ಈ ಬಾರಿ ಯಾರಾಗುತ್ತಾರೋ ರಾಣೆಬೆನ್ನೂರಿನ ರಾಜ?
ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದರೆ, ಹಾವೇರಿ ಜಿಲ್ಲೆಯಲ್ಲೇ ಎರಡು ಕ್ಷೇತ್ರಗಳಲ್ಲಿ ಈ ಬಾರಿ ಮಧ್ಯಂತರ ಚುನಾವಣೆ ನಡೆಯುತ್ತಿದೆ. ಒಂದು ಹಿರೇಕೆರೂರು ಆದರೆ ಮತ್ತೊಂದು ಕ್ಷೇತ್ರವೇ ರಾಣೆಬೆನ್ನೂರು. ಬಿಜೆಪಿ, ಕಾಂಗ್ರೆಸ್ ಸಹವಾಸವೇ ಬೇಡ ಎಂದುಕೊಂಡ ಕ್ಷೇತ್ರದ ಮತದಾರರು ಕೆಪಿಜೆಪಿ ಅಭ್ಯರ್ಥಿಗೆ ಮತ ನೀಡಿದ್ದರು. 2019ರಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.
2018ರಲ್ಲಿ ರಾಣೆಬೆನ್ನೂರು ಮತದಾರರ ಮನಸು ಗೆದ್ದ ಶಾಸಕ ಆರ್.ಶಂಕರ್, ಈ ಬಾರಿ ಕಣದಲ್ಲಿಲ್ಲ. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿ ಕಾಂಗ್ರೆಸ್ ನತ್ತ ವಾಲಿದ್ದ ರಾಣೆಬೆನ್ನೂರಿನ ಶಾಸಕ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಜಿಗಿದರು. ಇದರಿಂದ ಅನರ್ಹಗೊಂಡ ಶಾಸಕ ಆರ್.ಶಂಕರ್, ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೂ ಕಳೆದುಕೊಂಡರು.
ಕಾಂಗ್ರೆಸ್ ಭದ್ರಕೋಟೆಯಾಗಿದ್ದ ರಾಣೆಬೆನ್ನೂರಿನಲ್ಲಿ ಕೆ.ಬಿ.ಕೋಳಿವಾಡ ಮೊದಲು ಶಾಸಕರಾಗಿದ್ದರು. ಆದರೆ, 2018ರಲ್ಲಿ ತಮ್ಮ ಸ್ಥಾನವನ್ನು ಕಳೆದಕೊಂಡ ಕಾಂಗ್ರೆಸ್ ಹಿರಿಯ ನಾಯಕ ಇದೀಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಅರುಣಕುಮಾರ್ ರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ. ಇನ್ನು ಜೆಡಿಎಸ್ ನಿಂದ ಮಲ್ಲಿಕಾರ್ಜುನಪ್ಪ ರುದ್ರಪ್ಪ ಹಲಗೇರಿ ಸ್ಪರ್ಧಿಸಿದ್ದಾರೆ.

ರಾಣೆಬೆನ್ನೂರು ಕ್ಷೇತ್ರಲ್ಲಿ ಒಟ್ಟು 14 ಅಭ್ಯರ್ಥಿಗಳಲ್ಲಿ ಉಮೇದುವಾರಿಕೆ ಸಲ್ಲಿಸಿದ್ದು ಪಕ್ಷೇತರರಾಗಿದ್ದ ಹನುಮಂತರಾಜು ಮಾದೇಗೌಡ ಚನ್ನಗೌಡ್ರ, ಜಗದೀಶ ಮಲ್ಲೇಶಪ್ಪ ಯಲಿಗಾರ, ಮೌಲಾಸಾಬ ಜಮಾಲಸಾಬ ಹಿತ್ತಲಮನಿ, ಹನುಮಂತಪ್ಪ ದೇವೇಂದ್ರಪ್ಪ ಕಬ್ಬಾರ ನಾಮಪತ್ರ ಹಿಂಪಡೆದಿದ್ದಾರೆ. ಅಶೋಕ ಕುಮಾರ ನಾಯಕ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿತ್ತು. ಅಂತಿಮವಾಗಿ 9 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.
ರಾಣೆಬೆನ್ನೂರು ಕ್ಷೇತ್ರಗಳಲ್ಲಿ ತೆರೆದ ಒಟ್ಟು ಮತಗಟ್ಟೆಗಳ ಸಂಖ್ಯೆ: 09
- ಅರುಣಕುಮಾರ ಮಹೇಶ್ವರಪ್ಪ ಗುತ್ತೂರ (ಬಿಜೆಪಿ),
- ಕೃಷ್ಣಪ್ಪ ಭೀಮಪ್ಪ ಕೋಳಿವಾಡ (ಭಾ.ರಾ.ಕಾಂಗ್ರೆಸ್)
- ಮಲ್ಲಿಕಾರ್ಜುನಪ್ಪ ರುದ್ರಪ್ಪ ಹಲಗೇರಿ (ಜೆ.ಡಿ.ಎಸ್),
- ಗೌತಮ ಶಿವಪ್ಪ ಕಾಂಬಳೆ(ಯುವ ಕರ್ನಾಟಕ ಪಕ್ಷ),
- ನಾಗಪ್ಪ ನೀಲಪ್ಪ ಸಂಶಿ(ಕರ್ನಾಟಕ ಜನತಾ ಪಕ್ಷ),
- ಈಶ್ವರ ಎಚ್.ಪಾಟೀಲ (ಉತ್ತಮ ಪ್ರಜಾಕೀಯ ಪಾರ್ಟಿ),
- ಡಾ.ಜಿ.ಎಂ.ಕಲ್ಲೇಶ್ವರಪ್ಪ (ಪಕ್ಷೇತರ),
- ಪ್ರವೀಣಕುಮಾರ ಎಂ.ಎಸ್.ಮಂಜುನಾಥ (ಪಕ್ಷೇತರ),
- ಶಿವಯೋಗಿಸ್ವಾಮಿ ಮಹಾನುಭಾವಿಮಠ(ಪಕ್ಷೇತರ)
ರಾಣೆಬೆನ್ನೂರು ಕ್ಷೇತ್ರಗಳಲ್ಲಿ ತೆರೆದ ಮತಗಟ್ಟೆಗಳ ವಿವರ:
ಒಟ್ಟು ಮತಗಟ್ಟೆಗಳ ಸಂಖ್ಯೆ: 266
ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳ ಸಂಖ್ಯೆ: 54
ಪಿಂಕ್ ಮತಗಟ್ಟೆಗಳ ಸಂಖ್ಯೆ: 1
ವಿಕಲಚೇತನ ಮತಗಟ್ಟೆ: 1
ಮಾದರಿ ಮತಗಟ್ಟೆ: 1
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಮತದಾರರ ವಿವರ:
ಒಟ್ಟು ಮತದಾರರ ಸಂಖ್ಯೆ: 2, 33, 137
ಮಹಿಳಾ ಮತದಾರರು: 1, 14, 497
ಪುರುಷ ಮತದಾರರು: 1, 18, 627
ಇತರೆ ಮತದಾರರು: 13
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾತಿವಾರು ಲೆಕ್ಕಾಚಾರ:
ಲಿಂಗಾಯತರು: 58, 505
ಮುಸ್ಲಿಂ: 36, 580
ಕುರುಬ: 34, 939
ಪರಿಶಿಷ್ಠ ಜಾತಿ: 32, 067
ಪರಿಶಿಷ್ಠ ಪಂಗಡ: 21, 000
ಇತರೆ: 50, 046
ಜಾತಿವಾರು ಲೆಕ್ಕಾಚಾರ:
ಕಳೆದ 2018ರ ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕ ಕೆ.ಬಿ.ಕೋಳಿವಾಡರೇ ತೀವ್ರ ಮುಖಭಂಗ ಅನುಭವಿಸಿದ್ದರು. ಕೆಪಿಜೆಪಿ ಅಭ್ಯರ್ಥಿ ಆರ್.ಶಂಕರ್ ವಿರುದ್ಧ ಸೋಲೊಪ್ಪಿಕೊಂಡಿದ್ದರು. ಕೆಪಿಜೆಪಿಯಿಂದ ಕಣಕ್ಕೆ ಇಳಿದಿದ್ದ ಆರ್.ಶಂಕರ್ 63 ಸಾವಿರದ 910 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ 59 ಸಾವಿರದ 575 ಮತಗಳನ್ನು ಪಡೆದು ಪರಾಭವಗೊಂಡಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications