ಡ್ರಗ್ಸ್ ಬಗ್ಗೆ ಮತ್ತೊಂದು ಆಘಾತಕಾರಿ ಸುದ್ದಿ ತಿಳಿಸಿದ ಪ್ರಮೋದ್ ಮುತಾಲಿಕ್
ಹಾವೇರಿ, ಸೆಪ್ಟೆಂಬರ್ 2: ಸ್ಯಾಂಡಲ್ ವುಡ್ ಕೆಲ ನಟ ನಟಿಯರ ಡ್ರಗ್ಸ್ ಸೇವನೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿ, ಡ್ರಗ್ ಮಾಫಿಯಾ ಜೊತೆ ಸೆಕ್ಸ್ ಮಾಫಿಯಾ ಕೂಡಾ ರಾಜ್ಯದಲ್ಲಿ ಸಕ್ರಿಯವಾಗಿದೆ ಎಂಬ ಆಘಾತಕಾರಿ ಸುದ್ದಿ ಹೊರಹಾಕಿದರು.
ಇದರ ಬಗ್ಗೆ 2009 ರಲ್ಲೇ ನಾನು ಸರ್ಕಾರದ ಗಮನಕ್ಕೆ ತಂದಿದ್ದೆ, ಅಂದು ಇಡೀ ದೇಶದಲ್ಲಿ ನನ್ನನ್ನು ಟಾರ್ಗೆಟ್ ಮಾಡಿದರು. ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಕ್ರಿಯವಾಗಿದೆ ಎಂದರು.
ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್, ""ಡ್ರಗ್ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಹೀರೋ ಆಗೋಕೆ ಹೊರಟಿದ್ದಿರಲ್ಲ. ನಿಮ್ಮ ಅಕ್ಕ ಗೌರಿ ಲಂಕೇಶ್ ಡ್ರಗ್ ಅಡಿಕ್ಟ್ ಆದಾಗ ನೀವು ಎಲ್ಲಿ ಹೋಗಿದ್ರಿ? ಅಂದು ಯಾಕೆ ಈ ವಿಚಾರದ ಬಗ್ಗೆ ನೀವು ಮಾತನಾಡಲಿಲ್ಲ? ಗೌರಿ ಲಂಕೇಶ್ರನ್ನು ಸುಧಾರಿಸುವ ಪ್ರಯತ್ನ ಏಕೆ ಮಾಡಲಿಲ್ಲ?'' ಎಂದು ಪ್ರಶ್ನಿಸಿದರು.

ಆದರೆ ಇಂದು ನಟ-ನಟಿಯರ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ? ಇಂತಹ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಹೆಸರು ತೆಗೆದುಕೊಳ್ಳುವ ಅವಶ್ಯಕತೆ ಏನಿತ್ತು. ಸರ್ಜಾ ಫ್ಯಾಮಿಲಿ ಉತ್ತಮ ಸಂಸ್ಕಾರದಿಂದ ಬಂದಿರುವ ಫ್ಯಾಮಿಲಿ ಎಂದು ಸರ್ಜಾ ಕುಟುಂಬದ ಬೆನ್ನಿಗೆ ಪ್ರಮೋದ್ ಮುತಾಲಿಕ್ ನಿಂತರು.
ಈ ಡ್ರಗ್ ಮಾಫಿಯಾದಲ್ಲಿ ಮುಖ್ಯವಾಗಿ ಪೊಲೀಸರು, ರಾಜಕಾರಣಿಗಳು ಭಾಗಿಯಾಗಿದ್ದು, ಡ್ರಗ್ಸ್ ಬಗ್ಗೆ ಪೊಲೀಸ್ ಇಲಾಖೆಗೆ ಇಂಚಿಂಚೂ ಮಾಹಿತಿ ಇರುತ್ತದೆ. ಬೆಂಗಳೂರಿನ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಇದರಲ್ಲಿ ಇದ್ದಾನೆ ಎಂಬ ಆರೋಪ ಮಾಡಿದರು.
ನಮ್ಮ ಕೈಯಲ್ಲಿ ಹುಡುಕುವುದಕ್ಕೆ ಆಗಿಲ್ಲ ಅಂತಾ ಪೊಲೀಸರು ಹೇಳಲಿ ನೋಡೋಣ. ನಾನು ಚಾಲೆಂಜ್ ಮಾಡ್ತೇನೆ, ಯಾರ್ಯಾರು ಎಲ್ಲಿಲ್ಲಿ ಮಾಡುತ್ತಿದ್ದಾರೆ ಅಂತಾ ಗೊತ್ತಿದೆ. ಸಾವಿರಾರು ಕೋಟಿ ರೂ. ವ್ಯವಹಾರ ಈ ದಂಧೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications