ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ
ಹಾವೇರಿ, ಅಕ್ಟೋಬರ್ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಹಾವೇರಿ, ಹುಬ್ಬಳ್ಳಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಪ್ಪಳ, ಬಳ್ಳಾರಿ, ಚಿಕ್ಕೋಡಿ, ಕಲಬುರಗಿ, ಬಾಗಲಕೋಟೆ ಸೇರಿ ಹಲವೆಡೆ ಭಾರೀ ಮಳೆಯಾಗಿದ್ದು, ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ.
ಸಂಜೆ ವೇಳೆ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಅಲ್ಲಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮತ್ತು ಬಳ್ಳಾರಿಯ ಬೈರಾಪುರದಲ್ಲಿ ಸಿಡಿಲಿಗೆ ತಲಾ ಇಬ್ಬರು ಮೃತಪಟ್ಟಿದ್ದಾರೆ.
ಕೊಪ್ಪಳದ ಗೆದಗೇರಿ ತಾಂಡಾದಲ್ಲಿ, ವಿಜಯಪುರದ ಹತ್ತಳ್ಳಿಯಲ್ಲಿ, ಬೆಳಗಾವಿಯ ಅಷ್ಟಗಾದಲ್ಲಿ ತಲಾ ಒಬ್ಬರು ಸಿಡಿಲಿಗೆ ಬಲಿಯಾಗಿದ್ದು, ಬೆಳಗಾವಿಯ ಚಿಕ್ಕ ಉಳ್ಳಿಗೇರಿಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಗಣೇಶ ನಗರ ಸಂಪೂರ್ಣ ಜಲಾವೃತವಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜರ ಪರದಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ-ಮುನವಳ್ಳಿ, ಸವದತ್ತಿ-ಬೈಲಹೊಂಗಲ ರಸ್ತೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಹಳ್ಳ-ಕೊಳ್ಳಗಳು ಭರ್ತಿಯಾಗಿವೆ. ಕೋರೇನಹಳ್ಳಿ ಗ್ರಾಮಕ್ಕೆ ನೀರು ನುಗ್ಗಿದ್ದು, ಬೆಳೆಗಳು ನಾಶವಾಗಿದೆ. ಬಾಗಲಕೋಟೆ ಜಿಲ್ಲೆಯ ತೇರದಾಳದಲ್ಲಿ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಗದಗ ಜಿಲ್ಲೆಯ ಹಲವೆಡೆ ತಡರಾತ್ರಿ ಹಾಗೂ ಬೆಳಗಿನ ಜಾವ ಬಾರಿ ಮಳೆಯಾಗಿದೆ. ಜಿಲ್ಲೆಯ ಲಕ್ಷ್ಮೇಶ್ವರ ಭಾಗದಲ್ಲಿ ಸುರಿದ ಮಳೆಗೆ ರಸ್ತೆಗಳೆಲ್ಲಾ ಜಲಾವೃತವಾಗಿವೆ.
ಲಕ್ಷ್ಮೇಶ್ವರ ಪಟ್ಟಣದ ಹಳೆ ಬಸ್ ನಿಲ್ದಾಣ ಬಳಿ, ಸೋಮೇಶ್ವರ ಟೆಂಪಲ್, ಹಳೆ ಸ್ಟೇಷನ್, ದೂದಪೀರ್ ನಾನಾ ದರ್ಗಾ ಭಾಗದ ರಸ್ತೆಗಳ ತುಂಬೆಲ್ಲಾ ಮಳೆನೀರು ನದಿಗಳಂತೆ ಹರಿದಿದೆ. ಸಾರ್ವಜನಿಕರು, ವಾಹನ ಸವಾರರು ಸಾಕಷ್ಟು ಪರದಾಡಿದ್ದಾರೆ. ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಲವು ಜಿಲ್ಲೆಗಳಲ್ಲಿ ಮಳೆ ಇನ್ನು ಮುಂದುವರೆದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications