ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದರೆ ಗ್ರಾಮ ಸ್ವರಾಜ್ಯ ಸಾಧ್ಯ: ಬೊಮ್ಮಾಯಿ
ಹಾವೇರಿ, ಜುಲೈ 30: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿದರೆ ಮಾತ್ರ ಗ್ರಾಮ ಸ್ವರಾಜ್ಯ ಮಾಡಲು ಸಾಧ್ಯವಾಗಲಿದೆ. ಸರ್ಕಾರ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಭಾನುವಾರ ಶಿಗ್ಗಾಂವಿ ಸವಣೂರು ಮತ ಕ್ಷೇತ್ರದಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ ನೇರವೆರಿಸಿ ಮಾತನಾಡಿದ ಅವರು, ಫೆಬ್ರವರಿ ತಿಂಗಳ ಬಜೆಟ್ ನಲ್ಲಿ ಶಿಗ್ಗಾವಿ ಸವಣೂರು ಕ್ಷೇತ್ರಕ್ಕೆ ಆರವತ್ತು ಲಕ್ಷಕ್ಕೂ ಹೆಚ್ಚು ಹಣ ನೀಡುವ ತಿರ್ಮಾನ ಮಾಡಿದ್ದೆವು. ಆದರೆ, ಈಗಿನ ಸರ್ಕಾರ ಅದನ್ನು ನಿಲ್ಲಿಸಿದೆ. ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ನೀಡಿರುವ ಅನುದಾನವನ್ನು ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ನಿಜವಾದ ಭಾರತದ ಸ್ವರಾಜ್ಯ ಗ್ರಾಮದಲ್ಲಿದೆ ಎನ್ನುವ ಗಾಂಧಿಜಿಯವರು ಕನಸು ಕಂಡಂತೆ ಗ್ರಾಮಗಳು ಅಭಿವೃದ್ಧಿಯಾದರೆ ಮಾತ್ರ ಭಾರತ ದೇಶವು ಅಭಿವೃದ್ಧಿ ಆದಂತೆ. ನಮ್ಮ ಅವಧಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ 250 ಕೋಟಿ ಅನುದಾನ ನೀಡಿದ್ದೇವು. ಆದರೆ, ಈ ಸರ್ಕಾರ ಆ ಅನುದಾನವನ್ನು ಸ್ಥಗಿತಗೊಳಿಸಿದೆ ಎಂದು ಕಿಡಿ ಕಾರಿದರು.
ರಾಜ್ಯದ ಪ್ರತಿ ಮನೆಗಳಿಗೆ ನಲ್ಲಿ ಮೂಲಕ ನೀರು ಒದಗಿಸಲು ನಾವು ಜಲಜೀವನ ಮಿಷನ್ ಜಾರಿ ಮಾಡಿದ್ದೆವು ಆದರೆ, ಈ ಸರ್ಕಾರ ಬಂದ ನಂತರ ಕುಂಠಿತಗೊಂಡಿದೆ. ನಾವು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೆ, ಈ ಸರ್ಕಾರ ಮಂದಗತಿಯಲ್ಲಿದೆ ಹೆಚ್ಚಿನ ಪ್ರಮಾಣದ ಹಣವನ್ನು ಬಿಡುಗಡೆ ಮಾಡಿದರೆ ಮಾತ್ರ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಸಾಧ್ಯ. ಅದನ್ನು ಸರ್ಕಾರ ಮಾಡಬೇಕು ಎಂದು ಹೇಳಿದರು.

ಹಾಲು ಉತ್ಪಾದಕರ ಬ್ಯಾಂಕ್ ಮಾಡಲು ಸಿಎಂ ಜತೆ ಮಾತುಕತೆ
ಹೈನುಗಾರಿಕೆ ರೈತರ ಅನೂಕೂಲಕ್ಕಾಗಿ ಹಾಲು ಉತ್ಪಾದಕರ ಬ್ಯಾಂಕ್ ಮಾಡಲು ರಾಜ್ಯ ಸರ್ಕಾರದ ಜೊತೆ ಚರ್ಚಿಸಲಾಗುವುದು. ಹಾಲು ಉತ್ಪಾದಕರ ಬ್ಯಾಂಕ್ ಮಾಡುವ ಕನಸು ಇತ್ತು. ಆದರೆ, ಮಾಡಲು ಆಗಲಿಲ್ಲ. ಹಾಲು ಉತ್ಪಾದನೆಯಿಂದ 20 ಸಾವಿರ ಕೋಟಿಗೂ ಅಧಿಕ ವ್ಯವಹಾರ ಆಗುತ್ತದೆ. ಹೆಚ್ಚು ಉತ್ಪಾದನೆ ಆಗಲೂ ಸಾಧ್ಯವಿದೆ ಎಂದು ಬಸವರಾಜ ಬೊಮ್ಮಾಯಿ ಹಾವೇರಿಯ ಸಮಾರಂಭವೊಂದರಲ್ಲಿ ತಿಳಿಸಿದರು.
ಹಾಲು ಉತ್ಪಾದಕರ ಬ್ಯಾಂಕ್ ಮಾಡುವ ಕನಸು ನನಸು ಮಾಡುವ ಉದ್ದೇಶ ಹೊಂದಿರುವ ಬಿಜೆಪಿ ಸರ್ಕಾರದ ಜೊತೆಗೆ ಚರ್ಚಿಸಲಿದ್ದೇವೆ. ಹೈನುಗಾರಿಕೆಯಲ್ಲಿ ದೊಡ್ಡ ಶಕ್ತಿ ಇದೆ. ಮನಸ್ಸು ಮುದಗೊಳಿಸುವ ಶಕ್ತಿ ಹಾಲಿನಲ್ಲಿದೆ. ಅಲ್ಕೊ ಹಾಲಿಗೆ ಕೊಡುವ ಆದ್ಯತೆಯನ್ನು ರೈತರ ಆರ್ಥಿಕ ಚೈತನ್ಯಕ್ಕೆ ಪೂರಕವಾಗುವ ಈ ಹಾಲಿಗೆ ದೊರೆಯಬೇಕು. ಹಾವೇರಿ ಜಿಲ್ಲೆಯ ಅಭಿವೃದ್ಧಿಯಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕು ಎಂದ ಅವರು ಆಶಯ ವ್ಯಕ್ತಪಡಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications