ಹಾವೇರಿಯಲ್ಲಿ ಪಿಪಿಇ ಕಿಟ್ ಧರಿಸಿ ಕೇಕ್ ಕಟ್ ಮಾಡಿದ ಆರೋಗ್ಯ ಅಧಿಕಾರಿ!
ಹಾವೇರಿ, ಜೂನ್ 11: ಕೊರೊನಾವೈರಸ್ ಆರೈಕೆ ಕೇಂದ್ರ. ಈ ಹೆಸರು ಕೇಳಿದರೆ ಪಿಪಿಇ ಕಿಟ್ ಧರಿಸಿ ಸುತ್ತಾಡುವ ವೈದ್ಯಕೀಯ ಸಿಬ್ಬಂದಿ, ಮಾಸ್ಕ್ ಧರಿಸಿ ಓಡಾಡುವ ಜನರು ಒಂದು ಕಡೆ ಹಾಗೂ ಇದೇನಾಯ್ತಪ್ಪಾ ಅಂತಾ ಚಿಂತಾಕ್ರಾಂತರಾಗಿ ಕುಳಿತುಕೊಳ್ಳುವ ಕೊವಿಡ್-19 ಸೋಂಕಿತರು ಇನ್ನೊಂದು ಕಡೆ. ಇಂಥ ಚಿತ್ರಣವೇ ಕಣ್ಣೆದುರಿಗೆ ಬರುತ್ತದೆ.
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಲಕೇರಿ ಕೊವಿಡ್-19 ಕೇಸ್ ಸೆಂಟರ್ ಇದೆಲ್ಲಕ್ಕಿಂತ ವಿಭಿನ್ನವಾಗಿದೆ. ಪ್ರತಿನಿತ್ಯ ತಮ್ಮ ಆರೋಗ್ಯ ಮೇಲ್ವಿಚಾರಣೆ ನಡೆಸುವ ಆರೋಗ್ಯ ಅಧಿಕಾರಿಯ 33ನೇ ಹುಟ್ಟುಹಬ್ಬವನ್ನು ಕೊರೊನಾವೈರಸ್ ರೋಗಿಗಳು ಸಂಭ್ರಮದಿಂದ ಆಚರಿಸಿದರು.
ಕೊರೊನಾವೈರಸ್ ರೋಗಿಗಳಲ್ಲಿ ವಿಶ್ವಾಸ, ಆತ್ಮಸ್ಥೈರ್ಯ ತುಂಬಲು ಹಾಗೂ ಭಯವನ್ನು ಹೋಗಲಾಡಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಅಧಿಕಾರಿ ಸಂಜೀವ್ ಗಾಜೇಗೌಡ್ರ ಸೋಂಕಿತರ ಜೊತೆಗೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡರು. ಪಿಪಿಇ ಕಿಟ್ ಧರಿಸಿಕೊಂಡೇ ಎರಡು ಕೆಜಿ ಕೇಕ್ ಕತ್ತರಿಸಿದರು.

ಕೊವಿಡ್-19 ಸೋಂಕಿತರ ಮಸ್ತ್ ಡ್ಯಾನ್ಸ್:
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕಲಕೇರಿ ಕೊವಿಡ್-19 ಕೇರ್ ಸೆಂಟರ್ ನಲ್ಲಿ ಆರೋಗ್ಯಾಧಿಕಾರಿ ಸಂಜೀವ್ ಗಾಜೇಗೌಡ್ರ ಕೇಕ್ ಕತ್ತರಿಸಿದ ನಂತರದಲ್ಲಿ ಸೋಂಕಿತರ ಜೊತೆಗೆ ಮಸ್ತ್ ಡ್ಯಾನ್ಸ್ ಮಾಡಿದರು. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡಿಗೆ ಕೊರೊನಾವೈರಸ್ ಸೋಂಕಿತರೆಲ್ಲ ಸೇರಿಕೊಂಡು ಕುಣಿದು ಕುಪ್ಪಳಿಸಿದರು. ಆ ಮೂಲಕ ತಮ್ಮ ಹುಟ್ಟುಹಬ್ಬದ ದಿನವನ್ನು ಕೊವಿಡ್-19 ಸೋಂಕಿತರ ಮುಖದಲ್ಲಿ ನಗು ಮೂಡಿಸುವುದಕ್ಕೆ ಮೀಸಲಿಟ್ಟ ಆರೋಗ್ಯ ಅಧಿಕಾರಿಗಳಿಗೆ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳು ಮನಸಾರೆ ಹಾರೈಸಿದರು.
Recommended Video
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications