ತಾನು ಕಲಿತ ಸರಕಾರಿ ಶಾಲೆ ಏಳ್ಗೆಗಾಗಿ 5 ಲಕ್ಷ ಕೊಡುಗೆ ನೀಡಿದವರ ಸ್ಫೂರ್ತಿಗಾಥೆ
ಹಾವೇರಿ, ಡಿಸೆಂಬರ್ 27: ತಾನು ಓದಿದ ಶಾಲೆಗೆ ಕೈಲಾದ ಸಹಾಯ ಮಾಡಬೇಕು ಎಂದು ಯೋಚಿಸುವವರು ಹಲವರು ಮಂದಿ. ಆದರೆ ಅದನ್ನು ಕಾರ್ಯರೂಪಕ್ಕೆ ತರುವವರು ಕೆಲವರು. ಹಾವೇರಿ ತಾಲೂಕಿನ ದೇವಗಿರಿಯ ಸರಕಾರಿ ಶಾಲೆಗೆ ಅಂಥ ವಿದ್ಯಾರ್ಥಿಯೊಬ್ಬರು ಸಿಕ್ಕಿದ್ದಾರೆ. ಅವರ ಹೆಸರು ನಾಗಪ್ಪ ವೀರಪ್ಪ ಬಕ್ಕಣ್ಣನವರ್.
ತುಂಬ ಅನುಕೂಲಸ್ಥ ಕುಟುಂಬದ ಹಿನ್ನೆಲೆಯವರೇನಲ್ಲ ನಾಗಪ್ಪ. ಶಾಲೆ ಕಲಿಯುವಾಗಲೂ ಕೃಷಿ ಕೂಲಿ ಕೆಲಸಗಾರರಾಗಿ ದುಡಿಯುತ್ತಾ ಓದು ಮುಗಿಸಿದವರು. ಅಷ್ಟೇ ಅಲ್ಲ, ಕಟ್ಟಡ ನಿರ್ಮಾಣ, ಸೆಕ್ಯೂರಿಟಿ ಗಾರ್ಡ್ ಹೀಗೆ ತನ್ನ ನಿತ್ಯದ ಖರ್ಚಿಗೆ ದಾರಿ ಸಿಗುವ ಯಾವ ಗೌರವಕ್ಕೆ ಚ್ಯುತಿ ಬಾರದ ಕೆಲಸವನ್ನು ಸಹ ಬಿಟ್ಟವರಲ್ಲ.
ಹೀಗೆ ಕಷ್ಟಪಟ್ಟು ಮಾಸ್ಟರ್ ಆಫ್ ಲೈಬ್ರರಿ ಅಂಡ್ ಇನ್ಫರ್ಮೇಷನ್ ಸೈನ್ಸ್ ಮತ್ತು ಪಿಎಚ್.ಡಿ ಮುಗಿಸಿದ್ದಾರೆ. ಸದ್ಯಕ್ಕೆ ಬೆಂಗಳೂರಿನ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ನಲ್ಲಿ ಉದ್ಯೋಗ. ಇಂಥ ನಾಗಪ್ಪನವರು ತಮ್ಮ ಊರಿನಲ್ಲಿರುವ ಸರಕಾರಿ ಹಿರಿಯ ಪ್ರಾಥಮಿ ಶಾಲೆಗಾಗಿ ಸ್ವಂತ ಹಣ ಐದು ಲಕ್ಷ ರುಪಾಯಿ ಖರ್ಚು ಮಾಡಿದ್ದಾರೆ.

ಸ್ಮಾರ್ಟ್ ಕ್ಲಾಸ್, ಸಿಸಿ ಟಿವಿ ಕ್ಯಾಮೆರಾ, ಪ್ರಿಂಟರ್, ಕಟ್ಟಡ ದುರಸ್ತಿ, ಒಳಾಂಗಣ ಇತ್ಯಾದಿ ಅನುಕೂಲಕ್ಕಾಗಿ ತಮ್ಮ ಶ್ರಮದ ಪಾಲು ಧಾರೆ ಎರೆದಿದ್ದಾರೆ. ಈ ಎಲ್ಲ ವ್ಯವಸ್ಥೆಗೆ ಈಚೆಗೆ ಚಾಲನೆ ಕೂಡ ನೀಡಲಾಗಿದೆ. ರೇವಣ್ಣಸಿದ್ದೇಶ್ವರ ಕೇದಾರನಾಥ ಸ್ವಾಮೀಜಿ, ಬಲ್ಳಾರಿಯ ವಿರೂಪಾಕ್ಷಪ್ಪ ಹಾಗೂ ನಾಗಪ್ಪನವರ ತಾಯಿ ಕಣ್ಣವ್ವ ಕೂಡ ಭಾಗಿಯಾಗಿದ್ದರು.

ನಾಗಪ್ಪ ತಮ್ಮದೇ ಒಂದು ಸಂಸ್ಥೆ ಮಾಡಿಕೊಂಡು, ಶನಿವಾರ-ಭಾರವಾರಗಳಂದು ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿ ನೀಡಲು ಸೆಷನ್ಸ್ ಗಳನ್ನು ನಡೆಸುತ್ತಾರೆ. ಇಂಥವರ ಸಂಖ್ಯೆ ಸಮಾಜದಲ್ಲಿ ಸಾವಿರವಾಗಲಿ. ತಾವು ಪಡೆದದ್ದನ್ನು ವಾಪಸ್ ಸಮಾಜಕ್ಕೆ ನೀಡುವವರಿಗೆ ಸ್ಫೂರ್ತಿ ಸಿಗಲಿ ಎಂಬುದು ನಮ್ಮ ಉದ್ದೇಶ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications