ಉಕ್ರೇನ್ನಲ್ಲಿ ಸಾವನ್ನಪ್ಪಿದ್ದ ನವೀನ್ ಮೃತದೇಹ ಸಿಕ್ಕಿದೆ: ಸಿಎಂ ಬೊಮ್ಮಾಯಿ
ಹಾವೇರಿ, ಮಾರ್ಚ್ 8: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ವೇಳೆ ರಷ್ಯಾದ ಶೆಲ್ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದ ಕರ್ನಾಟಕದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿಯ ನವೀನ್ ಮೃತದೇಹ ಸಿಕ್ಕಿದೆ ಎಂದು ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಿಎಂ ಬೊಮ್ಮಾಯಿ, "ಉಕ್ರೇನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಯುದ್ಧ ಇನ್ನೂ ನಡೆಯುತ್ತಿದೆ," ಎಂದು ಹೇಳಿದರು.
"ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ," ಎಂದು ತಿಳಿಸಿದರು.

ಹದಿಮೂರನೇ ದಿನವೂ ಉಕ್ರೇನ್- ರಷ್ಯಾ ಯುದ್ಧ ನಡೆಯುತ್ತಿದೆ. ಜೊತೆಗೆ ಉಕ್ರೇನ್ನಲ್ಲಿ ರಷ್ಯಾ ಶೆಲ್ ದಾಳಿ ನಡೆಸುತ್ತಿದೆ. ಅದು ನಿಂತ ಮೇಲೆ ಮೃತ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತ್ರವಲ್ಲದೆ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ವಿವಿಧ ರಾಜಕೀಯ ನಾಯಕರು ಚಳಗೇರಿಯ ನವೀನ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ನವೀನ್ ಕುಟುಂಬಸ್ಥರು ಮಾತ್ರ ನವೀನ್ ಮೃತದೇಹವಾದರೂ ಭಾರತಕ್ಕೆ ಮರಳಬೇಕು ಎಂಬ ಇಚ್ಛೆ ವ್ಯಕ್ತಪಡಿಸಿದ್ದಾರೆ. ಆದರೆ, ಅದು ಸಾಧ್ಯವೇ ಇಲ್ಲವೇ ಎಂಬ ಬಗ್ಗೆ ಹಲವು ರಾಜಕಾರಣಿಗಳು ಹೇಳಿಕೆ ನೀಡುತ್ತಿದ್ದರು. ಸರ್ಕಾರ ತನ್ನ ಪ್ರಯತ್ನ ತಾನು ಮಾಡುತ್ತಿದೆ ಎಂದು ಹೇಳುತ್ತಲೇ ಬಂದಿತ್ತು.

ಉಕ್ರೇನ್ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ನವೀನ್ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ನವೀನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಜೊತೆಗೆ ನವೀನ್ ತಂದೆಗೆ 25 ಲಕ್ಷ ರೂ. ಪರಿಹಾರ ಚೆಕ್ ನೀಡಿದ್ದರು.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಮೃತರಾದ ಚಳಗೇರಿ ಗ್ರಾಮದ ನವೀನ್ ಗ್ಯಾನಗೌಡ್ರ ನಿವಾಸಕ್ಕೆ ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಭೇಟಿ ನೀಡಿ ನವೀನ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ, ಕುಟುಂಬದವರಿಗೆ ಸಾಂತ್ವನ ಮತ್ತು ಧೈರ್ಯ ತುಂಬಿದ್ದಾರೆ.

ಉಕ್ರೇನ್ ದೇಶದ ಕಾರ್ಕಿವ್ನಲ್ಲಿ 4ನೇ ವರ್ಷದ ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದ ನವೀನ್ ಗ್ಯಾನಗೌಡ್ರ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ತರಲು ಹೋಗಿದ್ದ ಸಂದರ್ಭದಲ್ಲಿ ರಷ್ಯಾ ಸೇನೆಯ ಶೆಲ್ ದಾಳಿಗೆ ಬಲಿಯಾಗಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications