ಮಾಜಿ ಸ್ಪೀಕರ್ ಕೋಳಿವಾಡಗೆ ಸಮ್ಮಿಶ್ರ ಸರ್ಕಾರದಿಂದ ಬಿಗ್ ಶಾಕ್
ಬೆಂಗಳೂಸು, ಸೆಪ್ಟೆಂಬರ್ 17: ಮಾಜಿ ಸ್ಪೀಕರ್ ಕೆಬಿ ಕೋಳೀವಾಡ ಅವರ ಹೆಸರನ್ನು ಹಾವೇರಿ ಜಿಲ್ಲಾ ಪಂಚಾಯ್ತಿ ಕಟ್ಟಡಕ್ಕೆ ನಾಮಕರಣ ಮಾಡಲು ಮುಂದಾಗಿದ್ದ ನಿರ್ಣಯವನ್ನು ಸರ್ಕಾರ ರದ್ದುಗೊಳಿಸಿದೆ.
ನೂತನವಾಗಿ ನಿರ್ಮಾಣಗೊಂಡಿರುವ ಹಾವೇರಿ ಜಿಲ್ಲಾ ಪಂಚಾಯ್ತಿ ಕಟ್ಟಡಕ್ಕೆ ಕೋಳಿವಾಡ ಹೆಸರನ್ನು ನಾಮಕರಣ ಮಾಡಲು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ವಿಧಾನಸಭಾಧ್ಯಕ್ಷರಾಗಿದ್ದ ಕೆಬಿ ಕೋಳೀವಾಡ ಹೆಸರನ್ನು ಜಿಲ್ಲಾ ಪಂಚಾಯ್ತಿ ಕಟ್ಟಡಕ್ಕೆ ಇಡುವ ಬಗ್ಗೆ 2017ರ ಮೇ 15ರಂದು ತೀರ್ಮಾನ ಕೈಗೊಳ್ಳಲಾಗಿತ್ತು.
ಆದರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈ ಪ್ರಸ್ತಾವಕ್ಕೆ ಸಮ್ಮತಿ ಸೂಚಿಸರಲಿಲ್ಲ, ಚುನಾಯಿತ ಜೀವಂತ ಪ್ರತಿನಿಧಿಗಳ ಹೆಸರನ್ನು ಇಡಲು ಅವಕಾಶವಿಲ್ಲ ಎಂದು ಸಭೆ ಗಮನಕ್ಕೆ ತಂದಿದ್ದರು. ಆದರೆ ರಾಜಕೀಯ ಒತ್ತಡದ ಕಾರಣಕ್ಕೆ 2017ರ ಸೆಪ್ಟೆಂಬರ್ 28ರಂದು ನಡೆದ ಸಭೆಯಲ್ಲಿ ಮತ್ತೊಮ್ಮೆ ನಿರ್ಣಯ ಕೈಗೊಳ್ಳಲಾಗಿತ್ತು.

ಜೀವಂತ ಪ್ರತಿನಿಧಿಗಳ ಹೆಸರನ್ನು ಸರ್ಕಾರಿ ಕಟ್ಟಡಗಳಿಗೆ ನಾಮಕರಣ ಮಾಡಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದಲ್ಲಿ ಅವಕಾಶವಿಲ್ಲದಿರುವುದರಿಂದ ಸಾಮಾನ್ಯ ಸಭೆ ನಿರ್ಣಯ ರದ್ದು ಮಾಡುವಂತೆ ಸರ್ಕಾರಕ್ಕೆ ಹಾವೇರಿ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದರು.
ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೆಬಿ ಕೋಳೀವಾಡ ಹೆಸರನ್ನು ನಾಮಕರಣ ಮಾಡುವ ನಿರ್ಣಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಯಾವುದೇ ಕಾರಣಕ್ಕೂ ಬದುಕಿರುವ ಚುನಾಯಿತ ಪ್ರತಿನಿಧಿಗಳ ಹೆಸರನ್ನು ಕಟ್ಟಡಕ್ಕೆ ಇಡಕೂಡದು ಎಂದು ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications