ಮೊದಲ ಎಂಟ್ರಿಯಲ್ಲೇ ಬಂಪರ್ ಹೊಡೆದ 'ಕೆಪಿಜೆಪಿ'
Recommended Video

ಬೆಂಗಳೂರು, ಜೂನ್ 06: ಒಂದು ಕಾಲದಲ್ಲಿ ಬೆಂಗಳೂರಿನ ಉಪಮೇಯರ್ ಆಗಿದ್ದ ಆರ್ ಶಂಕರ್ ಕೂಡಾ ಬಹುಶಃ ಸಚಿವರಾಗುವ ಕನಸು ಕಂಡಿರಲಿಕ್ಕಿಲ್ಲ.
ರಿಯಲ್ ಸ್ಟಾರ್ ಉಪೇಂದ್ರ ಅವರು ಕನಸು ಕಂಡಿದ್ದ ಸಿದ್ಧಾಂತ ಒಪ್ಪಿ, ಕರ್ನಾಟಕ ಪ್ರಜಾ ಜನತಾ ಪಕ್ಷ (ಕೆಪಿಜೆಪಿ) ಸ್ಥಾಪಕ ಮಹೇಶ್ ಗೌಡ ಅವರು ಕೈಜೋಡಿಸಿ ಸುದ್ದಿಯಾಗಿದ್ದರು. ನಂತರ ಇಬ್ಬರು ಬೇರ್ಪಟ್ಟು, ಉಪೇಂದ್ರ ಅವರು ಚುನಾವಣೆ ಕಣಕ್ಕಿಳಿಯದಿದ್ದರೆ, ಮಹೇಶ್ ಗೌಡ ಅವರ ಕೆಪಿಜೆಪಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು. ಹೀಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಿಂದ ನಿಂತ ಕೋಟ್ಯಧಿಪತಿ ಆರ್ ಶಂಕರ್ ಅವರು ಭರ್ಜರಿ ಜಯ ದಾಖಲಿಸಿ, ಶಾಸಕರಾದರು.

ಆಂಧ್ರಪ್ರದೇಶ ಮೂಲದವರಾದ ಆರ್. ಶಂಕರ್ ಅವರು ಮದುವೆಯಾದ ನಂತರ ಬೆಂಗಳೂರಿಗೆ ಬಂದವರು, 2004ರಲ್ಲಿ ಬೆಂಗಳೂರು ಬಿಬಿಎಂಪಿ ಸದಸ್ಯರಾಗಿ ಆಯ್ಕೆಯಾಗಿ ಉಪಮೇಯರ್ ಕೂಡಾ ಆಗಿದ್ದರು. 2008ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಗಳಿಸಿ ಸರ್ವಜ್ಞ ನಗರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.
ಕುರುಬ ಸಮಾಜದವರಾದ ಶಂಕರ್ ಅವರು ತಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಣೆಬೆನ್ನೂರು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು. 2012ರಲ್ಲಿ ವಲಸೆ ಬಂದರು. 2013ರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದು ಸೋಲು ಕಂಡರು. ಕುರುಬರ ಮತಗಳನ್ನು ಸೆಳೆದು,ಅಲ್ಪ ಮತಗಳ ಅಂತರದಿಂದ ಸೋಲುಕಂಡಿದ್ದರು. ಕಾಂಗ್ರೆಸ್ಸಿನ ಕೋಳಿವಾಡ ಜಯ ದಾಖಲಿಸಿದರು.
ಆದರೆ. ಸೋಲುಗಳನ್ನು ಗೆಲುವಿನ ಮೆಟ್ಟಿಲು ಮಾಡಿಕೊಂಡ ಉದ್ಯಮಿ ಶಂಕರ್ ಓದಿರುವುದು ಎಸ್ಎಸ್ ಎಲ್ಸಿ ತನಕ ಮಾತ್ರ. ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಸಂಬಂಧಿಯೂ ಆಗಿರುವ ಆರ್ ಶಂಕರ್ ಅವರು ಸಂಖ್ಯಾಬಲ ಮುಖ್ಯವಾದಾಗ, ಬೆಳಗ್ಗೆ ಬಿಜೆಪಿ ಸಂಜೆ ವೇಳೆ ಕಾಂಗ್ರೆಸ್ ಜತೆ ಗುರುತಿಸಿಕೊಂಡು, ಒಳ್ಳೆ ತಿರುವು ನೀಡಿದ್ದನ್ನು ಮರೆಯುವಂತಿಲ್ಲ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications