Shiggaon By Election: ಕಾಂಗ್ರೆಸ್ನಿಂದ ಕೊನೆಗೂ ಶಿಗ್ಗಾವಿ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಅನೌನ್ಸ್
ಬೆಂಗಳೂರು, ಅಕ್ಟೋಬರ್ 24: ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಕೊನೆಗೂ ಟಿಕೆಟ್ ಘೋಷಿಸಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಅಹ್ಮದ್ ಪಠಾಣ್ ಅವರಿಗೆ ಗುರುವಾರ ಟಿಕೆಟ್ ನೀಡಿದೆ. ಈ ಮೂಲಕ ಆರನೇ ಬಾರಿ ಅಲ್ಪ ಸಂಖ್ಯಾತ ಸಮುದಾಯಕ್ಕೆ ಚುನಾವಣೆಗೆ ಅವಕಾಶ ನೀಡಿದಂತಾಗಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಜೊತೆಗೆ ಮೂರು ಉಪ ಚುನಾವಣೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಧಿಕೃತ ಘೋಷಣೆ ಆದಂತಾಗಿದೆ. ಜಾತಿ ಲೆಕ್ಕಾಚಾರದಲ್ಲಿ ಇಲ್ಲಿ ಪಂಚಮಸಾಲಿ ಸಮುದಾಯದ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ಕುಲಕರ್ಣಿ ಅವರಿಗೆ ನೀಡಲಿದೆ ಎಂಬ ಮಾತು ಕೇಳಿ ಬಂದಿತ್ತು.

ಈ ಹಿಂದಿನಿಂದ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿಕೊಂಡು ಬರಲಾಗಿತ್ತು. ಇಲ್ಲಿ ಮುಸ್ಲಿಂರು ಸೇರಿದಂತೆ, ಕುರುಬರು ಹಾಗೂ ಲಿಂಗಾಯತ ಮತಗಳು ನಿರ್ಣಾಯಕವಾಗಿವೆ. ಇದನ್ನು ಅರಿತು ಕೊನೆಗೂ ಅಲ್ಪಸಂಖ್ಯಾತ ನಾಯಕನಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಶಿಗ್ಗಾವಿಯಲ್ಲಿ ಬಿಜೆಪಿಯಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದಾರೆ. ಇವರು ಲಿಂಗಾಯತ ಸಮುದಾಯವಾಗಿದ್ದರಿಂದ ಅವರ ಮತ ಒಡೆಯಲು ಕಾಂಗ್ರೆಸ್ ಪ್ಲಾನ್ ಮಾಡಿತ್ತು ಎನ್ನಲಾಗಿದೆ. ಹೀಗಾಗಿಯೇ ಪಂಚಮಸಾಲಿ ಅಭ್ಯರ್ಥಿ ಹುಡುಕಾಟ ನಡೆಸಲಾಗಿತ್ತು ಎಂಬ ಮಾಹಿತಿ ಇದೆ. ಕೊನೆಗೆ ಅಲ್ಪ ಸಂಖ್ಯಾತ ನಾಯಕರಿಗೆ ಟಿಕೆಟ್ ನೀಡುವ ಮೂಲಕ ಹೊಸ ರಣತಂತ್ರ ರೂಪಿಸಲಾಗಿದೆ.
ಅಕ್ಟೋಬರ್ 25 ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಳೆ ಶುಕ್ರವಾರ ಭರತ್ ಬೊಮ್ಮಾಯಿ ಬೃಹತ್ ರೋಡ್ ಶೋ ಮೂಲಕ ಯಡಿಯೂರಪ್ಪ ಹಾಗೂ ಇತರ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇತ್ತ ಕಾಂಗ್ರೆಸ್ನಿಂದ ಯಾಸಿರ್ ಅಹಮ್ಮದ್ ಪಠಾಣ್ ಅವರಿಗೆ ಟಿಕೆಟ್ ಪಕ್ಕಾ ಆಗುತ್ತಿದ್ದಂತೆ ನಾಳೆ ಅವರು ಸಹ ಪ್ರಮುಖ ನಾಯಕರ ಜೊತೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಚನ್ನಪಟ್ಟಣಕ್ಕೂ ಅಭ್ಯರ್ಥಿ ಫೈನಲ್
ಬಿಜೆಪಿಯಿಂದ ಕಾಂಗ್ರೆಸ್ ಸೇರಿದ ಸಿಪಿ ಯೋಗೇಶ್ವರ ಅವರನ್ನು ಪಕ್ಷ ಚನ್ನಪಟ್ಟಣದ ಅಭ್ಯರ್ಥಿಯಾಗಿಸಿದೆ. ಇಂದೇ ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದೆ. ಇದು ಹೈವೋಲ್ಟೇಜ್ ಕ್ಷೇತ್ರವಾಗಿದೆ. ಪ್ರಮುಖ ಪಕ್ಷಗಳಿಂದ ಮೂರು ಉಪ ಚುನಾವಣಾ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಆಗಿದೆ. ಇನ್ನೇನಿದ್ದರೂ ಭರ್ಜರಿ ಪ್ರಚಾರ, ಗೆಲುವಿಗೆ ಸೂಕ್ತ ತಂತ್ರ ಹೆಣೆದಿದ್ದು, ಬಹುಮತ ಗಳಿಸಲು ಸಜ್ಜಾಗಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications