ರಾಣೇಬೆನ್ನೂರು ಕದನ: ನದಿ ಪಾತ್ರದ ಮತದಾರರೇ ನಿರ್ಣಾಯಕ
ಹಾವೇರಿ, ನವೆಂಬರ್ 28: ರಾಣೇಬೆನ್ನೂರು ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಪ್ರಸಿದ್ದ. ಜಿಲ್ಲೆಯ ವಾಣಿಜ್ಯ ನಗರಿ ಎಂದು ಕರೆಯಿಸಿಕೊಳ್ಳವ ರಾಣೇಬೆನ್ನೂರಲ್ಲಿ ಈಗ ವಿಧಾನಸಭಾ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಲವು ರಾಜ್ಯಮಟ್ಟದ ನಾಯಕರು ಈಗಾಗಲೇ ಹಲವು ಸುತ್ತಿನ ಪ್ರಚಾರವನ್ನು ಮಾಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ,
ರಾಣೇಬೆನ್ನೂರು ಕ್ಷೇತ್ರ ಅನಾವಶ್ಯಕವಾಗಿ ಉಪ ಚುನಾವಣೆಯನ್ನು ಎದುರಿಸುವ ಸ್ಥಿತಿ ಎದುರಾಗಿದೆ. ಕ್ಷೇತ್ರದ ಜನರೂ ಕೂಡಾ ಉಪ ಕದನಕ್ಕೆ ಸಜ್ಜಾಗಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳಿಗೆ ಈಗ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ ಆತಂಕ ಹೆಚ್ಚಾಗಿದೆ.
೨೦೧೮ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೆಪಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಆರ್.ಶಂಕರ್ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ನ ಕೆ.ಬಿ.ಕೋಳಿವಾಡ ಅವರನ್ನು 4 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ಬಿಜೆಪಿ ಅಭ್ಯರ್ಥಿ ಬಸವರಾಜ ಕೇಲಗಾರ 3ನೇ ಸ್ಥಾನ ಪಡೆದಿದ್ದರು.

ಈಗ ಮತ್ತೊಮ್ಮೆ ಚುನಾವಣೆ ಬಂದಿದೆ, ಆದರೆ ಕಳೆದ ಬಾರಿ ಸ್ಪರ್ಧಿಸಿದವರಲ್ಲಿ ಕೋಳಿವಾಡರೊಬ್ಬರೇ ಇರುವುದು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಯನ್ನು ಬದಲಿಸಿವೆ. ಕಳೆದ ಬಾರಿಯ ವಿಜೇತ ಶಾಸಕ ಆರ್, ಈ ಬಾರಿ ಸ್ಪರ್ಧಿಸಿಲ್ಲ, ಬದಲಾಗಿ ಬಿಜೆಪಿ ಸೇರಿ ಪಕ್ಷದ ಅಭ್ಯರ್ಥಿಗೆ ಬೆಂಬಲಿಸಲಿದ್ದಾರೆ.
ಇಲ್ಲಿ ಯಾವುದೇ ಚುನಾವಣೆ ನಡೆದರೂ ತುಂಗಭದ್ರಾ ನದಿ ತೀರದ ಮತದಾರರೇ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ನದಿ ತಟದ ಜನರು ಯಾರ ಕೈ ಹಿಡಿಯುತ್ತಾರೋ ಅವರ ಗೆಲುವು ಶತಸಿದ್ದ. ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿರುವುದರಿಂದ ಚುನಾವಣೆಯಲ್ಲಿ ನಿರ್ಣಾಯಕವಾಗಲಿದ್ದಾರೆ.
15 ಕ್ಕೂ ಹೆಚ್ಚೂ ಗ್ರಾಮಗಳು ತುಂಗಭದ್ರಾ ನದಿ ದಡದಲ್ಲಿವೆ. ಇಲ್ಲಿ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತದೆ. ಅವರ ಒಲವನ್ನು ಯಾರು ಗಳಿಸುತ್ತಾರೋ ನೋಡಬೇಕು. ಮರಳುಗಾರಿಕೆಗೆ ಯಾರು ಸಹಕರಿಸುತ್ತಾರೋ ಅವರ ಕೈ ಹಿಡಿಯಲಿದ್ದಾರೆ ಇಲ್ಲಿನ ಮತದಾರರು.
ಕಾಂಗ್ರೆಸ್ ನಿಂದ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಬಿಜೆಪಿಯಿಂದ ಅರುಣ್ ಕುಮಾರ್ ಪೂಜಾರ್, ಜೆಡಿಎಸ್ ನಿಂದ ಮಲ್ಲಿಕಾರ್ಜುನ ಹಲಗೇರಿ ಉಪ ಚುನಾವಣಾ ಕಣದಲ್ಲಿದ್ದಾರೆ. ಡಿಸೆಂಬರ್ 05 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications