Haveri: ಜಿಲ್ಲೆಯಲ್ಲಿ ಬೆಂಕಿ ಅವಘಡ ಹೆಚ್ಚಳ: ಅಗ್ನಿ ಶಾಮಕ ವಾಹನಗಳ ಕೊರತೆ, ಬೆಂಕಿ ನಂದಿಸುವುದೇ ಸವಾಲು
ಹಾವೇರಿ, ಮಾರ್ಚ್ 03: ರಾಜ್ಯದ ಮಧ್ಯ ಭಾಗದ ಜಿಲ್ಲೆಯಾದ ಯಾಲಕ್ಕಿ ಕಂಪನಿ ಹಾವೇರಿ ಜಿಲ್ಲೆಯು ಬೇಸಿಗೆಯಲ್ಲಿ ಪ್ರಮುಖ ಸಮಸ್ಯೆಯೊಂದನ್ನು ಎದುರಿಸುತ್ತಿದೆ. ಕೃಷಿ ಆಧಾರಿತ ಕುಟುಂಬಗಳು ಈ ಭಾಗದಲ್ಲಿ ಹೆಚ್ಚಿವೆ. ಬೇಸಿಗೆ ವೇಳೆ ಜಿಲ್ಲೆ ವ್ಯಾಪ್ತಿಯಲ್ಲಿ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಇಂತದ ಸಂದರ್ಭದಲ್ಲಿ ಸಕಾಲಕ್ಕೆ ತೆರಳಿ ಬೆಂಕಿ ನಂದಿಸುವುದೇ ಸವಾಲಾಗಿದೆ. ಏಕೆಂದರೆ ಇಲ್ಲಿ ಮೂಲಸೌಕರ್ಯ ಕೊರತೆ ತಾಂಡವವಾಡುತ್ತಿದೆ.
ಅಖಂಡ ಧಾರವಾಡದಿಂದ ಬೇರ್ಪಟ್ಟು ಪ್ರತ್ಯೇಕ ಜಿಲ್ಲೆಯಾಗಿ ದಶಕಗಳು ಕಳೆದರೂ ಇನ್ನೂ ಅಭಿವೃದ್ಧಿ ಎದುರು ನೋಡುತ್ತಿರುವ ಹಾವೇರಿ ಜಿಲ್ಲೆಯಲ್ಲಿ ಜಲವಾಹನ, ಅಗ್ನಿ ಶಾಮಕ ಸಿಬ್ಬಂದಿ ಕೊರತೆ ಇದೆ. ಹಾವೇರಿ ಜಿಲ್ಲೆಗೆ ಒಂದು, ಎಂಟು ತಾಲೂಕುಗಳಿಗೆ ಏಳು ಜಲ ವಾಹನಗಳನ್ನು ಮಾತ್ರವೇ ನೀಡಲಾಗಿದೆ. ಹೊಸದಾಗಿ ತಾಲೂಕು ಆದ ರಟ್ಟಿಹಳ್ಳಿಗೆ ಒಂದೂ ಅಗ್ನಿ ಆರಿಸುವ ಜಲ ವಾಹನ ಇಲ್ಲ ಎಂದು 'ಪ್ರಜಾವಾಣಿ' ವರದಿ ಮಾಡಿದೆ.

ಈ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ ಜಲ ವಾಹನಗಳ ಕೊರತೆ ಮಾತ್ರವಲ್ಲ, ರಕ್ಷಣಾ ಸಿಬ್ಬಂದಿ ಕೊರತೆ, ಠಾಣೆಗಳ ಕೊರತೆಯೂ ಇದೆ. ಹಾವೇರಿ ತಾಲೂಕು ಹೌದು. ಜಿಲ್ಲೆಯ ಒಟ್ಟು ಎಂಟು ತಾಲೂಕುಗಳಲ್ಲಿ ಅಗ್ನಿ ಅವಘಡ ನಡೆದರೆ, ಆಯಾ ವ್ಯಾಪ್ತಿಯಲ್ಲಿ ಒಂದೇ ಜಲವಾಹನವೇ ಹೋಗಿ ಬೆಂಕಿ ನಂದಿಸಬೇಕು. ಬೇಸಿಗೆ ಹಿನ್ನೆಲೆಯಲ್ಲಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಹೀಗಿದ್ದರೂ ಸರ್ಕಾರ ಜಲ ವಾಹನಗಳ ಕೊರತೆ ನೀಗಿಸುವ ಮನಸ್ಸು ಮಾಡಿಲ್ಲ.
2025ರಲ್ಲಿ ಈವರೆಗೆ ಅಂದರೆ ಎರಡೇ ತಿಂಗಳಲ್ಲಿ 290ಕ್ಕೂ ಹೆಚ್ಚು ಅಗ್ನಿ ಅವಘಡ ಸಂಭವಿಸಿವೆ. ಇಷ್ಟು ಅವಘಡಗಳಿಗೆ ಹಾಲಿ ವಾಹನಗಳು ಬೆಂಕಿ ನಂದಿಸುವ ಸವಾಲು ಎದುರಿಸುತ್ತಿವೆ. ಒಂದು ಕಡೆ ಬೆಂಕಿ ನಂದಿಸಲು ಹೋದಾಗ, ಅದೇ ಸಮಯದಲ್ಲಿ ಬೇರೆಡೆ ಅವಘಡ ಆದಾಗ ಸಮಸ್ಯೆ ಆಗುತ್ತಿದೆ. ರೈತರು ಮೇವು, ಬೆಳೆ ಕಳೆದುಕೊಳ್ಳುತ್ತಿದ್ದಾರೆ. ಹತ್ತಾರು ಎಕರೆ ಬೆಳೆ, ಪೈರು ನಾಶವಾಗುತ್ತಿದೆ. ಇದಕ್ಕೆ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಕಳೆದ ಬಾರಿ ಹಾವೇರಿ ಜಿಲ್ಲೆಯವರಾದ ಹಾಲಿ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರೇ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಆಗಲೂ ಸಿಎಂ ಸ್ವಕ್ಷೇತ್ರ ಶಿಗ್ಗಾವಿ ಒಂದಷ್ಟು ಯೋಜನೆಗಳು ಬಂದವು ಬಿಟ್ಟರೆ, ಹಾವೇರಿ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತಹ ಅಭಿವೃದ್ಧಿಗಳೇನು ಆಗಿಲ್ಲ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾರೆ. ಸಚಿವರು, ಶಾಸಕರಿದ್ದಾರೆ. ಜಿಲ್ಲೆಯ ರೈತರು, ಅಗ್ನಿ ಶಾಮಕ ದಳದ ಈ ಸಮಸ್ಯೆ ಬಗೆಹರಿಸಬೇಕಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications