ಹಾವೇರಿಯಲ್ಲಿ ಪಿಪಿಇ ಕಿಟ್ ಧರಿಸಿ ಕೇಕ್ ಕಟ್ ಮಾಡಿದ ಆರೋಗ್ಯ ಅಧಿಕಾರಿ!
ಹಾವೇರಿ, ಜೂನ್ 11: ಕೊರೊನಾವೈರಸ್ ಆರೈಕೆ ಕೇಂದ್ರ. ಈ ಹೆಸರು ಕೇಳಿದರೆ ಪಿಪಿಇ ಕಿಟ್ ಧರಿಸಿ ಸುತ್ತಾಡುವ ವೈದ್ಯಕೀಯ ಸಿಬ್ಬಂದಿ, ಮಾಸ್ಕ್ ಧರಿಸಿ ಓಡಾಡುವ ಜನರು ಒಂದು ಕಡೆ ಹಾಗೂ ಇದೇನಾಯ್ತಪ್ಪಾ ಅಂತಾ ಚಿಂತಾಕ್ರಾಂತರಾಗಿ ಕುಳಿತುಕೊಳ್ಳುವ ಕೊವಿಡ್-19 ಸೋಂಕಿತರು ಇನ್ನೊಂದು ಕಡೆ. ಇಂಥ ಚಿತ್ರಣವೇ ಕಣ್ಣೆದುರಿಗೆ ಬರುತ್ತದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಲಕೇರಿ ಕೊವಿಡ್-19 ಕೇಸ್ ಸೆಂಟರ್ ಇದೆಲ್ಲಕ್ಕಿಂತ ವಿಭಿನ್ನವಾಗಿದೆ. ಪ್ರತಿನಿತ್ಯ ತಮ್ಮ ಆರೋಗ್ಯ ಮೇಲ್ವಿಚಾರಣೆ ನಡೆಸುವ ಆರೋಗ್ಯ ಅಧಿಕಾರಿಯ 33ನೇ ಹುಟ್ಟುಹಬ್ಬವನ್ನು ಕೊರೊನಾವೈರಸ್ ರೋಗಿಗಳು ಸಂಭ್ರಮದಿಂದ ಆಚರಿಸಿದರು.
ಕೊರೊನಾವೈರಸ್ ರೋಗಿಗಳಲ್ಲಿ ವಿಶ್ವಾಸ, ಆತ್ಮಸ್ಥೈರ್ಯ ತುಂಬಲು ಹಾಗೂ ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಅಧಿಕಾರಿ ಸಂಜೀವ್ ಗಾಜೇಗೌಡ್ರ ಸೋಂಕಿತರ ಜೊತೆಗೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಪಿಪಿಇ ಕಿಟ್ ಧರಿಸಿಕೊಂಡೇ ಎರಡು ಕೆಜಿ ಕೇಕ್ ಕತ್ತರಿಸಿದರು.

ಕೊವಿಡ್-19 ಸೋಂಕಿತರ ಮಸ್ತ್ ಡ್ಯಾನ್ಸ್:
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಲಕೇರಿ ಕೊವಿಡ್-19 ಕೇರ್ ಸೆಂಟರ್ ನಲ್ಲಿ ಆರೋಗ್ಯಾಧಿಕಾರಿ ಸಂಜೀವ್ ಗಾಜೇಗೌಡ್ರ ಕೇಕ್ ಕತ್ತರಿಸಿದ ನಂತರದಲ್ಲಿ ಸೋಂಕಿತರ ಜೊತೆಗೆ ಮಸ್ತ್ ಡ್ಯಾನ್ಸ್ ಮಾಡಿದರು. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಕೊರೊನಾವೈರಸ್ ಸೋಂಕಿತರೆಲ್ಲ ಸೇರಿಕೊಂಡು ಕುಣಿದು ಕುಪ್ಪಳಿಸಿದರು. ಆ ಮೂಲಕ ತಮ್ಮ ಹುಟ್ಟುಹಬ್ಬದ ದಿನವನ್ನು ಕೊವಿಡ್-19 ಸೋಂಕಿತರ ಮುಖದಲ್ಲಿ ನಗು ಮೂಡಿಸುವುದಕ್ಕೆ ಮೀಸಲಿಟ್ಟ ಆರೋಗ್ಯ ಅಧಿಕಾರಿಗಳಿಗೆ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳು ಮನಸಾರೆ ಹಾರೈಸಿದರು.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications