ಬಿಜೆಪಿ ಕಚೇರಿಯಲ್ಲಿ ಬಿ.ಸಿ.ಪಾಟೀಲ್ ಹೇಳಿದ ಎರಡನೇ ಹೆಂಡತಿಯ ಕಥೆ
ಹಾವೇರಿ, ನ 19: "ಅಧಿಕೃತವಾಗಿ ಬಿಜೆಪಿಗೆ ಬಂದು ಆರು ದಿನವಾಗಿದೆ. ನನಗೆ ಹೆಂಡತಿಯೇನೋ ಒಬ್ಬಳೇ, ಆದರೂ, ಇಬ್ಬರು ಹೆಂಡತಿಯರನ್ನು ಸಾಕುವಂತಾಗಿದೆ" ಎಂದು ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಹೇಳಿದರು.
ಹಿರೇಕೆರೂರು ಬಿಜೆಪಿ ಕಚೇರಿಯಲ್ಲಿ ಮಾತನಾಡುತ್ತಿದ್ದ ಕೌರವ ಪಾಟೀಲ್, "ಇಷ್ಟು ದಿನ ಕಾಂಗ್ರೆಸ್ ನಲ್ಲಿದ್ದೆ. ನಾನು ಮತ್ತು ನನ್ನ ಪ್ರತಿಸ್ಪರ್ಧಿಯಾಗಿದ್ದ ಬಣಕರ್ ಈಗ ಹೊಂದಿಕೊಂಡಿದ್ದೇವೆ. ಆದರೆ, ಕಾರ್ಯಕರ್ತರು ಇನ್ನೂ ಹೊಂದಿಕೊಳ್ಳಬೇಕಷ್ಟೆ" ಎಂದು ಪಾಟೀಲ್ ಹೇಳಿದರು.
"ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಇನ್ನೂ ಕಾಂಗ್ರೆಸ್, ಬಿಜೆಪಿ ಅನ್ನೋದು ಇದೆ. ಒಬ್ಬರ ಜೊತೆ ಮಾತನಾಡಿದರೆ, ಇನ್ನೊಬ್ಬರು ನನ್ನ ಬಳಿ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸುತ್ತಾರೆ" ಎಂದು ಬಿ.ಸಿ.ಪಾಟೀಲ್ ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.

"ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಇನ್ನೂ ಆಗಬೇಕಿದೆ. ಬಿಜೆಪಿಗೆ ಬಂದ ನಂತರ, ಒಂದು ರೀತಿಯಲ್ಲಿ ಇಬ್ಬರು ಹೆಂಡತಿಯರನ್ನು ನಿಭಾಯಿಸುವಂತಾಗಿದೆ" ಎಂದು ಪಾಟೀಲ್ ವ್ಯಂಗ್ಯವಾಡಿದ್ದಾರೆ.
"ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ ಎನ್ನುವುದಕ್ಕೆ ಉದಾಹರಣೆ, ನಾನು ಮತ್ತು ಬಣಕರ್ ಒಂದಾಗಿರುವುದು. ಕ್ಷೇತ್ರದಲ್ಲಿ ನಾವಿಬ್ಬರೂ ಒಂದಾಗಿರುವಾಗ, ನೀವೆಲ್ಲಾ (ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು) ಬೇರೆ ಬೇರೆಯಾಗಿವುದು ಬೇಡ" ಎಂದು ಪಾಟೀಲ್, ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಅನರ್ಹ ಶಾಸಕ ಬಿ.ಸಿ.ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ಹಿರೇಕೆರೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಾವಿರಾರು ಅಭಿಮಾನಿಗಳು ಭಾರತೀಯ ಜನತಾ ಪಕ್ಷ ಸೇರ್ಪಡಗೊಂಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications