ರಾಜ್ಯ ಹೆದ್ದಾರಿ ಅಗಲೀಕರಣ; ಧರೆಗುರುಳಿದ ಶತಮಾನದ ಮರಗಳು
ರಾಣೆಬೆನ್ನೂರು, ಜನವರಿ 28: ರಾಜ್ಯ ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿ ಬೆಳೆದು ನಿಂತಿದ್ದ ಶತಮಾನದ ನೂರಾರು ಮರಗಳನ್ನು ಕಡಿಯಲಾಗಿದೆ. ಒಂದು ಕಡೆ ಸರ್ಕಾರ ಅರಣ್ಯ ಕಾಪಾಡಬೇಕು, ಸಸ್ಯಗಳನ್ನು ನೆಡಬೇಕು ಎಂದು ಹೇಳುತ್ತಿದ್ದರೆ, ಇತ್ತ ಅದೇ ಸರ್ಕಾರ ರಸ್ತೆ ಅಗಲೀಕರಣ ನೆಪದಲ್ಲಿ ಮರಗಳಿಗೆ ಕೊಡಲಿ ಏಟು ನೀಡಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮಾರ್ಗವಾಗಿ ತೆರಳುವ ಸಮ್ಮಸಗಿ-ಬಿಳಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿ ಅಗಲೀಕರಣದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ತಾಲ್ಲೂಕಿನ ದೇರವರಗುಡ್ಡ ಹತ್ತಿರದ ರಸ್ತೆಯ ಬದಿಯಲ್ಲಿದ್ದ ನೂರಾರು ಗಿಡಗಳನ್ನು ಧರೆಗುರುಳಿಸಲಾಗಿದೆ.
ರಾಣೇಬೆನ್ನೂರು ಮಾರ್ಗವಾಗಿ ದೇವರಗುಡ್ಡ, ಹೊನ್ನತ್ತಿ, ಗುತ್ತಲ ಹಾಗೂ ಮೈಲಾರ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಗಿಡಗಳನ್ನು ಹಲವು ಸುಮಾರು ವರ್ಷಗಳ ಹಿಂದೆ ನೆಡಲಾಗಿತ್ತು.

ಇವುಗಳಿಂದ ದೇವರಗುಡ್ಡ, ಹೊನ್ನತ್ತಿ ಹಾಗೂ ಮೈಲಾರಲಿಂಗೇಶ್ವರ ದೇವಸ್ಥಾನಗಳಿಗೆ ಹೋಗುವ ಭಕ್ತರು ಮರಗಳ ಕೆಳಗೆ ವಿಶ್ರಾಂತಿಗೆ ನಿಲ್ಲುತ್ತಿದ್ದರು. ಆದರೆ ಈಗ ರಸ್ತೆ ನಿರ್ಮಾಣದ ನೆಪದಲ್ಲಿ ನೂರಾರು ಗಿಡಗಳನ್ನು ಕಡಿಯುವ ಮೂಲಕ ರಸ್ತೆಯ ಪಕ್ಕದಲ್ಲಿ ನೆರಳು ಕಾಣದಾಗಿದೆ. ಈ ರೀತಿಯಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಹಲವು ಮರಗಳನ್ನು ಕಡಿದು ಸಾಗಿಸಲಾಗಿದ್ದು, ಉಳಿದ ಮರಗಳನ್ನು ಸ್ಥಳಾಂತರ ಅಥವಾ ಮರಗಳನ್ನು ಮಧ್ಯ ಭಾಗದಲ್ಲಿ ಬರುವ ರೀತಿಯಾಗಿ ಮಾಡಬೇಕು ಎಂದು ಕೆಲ ಪರಿಸರ ಪ್ರೇಮಿಗಳು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡುತ್ತಿದ್ದಾರೆ. ಆದರೆ ಈಗಾಗಲೇ ಮರಗಳನ್ನು ಗುತ್ತಿಗೆ ತೆಗೆದುಕೊಂಡು ಸರ್ಕಾರಕ್ಕೆ ಹಣ ನೀಡಿ ತೆರವು ಮಾಡಲಾಗುತ್ತಿದೆ ಎಂದು ರಸ್ತೆ ಉಸ್ತುವಾರಿ ಎಂಜಿನಿಯರ್ ಹೇಳಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications