ಹಾವೇರಿ: ಪಟಾಕಿ ಗೋದಾಮಿಗೆ ಬೆಂಕಿ, ಮೂವರು ಸಜೀವ ದಹನ
ಹಾವೇರಿ, ಆಗಸ್ಟ್, 29: ಹಾವೇರಿ ನಗರ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿಗೆ ಬೆಂಕಿ ಬಿದ್ದಿದ್ದು, ಗೋದಾಮಿನಲ್ಲಿ 3 ಮೃತದೇಹಗಳು ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಣೇಶನ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವುಗಾಲೇ ಹಾವೇರಿಗರ ಪಾಲಿಗೆ ವಿಘ್ನವೊಂದು ಎದುರಾಗಿದೆ. ಪಟಾಕಿ ಹೊಡೆದು ಸಂಭ್ರಮ ಮಾಡಬೇಕೆಂದಿದ್ದ ಮಾಲೀಕರು & ಜನರು ಪಟಾಕಿ ಅವಘಡದಿಂದ ಅಕ್ಷರಸಃ ಬೆಚ್ಚಿಬಿದ್ದಿದ್ದಾರೆ. ಪಾಟಾಕಿ ಗೊಡೋನ್ಗೆ ಬೆಂಕಿ ಬಿದ್ದ ವೇಳೆ, ಗೋಡೋನ್ನಲ್ಲಿದ್ದ ಐವರ ಪೈಕಿ ಮೂವರು ಸಜೀವ ದಹನವಾಗಿ ಸುಟ್ಟು ಹೋಗಿದ್ದಾರೆ. ಇನ್ನು ಮನೆಯ ಮಕ್ಕಳನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಕುಮಾರ ಸಾತೇನಹಳ್ಳಿ ಎಂಬುವರಿಗೆ ಸೇರಿದ ಭೂಮಿಕಾ ಪಟಾಕಿ ಅಂಗಡಿಯ ಗೋದಾಮಿನಲ್ಲಿ ಬೆಂಕಿ ಬಿದ್ದಿದ್ದು, ಸುಮಾರು ಒಂದೂವರೆ ಕೋಟಿ ರುಪಾಯಿ ಮೌಲ್ಯದ ಪಟಾಕಿ ಸುಟ್ಟು ಹೋಗಿವೆ. ಇನ್ನು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವ ವೇಳೆ ನಾಪತ್ತೆಯಾಗಿದ್ದ ಐವರ ಪೈಕಿ ದ್ಯಾಮಪ್ಪ ಓಲೇಕಾರ, ರಮೇಶ್ ಬಾರ್ಕಿ ಹಾಗೂ ಶಿವಲಿಂಗ ಅಕ್ಕಿ ಎನ್ನುವ ಮೂವರ ಮೃತದೇಹಗಳು ಸಿಕ್ಕಿವೆ.
ದುರ್ಘಟನೆಯಲ್ಲಿ ಮೃತರಾದ ಮೂವರು ಕಾಟೇನಹಳ್ಳಿ ಗ್ರಾಮದ ನಿವಾಸಿಗಳು ಎನ್ನಲಾಗಿದ್ದು, ಮನೆ ಮಕ್ಕಳನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹೀಗೆ ಅಂಗಡಿಗೆ ಬಿದ್ದ ಒಂದೇ ಒಂದು ಕಿಡಿ ಕೊಟ್ಯಂತರ ರುಪಾಯಿ ಮೌಲ್ಯದ ಪಟಾಕಿಯ ಜೊತೆಗೆ ಮೂವರ ಪ್ರಾಣ ಹೊತ್ತೊಯ್ದಿದೆ. ಸದ್ಯ ಇನ್ನಿಬ್ಬರಿಗಾಗಿ ಸಿಬ್ಬಂದಿಯಿಂದ ಶೋಧ ಕಾರ್ಯ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಶಿವಕುಮಾರ ಗೂಣಾರೆ ಹಾಗೂ ಜಿಲ್ಲಾಧಿಕಾರಿ ರಘುನಂದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟಾಕಿ ಅಂಗಡಿ ಮತ್ತು ಗೋದಾಮಿನಲ್ಲಿ ಬೆಂಕಿ ಅವಘಡವಾಗಿದೆ. ಅದಕ್ಕೆ ಪರವಾನಗಿ ಇದಿಯೋ ಇಲ್ಲವೋ ಎನ್ನುವುದನ್ನು ತನಿಖೆ ಮಡುತ್ತಿದ್ದೇವೆ. ಈಗ ಸದ್ಯ ಮೃತದೇಹಗಳು ಸಿಕ್ಕಿವೆ. ಇನ್ನೂ ಕಾರ್ಯಾಚರಣೆ ನಡಿಯುತ್ತಿದೆ ಎಂದು ಎಸ್ಪಿ ಶಿವಕುಮಾರ್ ಗುಣಾರ್ ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications