತು. ಆದರೆ ಪೊಲೀಸ್ ಅಧಿಕಾರಿಗಳು ವದಂತಿ ಎಂದು ಖಚಿತಪಡಿಸಿದ್ದಾರೆ. ಆದರೆ ಕಲ್ಲು ತೂರಾಟ ಮಾಡಿದ ಆರೋಪದ ಮೇಲೆ ಸುಮಾರು 300ಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್ ದಾಖಲಾಗಿದೆ.
ಘಟನೆ ಬಗ್ಗೆ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಟ್ವೀಟ್ ಮಾಡಿದ್ದು, ''ರಾಣೇಬೆನ್ನೂರು ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗಲಾಟೆಯಾಗಿ ಯುವಕರಿಗೆ ಚೂರಿ ಇರಿತವಾಗಿರುವ ಸುದ್ದಿ ಇರುವ ವಿಡಿಯೋ ವೈರಲ್ ಆಗಿದ್ದು, ಸದರಿ ಸುದ್ದಿಯು ಸುಳ್ಳು ಸುದ್ದಿಯಾಗಿರುತ್ತದೆ. ರಾಣೆಬೆನ್ನೂರಿನಲ್ಲಿ ಚೂರಿ ಇರಿತದ ಯಾವುದೇ ಘಟನೆಗಳು ವರದಿಯಾಗಿರುವುದಿಲ್ಲ. ಸಾರ್ವಜನಿಕರು ಶಾಂತ ರೀತಿಯಿಂದ ವರ್ತಿಸಲು ಈ ಮೂಲಕ ಕೋರಲಾಗಿದೆ'' ಎಂದು ಮನವಿ ಮಾಡಿದ್ದಾರೆ.
ಹಿಂದೂ ಸಂಘಟನೆಯಿಂದ ಪ್ರತಿಭಟನೆ
ತಡರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಗಲಾಟೆ ಮಾಡಿದ ಹಿನ್ನೆಲೆ ಆಕ್ರೋಶಗೊಂಡ ಹಿಂದೂ ಯುವಕರು ರಾಣೆಬೆನ್ನೂರು ನಗರದ ದರ್ಗಾದ ಸರ್ಕಲ್ ಬಳಿ ತಡರಾತ್ರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ್ಗಾ ಸರ್ಕಲ್ನಲ್ಲಿ ಹೆಚ್ಚಿನ ಜನರು ಸೇರುತ್ತಿದ್ದ ಹಿನ್ನೆಲೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications