ಕೊಲೆ ಮಾಡಿದವರನ್ನು ಶೂಟೌಟ್ ಮಾಡಬೇಕು; ಮುಂದೆ ಏನಾಗುತ್ತೆ ನೋಡೋಣ- ಬಸವರಾಜ ಹೊರಟ್ಟಿ
ಹಾವೇರಿ, ಜುಲೈ, 30: ಹಾವೇರಿಯಲ್ಲಿ ಬಿಜೆಪಿ ಎಂಎಲ್ಸಿ ಬಸವರಾಜ ಹೊರಟ್ಟಿ ಅವರು ಪ್ರವೀಣ್ ಹತ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕರಾವಳಿಯಲ್ಲಿ ನಡೆದ ಘಟನೆಗಳು ನಮ್ಮ ರಾಜ್ಯಕ್ಕೆ ನೋವು ತರುವ ಸಂಗತಿಯಾಗಿದೆ. ಮೇಲಿಂದ ಮೇಲೇ ಈ ರೀತಿ ಘಟನೆಗಳು ನಡೆಯುತ್ತಿವೆ. ಇಂಟಲಿಜೆನ್ಸ್ನವರು ಮೊದಲೇ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ಕೊಡಬೇಕು. ಇಂತಹ ಘಟನೆಗಳು ಮತ್ತೆ ಆಗಬಾರದು ಎಂದರು.
ಇಂಟಲಿಜೆನ್ಸ್ನವರು ಮುಂದೆ ಏನಾಗುತ್ತದೆ ಎಂದು ಮಾಹಿತಿ ಸಂಗ್ರಹಿಸಿ ಸಿಎಂಗೆ ಕೊಡಬೇಕು. ನಾನು ಹಿಂದೆ ಒಮ್ಮೆ ಇಸ್ರೇಲ್ಗೆ ಹೋಗಿದ್ದಾಗ ಅಲ್ಲಿ ಬೆಳಗ್ಗೆ 9ಕ್ಕೆ ಬಾಂಬ್ ಬ್ಲಾಸ್ಟ್ ಆಗಿದ್ದು, ಸಂಜೆನೇ ಆರೋಪಿಗಳನ್ನು ನೇಣಿಗೆ ಹಾಕಿದರು. ಇಂತಹ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ಆದರೆ, ಇಂತಹ ಪ್ರಕರಣದಲ್ಲಿ ಇಲ್ಲಿ ಶಿಕ್ಷೆ ಆಗಿದ್ದು ಇದುವರೆಗೂ ನಮಗೆ ಗೊತ್ತೇ ಇಲ್ಲ. ಆ ರಿಪೋರ್ಟ್, ಅದು ಇದು ಅಂತ ಅನ್ನೋಷ್ಟತ್ತಿಗೆ ಜನರು ಮರೆತು ಬಿಡುತ್ತಾರೆ. ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯಬಾರದು. ಈ ತಪ್ಪು ಮಾಡಿರುವುದಕ್ಕೆ ಇಂಥಹ ಶಿಕ್ಷೆ ಕೊಟ್ಟರು ಅಂತ ಜನರಿಗೆ ಗೊತ್ತಾಗಬೇಕು ಎಂದರು.

ವಿಪಕ್ಷಗಳ ಜೊತೆ ಸಭೆ ಮಾಡಿ:
ರಾಜಕೀಯಕ್ಕಾಗಿ ಪರಸ್ಪರ ಟೀಕೆ ಮಾಡುವುದಕ್ಕಿಂತ ಎಲ್ಲರೂ ರಾಜ್ಯದ ಶಾಂತಿಯನ್ನು ಕಾಪಾಡಬೇಕು. ವಿರೋಧ ಪಕ್ಷದವರು ಬರೀ ಟೀಕೆ ಮಾಡುತ್ತಾ ಕುಳಿತುಕೊಂಡರೆ ಯಾವುದೇ ಕೆಲಸಗಳು ಆಗುವುದಿಲ್ಲ. ಸಿಎಂ ವಿರೋಧ ಪಕ್ಷದವರನ್ನು ಕರೆದು ಒಂದು ಸಭೆ ಮಾಡಿ ಮಾತಾಡಬೇಕು.

ಯೋಗಿ ಸರ್ಕಾರದ ಬಗ್ಗೆ ಗೊತ್ತಿಲ್ಲ:
ರಾಜ್ಯದಲ್ಲಿ ಯೋಗಿ ಮಾದರಿ ಸರ್ಕಾರ ತರುವ ವಿಚಾರವಾಗಿ ಮಾತನಾಡಿದ ಅವರು, "ನಾನು ಯೋಗಿನೂ ನೋಡಿಲ್ಲ, ಮತ್ತೊಬ್ಬನನ್ನೂ ನೋಡಿಲ್ಲ". ಈ ತಪ್ಪು ಮಾಡಿದವರಿಗೆ ಇಂತಹ ಶಿಕ್ಷೆ ಆಯಿತು ಅಂತ ಮಾದ್ಯಮಗಳಿಗೆ ಗೊತ್ತಾಗಬೇಕು. ಈಗ ಸತ್ತವರು ಮುಗ್ದರು, ಅವರು ಏನು ಮಾಡಿದ್ದಾರೆ? ಎರಡೂ ಜಾತಿಯವರು ಸತ್ತಿದ್ದಾರೆ. ಯಾವುದೇ ಪಕ್ಷದಲ್ಲಿ, ಅಥವಾ ಸಂಘಟನೆಯಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಕೊಲೆ ಮಾಡುವ ಹಂತಕ್ಕೆ ಹೋಗಬೇಡಿ, ಅದು ಸರಿಯಲ್ಲ ಎಂದರು. ಹೈದರಾಬಾದ್ನಲ್ಲಿ ನಮ್ಮ ಸಜ್ಜನ್ ಶೂಟೌಟ್ ಮಾಡಲಿಲ್ಲವಾ? ಆ ರೀತಿ ಶೂಟೌಟ್ ಮಾಡಬೇಕು. ಮುಂದೆ ಏನು ಆಗುತ್ತೆ ನೋಡೋಣ. ಇಂತಹ ಸಂದರ್ಭದಲ್ಲಿ ಪೊಲೀಸರು ಹೀಗೆ ಮಾಡಿದರೆ ನಾನು ಅದನ್ನು ತಪ್ಪು ಅನ್ನುವುದಿಲ್ಲ. ಆದರೆ ಇದಕ್ಕೆ ಸಿಎಂ ಗಟ್ಟಿ ನಿರ್ಧಾರ ಮಾಡಬೇಕು," ಎಂದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications