ನಾಮಪತ್ರ ವಾಪಸ್ಗೆ ಜೆಡಿಎಸ್ ಅಭ್ಯರ್ಥಿ ಸ್ವಾಮೀಜಿ ಒಪ್ಪಿಗೆ: ಬಿಜೆಪಿಗೆ ನೆಮ್ಮದಿ
Recommended Video
ಹಿರೇಕೆರೂರು, ನವೆಂಬರ್ 20: ಹಿರೇಕೆರೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುವ ಮೂಲಕ ಅಚ್ಚರಿ ಮೂಡಿಸಿದ್ದ ರಟ್ಟೀಹಳ್ಳಿ ಕಬ್ಬಿಣಕಂಥಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತಮ್ಮ ಉಮೇದುವಾರಿಕೆ ಹಿಂಪಡೆಯಲು ನಿರ್ಧರಿಸಿದ್ದಾರೆ.
ಹಿರೇಕೆರೂರು ಕ್ಷೇತ್ರದಿಂದ ಜೆಡಿಎಸ್ ಮೊದಲು ಉಜಿನೆಪ್ಪ ಕೋಡಿಹಳ್ಳಿ ಅವರಿಗೆ ಟಿಕೆಟ್ ನೀಡಿತ್ತು. ಆದರೆ ಭಾನುವಾರ ರಾತ್ರಿ ಅಭ್ಯರ್ಥಿಯನ್ನು ಬದಲಿಸಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಟಿಕೆಟ್ ನೀಡಿ ಅಚ್ಚರಿ ನೀಡಿತ್ತು. ಸ್ವಾಮೀಜಿಗಳ ಸ್ಪರ್ಧೆ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಜತೆಗೆ ಅವರ ಭಕ್ತ ವರ್ಗದಿಂದ ತೀವ್ರ ವಿರೋಧ ಉಂಟಾಗಿತ್ತು.
ಸ್ವಾಮೀಜಿಗಳ ಸ್ಪರ್ಧೆ ಮುಖ್ಯವಾಗಿ ಬಿಜೆಪಿಗೆ ದೊಡ್ಡ ಆಘಾತವಾಗಿತ್ತು. ಕ್ಷೇತ್ರದ ಲಿಂಗಾಯತ ಮತಗಳು ಹಂಚಿಹೋಗುವುದರಿಂದ ಬಿಜೆಪಿಗೆ ಹಿನ್ನಡೆಯುಂಟಾಗುವ ಸಾಧ್ಯತೆ ಇತ್ತು. ನಾಮಪತ್ರ ವಾಪಸ್ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ್ ಅವರ ಹಾದಿಯನ್ನು ಸುಗಮಗೊಳಿಸುವಂತೆ ಸ್ವಾಮೀಜಿ ಅವರನ್ನು ಮನವೊಲಿಸಲು ಬಿಜೆಪಿ ಮುಖಂಡರು ಸತತ ಪ್ರಯತ್ನ ನಡೆಸಿದ್ದರು. ಸ್ವಾಮೀಜಿ ಅವರ ಸುತ್ತ ಆಕ್ರೋಶ ಹಾಗೂ ಆರೋಪಗಳು ವ್ಯಕ್ತವಾಗಿರುವುದರನ್ನು ಕಂಡು ಸ್ವತಃ ಎಚ್ ಡಿ ಕುಮಾರಸ್ವಾಮಿ ಅವರೇ ನಾಮಪತ್ರ ವಾಪಸ್ಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಗುರು ಪರಂಪರೆ ಪರಮೋಚ್ಛ
ಬುಧವಾರ ಅಥವಾ ಗುರುವಾರ ನಾಮಪತ್ರ ಹಿಂದಕ್ಕೆ ಪಡೆಯಲು ಸ್ವಾಮೀಜಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. 'ಗುರು ಪರಂಪರೆಯ ವೃತ್ತಿಯಲ್ಲಿ ಪರಮೋಚ್ಛ ಸ್ಥಾನಕ್ಕೆ ಬಂದಿದ್ದೇನೆ. ಈಗ ಅದಕ್ಕಿಂತ ದೊಡ್ಡ ಪದವಿ ಬೇಡ ಎನಿಸಿದೆ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಿಂದ ಹಿಂದೆ ಸರಿದಿದ್ದೇನೆ. ಹಿರಿಯ ಸ್ವಾಮೀಜಿಗಳ ಸಲಹೆಯಂತೆ ನಾಮಪತ್ರ ವಾಪಸ್ ಪಡೆದುಕೊಳ್ಳುವ ನಿರ್ಧಾರಕ್ಕೆ ಬಂದಿದ್ದೇನೆ' ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹಿರಿಯ ಸ್ವಾಮೀಜಿಗಳಿಂದ ಒತ್ತಡ
ಯಾರೇ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಯಾದರೂ, ಅಭಿವೃದ್ಧಿ ಕೆಲಸಗಳನ್ನು ಮಾಡುವ ಕಾರ್ಯಸೂಚಿಗೆ ಬದ್ಧರಾಗಿರುವುದಾಗಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಾಗಿ ಹೇಳಿದ್ದಾರೆ. ಬಳಿಕ ಕುಮಾರಸ್ವಾಮಿ ಮತ್ತು ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ನಡುವೆ ಚರ್ಚೆ ನಡೆದಿತ್ತು. ಅದರೊಟ್ಟಿಗೆ ಬಿಜೆಪಿ ನಾಯಕರು ಮತ್ತು ಹಿರಿಯ ಸ್ವಾಮೀಜಿಗಳಿಂದಲೂ ಶಿವಾಚಾರ್ಯ ಸ್ವಾಮೀಜಿಗಳ ಮೇಲೆ ಒತ್ತಡ ಬಂದಿತ್ತು ಎನ್ನಲಾಗಿದೆ.

ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸ್ವಾಮೀಜಿ
ಉಪ ಚುನಾವಣೆಯಲ್ಲಿ ಯಾವುದೇ ಸ್ವಾಮೀಜಿಗಳನ್ನು ಕಣಕ್ಕಿಳಿಸಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪಂಚಪೀಠಗಳ ಸ್ವಾಮೀಜಿಗಳು ಮನವಿ ಮಾಡಿದ್ದರು. ಈ ನಡುವೆ ಸ್ವಾಮೀಜಿ ಮಠದಲ್ಲಿ ಕಾಣಿಸದೆ ಇದ್ದದ್ದು ಆತಂಕಕ್ಕೆ ಕಾರಣವಾಗಿತ್ತು. ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿತ್ತು. ಬಿ.ಸಿ. ಪಾಟೀಲ್ ಅವರನ್ನು ಸೋಲಿಸಲು ಕೊನೆಯ ಕ್ಷಣದಲ್ಲಿ ಗೇಮ್ ಪ್ಲ್ಯಾನ್ ಬದಲಿಸಿದ್ದ ಕುಮಾರಸ್ವಾಮಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಸ್ವಾಮೀಜಿಗೆ ಟಿಕೆಟ್ ನೀಡಿದ್ದರು.

ಬಿಜೆಪಿಗೆ ಕೊನೆಗೂ ನೆಮ್ಮದಿ
ಸ್ವಾಮೀಜಿಗಳು ನಾಮಪತ್ರ ಹಿಂದಕ್ಕೆಪಡೆಯಲು ನಿರ್ಧರಿಸಿರುವುದು ಬಿಜೆಪಿಗೆ ನೆಮ್ಮದಿ ನೀಡಿದೆ. ಬಿಜೆಪಿಯಿಂದ ಕಣಕ್ಕಿಳಿದಿರುವ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಅವರಿಗೆ ಸ್ವಾಮೀಜಿಯ ಸ್ಪರ್ಧೆ ದೊಡ್ಡ ತಲೆನೋವಾಗಿತ್ತು. ಮತಗಳು ಹಂಚಿ ಹೋಗುವುದರಿಂದ ಸಮುದಾಯದ ಬಹುಪಾಲು ಮತಗಳನ್ನು ಕಳೆದುಕೊಳ್ಳುವ ಭೀತಿ ಬಿಜೆಪಿಗೆ ಎದುರಾಗಿತ್ತು. ಸ್ವಾಮೀಜಿಗಳ ಸ್ಪರ್ಧೆಗೆ ಭಕ್ತರಲ್ಲಿ ಪರ-ವಿರೋಧದ ಚರ್ಚೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮೀಜಿ ವಿರುದ್ಧ ಭಕ್ತರು ಕಿಡಿಕಾರಿದ್ದರು. ಸಂಸದ ಬಿವೈ ರಾಘವೇಂದ್ರ, ಮಾಜಿ ಸಚಿವ ಯು.ಬಿ. ಬಣಕಾರ ಸಂಧಾನಸಭೆ ನಡೆಸಿದ್ದರೂ ಫಲ ನೀಡಿರಲಿಲ್ಲ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications