ಹಾವೇರಿ ಜಿಲ್ಲೆ ಹಳ್ಳಿಯ ಪ್ರತಿಭೆ ಈಗ ಭಾರತೀಯ ವಾಯುಪಡೆ ಪೈಲಟ್
ಹಾವೇರಿ, ಮೇ 31: ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಯುವಕನೊಬ್ಬ ಭಾರತೀಯ ವಾಯಪಡೆ ಪೈಲಟ್ ಆಗಿ ಆಯ್ಕೆಯಾಗಿದ್ದು, ಗ್ರಾಮೀಣ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ.
ಭಾರತೀಯ ವಾಯಪಡೆ ಪೈಲಟ್ ಆಗಿ ಆಯ್ಕೆಗೊಳ್ಳುವ ಮೂಲಕ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಹೊಸಳ್ಳಿ ಗ್ರಾಮದ ಪುನೀತ್ ಬಣಕಾರ್, ಹಾವೇರಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
2019ರಲ್ಲಿ ಯುಪಿಎಸ್ಸಿ (ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಪರೀಕ್ಷೆಯ 140ನೇ ಬ್ಯಾಚ್ನಲ್ಲಿ ತೇರ್ಗಡೆ ಹೊಂದಿ ವಾಯಪಡೆ ಪೈಲಟ್ ಹುದ್ದೆಗೆ ಆಯ್ಕೆಯಾಗಿದ್ದರು.

ಮಹಾರಾಷ್ಟ್ರದ ಪುಣೆ ಕಡಕ ವಾಸ್ಲಾದಲ್ಲಿ ವಾಯುಪಡೆ ಪೈಲಟ್ 3 ವರ್ಷಗಳ ತರಬೇತಿ ಪಡೆದಿದ್ದಾರೆ. ಮೇ 29 ರಂದು ನಡೆದ ಪಾಸಿಂಗ್ ಔಟ್ ಪರೇಡ್ನಲ್ಲಿ ಮತ್ತೊಮ್ಮೆ ತೇರ್ಗಡೆ ಹೊಂದಿದ್ದು, ವಿಶೇಷ ತರಬೇತಿ ಪಡೆಯಲು ಹೈದರಾಬಾದ್ಗೆ ತೆರಳಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೆಚ್ಚುಗೆ
"ನಮ್ಮ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ ಪ್ರತಿಭಾವಂತ ಯುವಕನೊಬ್ಬ ವಾಯುಪಡೆ ಫೈಟರ್ ಪೈಲಟ್ ಹುದ್ದೆಗೆ ನೇಮಕಗೊಂಡಿರುವುದು ನಮ್ಮ ಕರ್ನಾಟಕಕ್ಕೆ ಅತ್ಯಂತ ಹೆಮ್ಮೆಯ ವಿಷಯ. ನಿಮ್ಮ ಮುಂದಿನ ದಿನಗಳಿಗೆ ಶುಭವಾಗಲಿ ಪುನೀತ್ ಬಣಕಾರ'' ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಬಿ.ವೈ ವಿಜಯೇಂದ್ರ ಶ್ಲಾಘನೆ
"ಎಷ್ಟೇ ಅಡಚಣೆಗಳಿರಲಿ, ಸತತ ಪರಿಶ್ರಮ, ಸಾಧಿಸುವ ಛಲ, ಧೈರ್ಯವಿದ್ದರೆ ಏನನ್ನಾದರೂ ಸಾಧಿಸಬಹುದು ಎನ್ನಲು ನಮ್ಮ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ ಹೊಸಳ್ಳಿ ಗ್ರಾಮದ ಪುನೀತ ಬಣಕಾರ ನಿದರ್ಶನವಾಗಿದ್ದಾರೆ. ಅಪ್ಪಟ ಹಳ್ಳಿಯ ಪ್ರತಿಭಾವಂತ ಯುವಕನೊಬ್ಬ ವಾಯುಪಡೆ ಫೈಟರ್ ಪೈಲಟ್ ಹುದ್ದೆಗೆ ನೇಮಕಗೊಂಡಿರುವುದು ಹೆಮ್ಮೆಯ ವಿಷಯ. ಶುಭವಾಗಲಿ ಪುನೀತ್'' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಶ್ಲಾಘಿಸಿದ್ದಾರೆ.
Recommended Video
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications