ಹಾವೇರಿ ಶಾಸಕ ನೆಹರು ಓಲೇಕಾರ್ ಮೊಮ್ಮಕ್ಕಳು ಆತ್ಮಹತ್ಯೆಗೆ ಶರಣು
ಹಾವೇರಿ, ನವೆಂಬರ್ 27: ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೇಕಾರ್ರವರ ಇಬ್ಬರು ಮೊಮ್ಮಕ್ಕಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಬ್ಯಾಡಗಿಯ ವಿನಾಯಕ ನಗರ ನಿವಾಸಿಗಳಾದ ನಾಗರಾಜ ಚಂದ್ರು ಛಲವಾದಿ (16) ಹಾಗೂ ಭಾಗ್ಯಲಕ್ಷ್ಮೀ ಚಂದ್ರು ಛಲವಾದಿ (18) ಆತ್ಯಹತ್ಯೆಗೆ ಶರಣಾದ ದುರ್ದೈವಿಗಳು.
ಸರಿಯಾಗಿ ಶಾಲೆಗೆ ಹೋಗು, ಅವರಿವರ ಜೊತೆ ತಿರುಗಾಡಬೇಡ ಎಂದು ಬುದ್ಧಿವಾದ ಹೇಳಿದ ತಂದೆಯ ಮಾತಿನಿಂದ ಕೋಪಗೊಂಡು ನಾಗರಾಜ ನೇಣಿಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ತಮ್ಮನ ಸಾವಿನ ಸುದ್ದಿ ತಿಳಿದು ಅಕ್ಕ ಭಾಗ್ಯಲಕ್ಷ್ಮೀ ಸಹ ಅದೇ ನೇಣಿಗೆ ಕೊರಳೊಡ್ಡಿದ್ದಾಳೆ.

ನಾಗರಾಜ ಛಲವಾದಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಸ್ಎಸ್ಎಲ್ಸಿಯಲ್ಲಿ ವಿಷಯ ಕಠಿಣವಿರುತ್ತದೆ. ಸರಿಯಾಗಿ ಶಾಲೆಗೆ ಹೋಗು ಅವರಿವರ ಜೊತೆ ತಿರುಗಾಡಬೇಡ. ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ತಂದೆ ಚಂದ್ರು ಬುದ್ಧಿವಾದ ಹೇಳಿದ್ದರು.
ಇದನ್ನು ಅವಮಾನ ಎಂದು ಮನಸ್ಸಿಗೆ ಹಚ್ಚಿಕೊಂಡ ನಾಗರಾಜ ಛಲವಾದಿ ಬೆಳಗಿವ ಜಾವ ಸೀರೆ ಬಳಸಿಕೊಂಡು ನೇಣು ಹಾಕಿಕೊಂಡಿದ್ದಾನೆ. ಸುದ್ದಿ ತಿಳಿದು ಕೂಡಲೇ ಬ್ಯಾಡಗಿ ತಾಲೂಕಾಸ್ಪತ್ರೆಗೆ ದಾಖಲಿಸಿದರೂ ನಾಗರಾಜನನ್ನು ಉಳಿಸಿಕೊಳ್ಳಲಾಗಲಿಲ್ಲ ಎನ್ನಲಾಗಿದೆ.
ತಮ್ಮನ ಸಾವಿನ ಸುದ್ದಿ ತಿಳಿದು ಕಾಲೇಜಿನಿಂದ ತಾಲೂಕಾಸ್ಪತ್ರೆಗೆ ಓಡೋಡಿ ಬಂದ ಅಕ್ಕ ಭಾಗ್ಯಲಕ್ಷ್ಮೀ ಛಲವಾದಿ ತಮ್ಮನ ಮುಖ ನೋಡಿ ದುಃಖಿತಳಾಗಿದ್ದಾಳೆ. ಸಾವಿನ ಶಾಕ್ನಿಂದ ಹೊರಬರಲಾರದೇ ಎಲ್ಲರೂ ಆಸ್ಪತ್ರೆಯಲ್ಲಿರುವ ಸಮಯದಲ್ಲಿಯೇ ಮನೆಗೆ ತೆರಳಿ ಅದೇ ಸೀರೆಗೆ ನೇಣು ಹಾಕಿಕೊಂಡಿದ್ದು, ಅವಳು ಸಹ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಮಕ್ಕಳ ಶವದೆದುರು ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಒಂದೇ ದಿನ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ, ತಾಯಿ ರೋಧಿಸುತ್ತಿದ್ದ ದೃಶ್ಯ ಮನ ಕಲಕುವಂತಿತ್ತು. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
ಅಕ್ಕ, ತಮ್ಮ ಇಬ್ಬರೂ ನೇಣಿಗೆ ಶರಣಾದ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮೃತ ಮಕ್ಕಳ ಪಾಲಕರಿಗೆ ಸಾಂತ್ವನ ಹೇಳಿದರು. ಈ ಮಕ್ಕಳ ಆತ್ಮಹತ್ಯೆಯಿಂದ ಹಾವೇರಿ ಜಿಲ್ಲೆಯ ಜನತೆ ದಿಗ್ಭ್ರಮೆಗೊಂಡಿದ್ದು, ಆತುರದ ನಿರ್ಧಾರ ತೆಗೆದುಕೊಳ್ಳಬಾರದಿತ್ತು ಎಂದಿದ್ದಾರೆ.
ಮಕ್ಕಳ ಭವಿಷ್ಯಕ್ಕಾಗಿ ಹಗಲಿರುಳು ಶ್ರಮಿಸುವ ತಂದೆ, ತಾಯಿಗೆ ಬುದ್ಧಿ ಹೇಳುವ ಹಕ್ಕಿದೆ. ತಂದೆ, ತಾಯಿಯ ಮಾತನ್ನೇ ವೇದವಾಕ್ಯ ಎಂದು ಪಾಲಿಸಿದಂತಹ ಮಹನೀಯರ ದೇಶವಿದು. ಅಂತಹದರಲ್ಲಿ ಕೇವಲ ತಂದೆ ಬೈದರು ಎಂಬ ಕಾರಣಕ್ಕೆ ಮಕ್ಕಳು ನೇಣು ಹಾಕಿಕೊಂಡಿದ್ದು ದುರುದೃಷ್ಟಕರ ಸಂಗತಿ ಎಂದು ಬ್ಯಾಡಗಿ ಮಾಜಿ ಶಾಸಕ ಸುರೇಶಗೌಡ ಪಾಟೀಲ ತಿಳಿಸಿದ್ದಾರೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications