ಶಿಗ್ಗಾವಿ ಉಪಚುನಾವಣೆ: ಶೇ.10.8ರಷ್ಟು ಮತದಾನ, ಅಪ್ಪ-ಮಗನಿಂದ ಮತ ಚಲಾವಣೆ
ಹಾವೇರಿ, ನವೆಂಬರ್ 13: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಚುನಾವಣೆ ನಡೆಯುತ್ತಿದೆ. ಎಲ್ಲ ವಯೋಮಾನದವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಬೆಳಗ್ಗೆ 9 ಗಂಟೆವರೆಗೆ ಬರೋಬ್ಬರಿ ಶೇಕಡಾ 10.8ರಷ್ಟು ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಯಿತು. ಆರಂಭದಲ್ಲಿಯೇ ವ್ಹೀಲ್ ಚೇರಿನಲ್ಲಿ ವೃದ್ಧರು ಸಮೀಪದ ಮತಗಟ್ಟೆಗಳಿಗೆ ಬಂದು ಮತದಾನ ಮಾಡಿದ್ದಾರೆ. ಎಲ್ಲ ವಿಧದ ವಯೋಮಾನದವರು ಕ್ಷೇತ್ರದಲ್ಲಿ ಮತಗಟ್ಟೆಗಳಿಗೆ ಬಂದು, ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದರ ಪರಿಣಾಮವಾಗಿ ಕೇವಲ ಎರಡು ಗಂಟೆಗಳಲ್ಲಿ ಶೇಕಡಾ 10.8ರಷ್ಟು ಮತದಾನ ನಡೆಯಿತು.

ಎಲ್ಲ ಮತಗಟ್ಟೆಗಳ ಭಾಗದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಲಿಂಗಾಯತರು ಹಾಗೂ ನಂತರದ ಸ್ಥಾನದಲ್ಲಿ ಮುಸ್ಲಿಮರು ಹೆಚ್ಚಿರುವ ಈ ಕ್ಷೇತ್ರದಲ್ಲಿ ಗೆಲುವು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ಪ್ರಚಾರ ಕಾರ್ಯದಲ್ಲಿದ್ದಾಗ ಕೇಳಿ ಬಂದ ಆರೋಪ, ಪ್ರತ್ಯಾರೋಪಗಳು ನೋಡಿದರೆ, ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್, ಅಭಿವೃದ್ಧಿ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಎಂಬಂತಾಗಿತ್ತು.
ಇಲ್ಲಿ ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಅವರು ಬಿಜೆಪಿಯಿಂದ ಹಾಗೂ ಕಾಂಗ್ರೆಸ್ನಿಂದ ಯಾಸೀರ್ ಖಾನ್ ಪಠಾಣ್ ಅವರು ಸ್ಫರ್ಧಿಸಿದ್ದಾರೆ.
ಮತದಾನಕ್ಕೂ ಮೊದಲು ಕ್ಷೇತ್ರದ ವಿವಿಧ ದೇವಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತ್ತು ಪುತ್ರ ಭರತ್ ಬೊಮ್ಮಾಯಿ ದೇವರಲ್ಲಿ ಪ್ರಾರ್ಥಿಸಿದರು. ವಿಶೇಷ ಪೂಜೆ ನೆರವೇರಿಸಿ, ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.
ಎಲ್ಲರು ಮತದಾನ ಹಕ್ಕು ಚಲಾಯಿಸಿ
ಮತದಾನ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಲ್ಲರು ಮತದಾನ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಈ ಬಾರಿಯು ಉಪಚುನಾವಣೆಯಲ್ಲಿ ತಮ್ಮ ಪುತ್ರ ಭರತ್ ಬೊಮ್ಮಾಯಿ ಭಾರಿ ಬಹುಮತಗಳಿಂದ ಗೆಲ್ಲುವ ವಿಶ್ವಾಸ ಅವರು ವ್ಯಕ್ತಪಡಿಸಿದ್ದಾರೆ.
ಇತ್ತ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಟಾಂಗ್ ಕೊಟ್ಟ ಅವರು, ವಿಧಾನಸೌಧದ ಬಾಗಿಲು ಹಾಕಿಕೊಂಡು ಇಲ್ಲಿಗೆ ಚೀಲದಲ್ಲಿ ಹಣತಂದು ರಾಜಕೀಯ ಮಾಡಿದವರಿಗೆ ಕ್ಷೇತ್ರ ಮತದಾರರು ಬುದ್ಧಿಕಲಿಸುತ್ತಾರೆ ಎಂದು ನಾನು ನಂಬಿದ್ದೇನೆ. ಜನರು ಅಭಿವೃದ್ಧಿಪರವಾಗಿದ್ದಾರೆ ಎಂದು ಅವರು ಆಡಳಿತ ಪಕ್ಷ ಕಾಂಗ್ರೆಸ್ಗೆ ತಿವಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications