ಹಾವೇರಿ: ಪಟಾಕಿ ದಾಸ್ತಾನು ಗೋದಾಮಿಗೆ ಬೆಂಕಿ, ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು
ಹಾವೇರಿ, ಆಗಸ್ಟ್, 29: ಪಟಾಕಿ ದಾಸ್ತಾನಿಗೆ ಬೆಂಕಿ ಹತ್ತಿದ ಘಟನೆ ಹಾವೇರಿ ಗ್ರಾಮಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಣಪತಿ ಹಬ್ಬದ ಹಿನ್ನೆಲೆ ಪಟಾಕಿಗಳನ್ನು ದೊಡ್ಡ ಮಟ್ಟದಲ್ಲಿ ದಾಸ್ತಾನು ಮಾಡಲಾಗಿತ್ತು. ಹಾವೇರಿ ನಗರ ಹೊರವಲಯದ ಸಾತೇನಹಳ್ಳಿ ಬಳಿ ಕುಮಾರ್ ಎಂಬುವವರಿಗೆ ಸೇರಿದ ಭೂಮಿಕಾ ಪಟಾಕಿ ಗೋದಾಮಿನಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ ಪಟಾಕಿ ದಾಸ್ತಾನು ಮಾಡಲಾಗಿತ್ತು. ಇದೀಗ ಏಕಾಎಕಿ ಅದಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣ ವಸ್ತುಗಳು ಬೆಂಕಿಗಾಹುತಿಯಾಗಿದೆ.

ನಂತರ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಎಂಟು ಆಗ್ನಿಶಾಮಕ ವಾನಗಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಅದೃಷ್ಟವಶಾತ್ ಒಳಗಡೆ ಇದ್ದ ಸಿಲಿಂಡರ್ ಹೊರಗಡೆ ತಂದಿದ್ದಕ್ಕೆ ಯಾವುದೇ ಅವಘಡ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ರೈಲಿನಲ್ಲಿ ಅಗ್ನಿ ಅವಘಡ
ಇನ್ನು ಇತ್ತೀಚೆಗಷ್ಟೇ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ರೈಲಿನ ಇಂಜಿನ್ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿಯಿಂದ ದಟ್ಟ ಹೊಗೆ ಆವರಿಸಿದ್ದು ಪ್ರಯಾಣಿಕರು ಆತಂಕಗೊಂಡಿದ್ದರು.
ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಬೆಂಕಿ ರೈಲಿನ ಎರಡು ಕೋಚ್ಗಳಿಗೆ ಆವರಿಸಿತ್ತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು. ನಾಲ್ಕೈದು ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರಲಿಲ್ಲ. ಇನ್ನು ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications