86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಹಾವೇರಿ, ಫೆಬ್ರವರಿ 5: ಇದೇ ಫೆಬ್ರವರಿ ಅಂತ್ಯದಲ್ಲಿ ಯಾಲಕ್ಕಿ ನಗರಿ ಹಾವೇರಿಯಲ್ಲಿ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗಿದೆ.
ಗೃಹ ಸಚಿವ ಹಾಗೂ ಹಾವೇರಿ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ್ ಲಿಂಬಾವಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದೂಡಿಕೆಯ ತೀರ್ಮಾನ ತೆಗೆದುಕೊಳ್ಳಲಾಯಿತು.
ತಾತ್ಕಾಲಿಕವಾಗಿ ಸಮ್ಮೇಳನ ಮುಂದೂಡಲು ಸಭೆಯಲ್ಲಿ ತೀರ್ಮಾನಿಸಿದ್ದು, ಸಮ್ಮೇಳನದಲ್ಲಿ ಹೆಚ್ಚು ಜನರು ಸೇರುವುದರಿಂದ ಕೊವೀಡ್ ನಿಯಮ ಪಾಲನೆ ಕಷ್ಟಕರವಾಗುತ್ತದೆ. ಹೀಗಾಗಿ ಫೆಬ್ರವರಿ ಅಂತ್ಯಕ್ಕೆ ಹೊಸ ಮಾರ್ಗಸೂಚಿ ಪ್ರಕಟವಾದ ನಂತರ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.

ಆ ನಂತರ ಮಾರ್ಚ್ 9ಕ್ಕೆ ಮತ್ತೊಮ್ಮೆ ಸಭೆ ನಡೆಸಿ, ಸಮ್ಮೇಳನ ದಿನಾಂಕ ನಿಗದಿಪಡಿಸಲು ನಡೆಸಲು ಇದೇ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು. ಸಾಹಿತಿ ದೊಡ್ಡರಂಗೇಗೌಡ ಅವರು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದಾರೆ.
ಹಾವೇರಿಯಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನದ ಸಿದ್ಧತೆಗಳು ಇನ್ನು ಅಪೂರ್ಣವಾಗಿದ್ದು, ಸಮ್ಮೇಳನ ನಡೆಯುವ ಜಾಗ ಗುರುತಿಸುವುದು ಸೇರಿದಂತೆ ಅನೇಕ ಕೆಲಸಗಳು ಹಾಗೆ ಉಳಿದಿವೆ. ಕಡಿಮೆ ಸಮಯದಲ್ಲಿ ಎಲ್ಲ ತಯಾರಿ ಕಷ್ಟ ಎಂಬ ಕಾರಣಕ್ಕೆ ಮುಂದೂಡುವ ತೀರ್ಮಾನಕ್ಕೆ ಬರಲಾಯಿತು.

ಇಂದಿನ ಸಭೆಯಲ್ಲಿ ಗೃಹ ಸಚಿವ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೇರಿದಂತೆ ಕೃಷಿ ಸಚಿವ ಬಿಸಿ ಪಾಟೀಲ್, ತೋಟಗಾರಿಕಾ ಸಚಿವ ಆರ್.ಶಂಕರ್, ಶಾಸಕ ನೆಹರು ಓಲೇಕಾರ್, ಕಸಾಪ ಅಧ್ಯಕ್ಷ ಮನು ಬಳಿಗಾರ್ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಭಾಗವಹಿಸಿದ್ದರು.
Recommended Video
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications