ಪಾಟೀಲ ಪುಟ್ಟಪ್ಪ ನಿಧನ: ಹುಟ್ಟೂರಲ್ಲಿ ಚಿರನಿದ್ರೆಗೆ ಜಾರಿದ ಪಾಪು...
ಹಾವೇರಿ/ಹುಬ್ಬಳ್ಳಿ, ಮಾರ್ಚ್ 17; ಸೋಮವಾರ ರಾತ್ರಿ ನಿಧರರಾದ ಹಿರಿಯ ಪತ್ರಕರ್ತ, ಸಾಹಿತಿ, ನಾಡೋಜ ಡಾಕ್ಟರ್ ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಸಂಜೆ ಜರುಗಿತು.
ರಾಣೆಬೆನ್ನೂರ ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಅಂತ್ಯ ಕ್ರೀಯೆಯನ್ನು ಲಿಂಗಾಯತ ವಿಧಿ ವಿಧಾನಗಳಂತೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೋಮ್ಮಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕೃಷಿ ಸಚಿವ ಬಿ.ಸಿ ಪಾಟೀಲ, ಕೂಡಲ ಸಂಗಮದ ಬಸವಮೃತ್ಯುಂಜಯ ಸ್ವಾಮೀಜಿ , ತರಳಬಾಳು ಶಾಖಾಮಠದ ಪಂಡಿತಾರಾದ್ಯ ಸ್ವಾಮೀಜಿ, ಮುಂಡರಗಿಯ ನಿಜಗುಣನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ ಗುತ್ತೂರ, ಜಿ.ಪಂ ಅಧ್ಯಕ್ಷ ಬಸನಗೌಡ ದೇಸಾಯಿ, ಮಾಜಿ ಸಚಿವರಾದ ಹೆಚ್.ಕೆ.ಪಾಟೀಲ, ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಿ.ಹೆಚ್.ಬನ್ನಿಕೋಡ, ಮಾಜಿ ಸಂಸದ ಐ.ಜಿ.ಸನದಿ ಸೇರೊದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು

ಸರ್ಕಾರಿ ಗೌರವ ಸಮರ್ಪಣೆ
ಹಿರಿಯ ಪತ್ರಕರ್ತ, ನಾಡೋಜ ಡಾ. ಪಾಟೀಲ ಪುಟ್ಟಪ್ಪನವರ ಪಾರ್ಥಿವ ಶರೀರಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಯು ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಅಗಲಿದ ಮಹಾಚೇತನಕ್ಕೆ ಗೌರವ ಸಲ್ಲಿಸಿದವು.

ಸಂಘದ ಆವರಣದಲ್ಲಿ ಅಂತಿಮ ದರ್ಶನ
ಮಧ್ಯಾಹ್ನ 1 ಗಂಟೆಗೆ ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಅವರ ಸ್ವಗೃಹ ಪ್ರಪಂಚದಿಂದ ಅವರ ಕರ್ಮಭೂಮಿ, ಕಾರ್ಯಕ್ಷೇತ್ರ, ಕಳೆದ 5 ದಶಕಗಳಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ನಾಡು ನುಡಿಗೆ ಸೇವೆ ಸಲ್ಲಿಸಿದ ಅವರ ನೆಚ್ಚಿನ ಸಂಘದ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿತ್ತು.

ರಾಷ್ಟ್ರಗೀತೆಯೊಂದಿಗೆ ನಮನ
ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್, ಅವಳಿ ನಗರ ಪೆÇಲೀಸ್ ಆಯುಕ್ತ ಆರ್. ದಿಲೀಪ್, ಎಸ್ ಪಿ ವರ್ತಿಕಾ ಕಟಿಯಾರ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಡಿಸಿಪಿ ಕೃಷ್ಣಕಾಂತ ಸೇರಿದಂತೆ ಹಲವು ಗಣ್ಯರು ಪುಷ್ಪ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು. ಪೆÇಲೀಸ್ ಬ್ಯಾಂಡ್ನವರು ಶಿಸ್ತು ಬದ್ಧವಾಗಿ ರಾಷ್ಟ್ರಗೀತೆಯೊಂದಿಗೆ ಗಾಳಿಯಲ್ಲಿ ಮೂರು ಸುತ್ತು ಕುಶಾಲ ತೋಪು ಹಾರಿಸಿ ಶತಾಯುಷಿ ಪಾಟೀಲ ಪುಟ್ಟಪ್ಪ ಅವರಿಗೆ ಅರ್ಥಪೂರ್ಣ ನಮನ ಸಲ್ಲಿಸಿದರು.

ಗಣ್ಯರಿಂದ ಅಂತಿಮ ನಮನ
ಹಿರಿಯ ಸಾಹಿತಿಗಳಾದ ಡಾ. ಚೆನ್ನವೀರ ಕಣವಿ, ಡಾ. ಮಾಲತಿ ಪಟ್ಟಣಶೆಟ್ಟಿ, ಡಾ.ಗುರುಲಿಂಗ ಕಾಪಸೆ, ಡಾ. ಸೋಮಶೇಖರ ಇಮ್ರಾಪೂರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ವಿಜ್ಞಾನಿ ಡಾ. ಎಸ್.ಎಮ್. ಶಿವಪ್ರಸಾದ, ಕರ್ನಾಟಕ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳಾದ ಶಿವಣ್ಣ ಬೆಲ್ಲದ, ಪ್ರಕಾಶ ಉಡಿಕೇರಿ, ಬಸವಪ್ರಭು ಹೊಸಕೇರಿ, ವಿಶ್ವೇಶ್ವರಿ ಹಿರೇಮಠ, ಬಸವಲಿಂಗಯ್ಯ ಹಿರೇಮಠ, ಕೃಷ್ಣ ಜೋಶಿ, ನಿಂಗಣ್ಣ ಕುಂಟಿ, ಬೇಂದ್ರೆ ಸ್ಮಾರಕ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ, ಗುಬ್ಬಚ್ಚಿಗೂಡು ಪತ್ರಿಕೆಯ ಶಂಕರ ಹಲಗತ್ತಿ ಮತ್ತಿತರರು ಉಸ್ಥಿತರಿದ್ದರು. ಮಧ್ಯಾಹ್ನ 2 ಗಂಟೆಗೆ ಧಾರವಾಡದಿಂದ ಅಮರ ಘೋಷಣೆಗಳೊಂದಿಗೆ ಪಾಪು ಅವರ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ರಾಣೆಬೆನ್ನೂರು ತಾಲೂಕಿನ ಹಲಗೇರಿಗೆ ಗೌರವಪೂರ್ವಕವಾಗಿ ಬೀಳ್ಕೊಡಲಾಗಿತ್ತು
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications