ಹಾವೇರಿ: ಮಠದಲ್ಲೇ ನೇಣಿಗೆ ಶರಣಾದ ಸ್ವಾಮೀಜಿ
ಹಾವೇರಿ, ಜನವರಿ 08: ಹಾನಗಲ್ ತಾಲ್ಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ಸ್ವಾಮೀಜಿ ಒಬ್ಬರು ಮಠದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬಾಲೇಹೊಸೂರಿನ ದಿಂಗಾಲೇಶ್ವರ ಮಠದ ಶಾಖಾ ಮಠದ ಮಹಾಲಿಂಗೇಶ್ವರ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದು, ಇವರು ಕೆಲ ತಿಂಗಳುಗಳಿಂದ ಹುಲ್ಲತ್ತಿ ಗ್ರಾಮದ ಮಠದಲ್ಲೇ ವಾಸವಿದ್ದರು. ಭಾನುವಾರ ರಾತ್ರಿ ಸ್ವಾಮೀಜಿ ಅವರು ನೇಣಿಗೆ ಶರಣಾಗಿದ್ದು, ಸೋಮವಾರ ಬೆಳಿಗ್ಗೆ ವಿಷಯ ಬೆಳಕಿಗೆ ಬಂದಿದೆ.
'ನನ್ನ ಸಾವಿಗೆ ನಾನೇ ಕಾರಣ, ಬೇರೆ ಯಾರೂ ಕಾರಣರಲ್ಲ, ಮನಃ ಶಾಂತಿ ಇಲ್ಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಸ್ವಾಮೀಜಿ ಮರಣ ಪತ್ರ ಬರೆದಿಟ್ಟಿದ್ದಾರೆ.

'ನಾನು ಯಾವ ಭಕ್ತರಿಗೂ ಕೆಟ್ಟದ್ದು ಮಾಡಿಲ್ಲ, ನನ್ನ ಸಮಾಧಿಯನ್ನು ಇದೇ ಮಠದಲ್ಲಿ ಮಾಡಿ ಎಂದು ಡೆತ್ನೋಟ್ನಲ್ಲಿ ಸ್ವಾಮೀಜಿ ಹೇಳಿದ್ದಾರೆ. ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.












Click it and Unblock the Notifications