Shiggaon Victory: ಅಲುಗಾಡಿದ ಬಿಜೆಪಿ ಭದ್ರಕೋಟೆ, ಕಾಂಗ್ರೆಸ್ಗೆ ಭರ್ಜರಿ ಜಯ
ಹಾವೇರಿ, ನವೆಂಬರ್ 23: ಬಹುನಿರೀಕ್ಷೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ 2024 ಫಲಿತಾಂಶ ಪ್ರಕಟವಾಗಿದೆ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಲ್ಪಸಂಖ್ಯಾತ ನಾಯಕ ಯಾಸಿರ್ ಖಾನ್ ಪಠಾಣ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಹೀನಾಯ ಸೋಲಾಗಿದೆ. ಈ ಮೂಲಕ ದಶಕಗಳಿಂದ ಬಿಜೆಪಿ ತೆಕ್ಕೆಯಲ್ಲಿದ್ದ ಭದ್ರಕೋಟೆ ಅಲುಗಾಡಿದೆ.
ಬಿಜೆಪಿ ವಿರುದ್ಧ ನಿರಂತರವಾಗಿ ಸೋಲುಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು ಮರಳಿ ಯತ್ನ ಮಾಡಿದ್ದರ ಫಲವಾಗಿ ಈ ಬಾರಿಯ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಕಳೆದ ಬಾರಿ ಅಪ್ಪ ಬಸವರಾಜ ಬೊಮ್ಮಾಯಿ ವಿರುದ್ಧ ಸೋತು, ಇದೀಗ ಪುತ್ರನ ವಿರುದ್ಧ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದ್ದಾರೆ.

ಶಿಗ್ಗಾವಿಯಲ್ಲಿ ಸತತ ಏಳನೇ ಸುತ್ತಿನಿಂದಲೇ ಯಾಸಿರ್ ಖಾನ್ ಪಠಾಣ್ ಅವರು ಮುನ್ನಡೆ ಸಾಧಿಸುತ್ತಾ ಬಂದರು. ಬೆಳಗ್ಗೆ 11.30 ಗಂಟೆವರೆಗೆ 75,780 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇತ್ತ ಭರತ್ ಬೊಮ್ಮಾಯಿ ಅವರು 67,784 ಮತಗಳಿಂದ ಹಿಂದುಳಿದಿದ್ದಾರೆ. ಒಟ್ಟಾರೆ ಶಿಗ್ಗಾವಿಯಲ್ಲಿ ಸುಮಾರು 09 ಸಾವಿರ ಮತಗಳ ಅಂತರದಿಂದ ಗೆಲ್ಲುವು ಪಡೆದುಕೊಂಡಿದ್ದಾರೆ. ಈ ಕುರಿತು ರಾಜ್ಯ ಚುನಾವಣೆ ಆಯೋಗದಿಂದ ಅಧಿಕೃತ ಮಾಹಿತಿ ಬರಬೇಕಿದೆ.
ಚನ್ನಪಟ್ಟಣ ಕ್ಷೇತ್ರ ಬಿಟ್ಟರೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರ ಕಾಂಗ್ರೆಸ್-ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಇದೀಗ ಇಲ್ಲಿ ಬಿಜೆಪಿಯು ಹಿಡಿತ ತಪ್ಪಿದ್ದು, ಕಾಂಗ್ರೆಸ್ ತನ್ನ ಭಾವುಟ ಹಾರಿಸಿ ಪ್ರಾಬಲ್ಯ ಸಾಧಿಸಲು ಸಜ್ಜಾಗಿದೆ. ಈ ಮೂಲಕ ಸತತ ಐದನೇ ಭಾರಿಗೆ ಶಿಗ್ಗಾವಿಯು ಬಿಜೆಪಿ ಪಾಲಾಗುವುದನ್ನು ಕಾಂಗ್ರೆಸ್ ತಪ್ಪಿಸುವಲ್ಲಿ ಯಶಸ್ವಿಯಾಗಿದೆ.
ಯಾಸಿರ್ ಖಾನ್ ಪಠಾಣ್ ಗೆ ಗೆಲುವು
ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ ಅವರಿಗೆ ಸೋಲಾಗುತ್ತಿದ್ದಂತೆ ಯಾಸಿರ್ ಖಾನ್ ಪಠಾಣ್ ಬೆಂಬಲಿಗರು, ಕಾರ್ಯಕರ್ತರ ಸಂಭ್ರಮು ಮುಗಿಲು ಮುಟ್ಟಿದೆ. ಕಾಂಗ್ರೆಸ್ ಭಾವುಟಗಳು ರಾರಾಜಿಸಿವೆ.
2008 ರಿಂದಲೂ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರೇ ಗೆದ್ದುಕೊಂಡು ನಾಲ್ಕು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಐದನೇ ಭಾರಿಗೆ ಪುತ್ರ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಿದ್ದರು. ಆದರೆ ಅವರಿಗೆ ಅದೃಷ್ಟ ಕೈಕೊಟ್ಟಿದ್ದು, ಕಳೆದ ಬಾರಿ ಸೋತಿದ್ದ ಯಾಸಿರ್ ಖಾನ್ ಪಠಾಣ್ ಅವರು ಈ ಬಾರಿ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಪ್ರಾಬಲ್ಯ ಅಂತ್ಯ ಕಂಡಿದೆ.
ಈ ಕ್ಷೇತ್ರದಲ್ಲಿ ವಿವಿಧ ಜಾತಿಗಳು ಸೇರಿದಂತೆ ಲಿಂಗಾಯತ ಮತಗಳು ಹೆಚ್ಚಿದ್ದು, ಅವರೇ ಮೊದಲಿಗರಾದರೆ, ನಂತರದ ಸ್ಥಾನದಲ್ಲಿ ಮುಸ್ಲಿಂ ಮತಗಳು ಹೆಚ್ಚಿವೆ. ಈ ಕಾರಣಕ್ಕೆ ಪಂಚಮಸಾಲಿ ನಾಯಕರನ್ನು ಕಣಕ್ಕಿಳಿಸಲು ಹುಡುಕಾಟ ನಡೆಸಿದ್ದ ಕಾಂಗ್ರೆಸ್ ಕೊನೆಗೆ ಆರನೇ ಬಾರಿಗೆ ಅಲ್ಪಸಮುದಾಯ ನಾಯಕರಿಗೆ ಮಣೆ ಹಾಕಿತು. ಉಪ ಚುನಾವಣೆ ಟಿಕೆಟ್ ನೀಡಿತು. ಒಟ್ಟಾರೆ ಕಾಂಗ್ರೆಸ್ ಪ್ಲಾನ್ ಉಪಚುನವಣೆ ಮಟ್ಟಿಗೆ ಸಕ್ಸಸ್ ಕಂಡಿದೆ.
ಬಿಜೆಪಿ ಭದ್ರಕೋಟೆ ಒಡೆದ ಕಾಂಗ್ರೆಸ್ ಪಠಾಣ್
ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕೊನೆಯ 18ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಮಧ್ಯಾಹ್ನ 1 ಗಂಟೆಗೆ ಹೊತ್ತಿಗೆ ಮತದಾನ ಪೂರ್ಣವಾಯಿತು. ಬಿಜೆಪಿ ಭದ್ರಕೋಟೆಯನ್ನು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಒಡೆದಿದ್ದಾರೆ. ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಕಾಂಗ್ರೆಸ್ 13,448 ಅಂತರದಲ್ಲಿ ಗೆದ್ದಿದೆ. ಬಿಜೆಪಿ ಅಭ್ಯರ್ಥಿಗೆ 86960 ಮತಗಳು ಬಂದರೆ, ಕಾಂಗ್ರೆಸ್ ಅಭ್ಯರ್ಥಿಗೆ 1,00,587 ಮತಗಳು ಬಂದಿವೆ. ಬಹುಮತದಿಂದ ಕಾಂಗ್ರೆಸ್ ಶಿಗ್ಗಾವಿಯನ್ನು ತನ್ನದಾಗಿಸಿಕೊಂಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications