ಮಸೀದಿ, ಅಂಗನವಾಡಿಗಳ ಮೇಲೆ ಕಲ್ಲು ತೂರಾಟ: ಬೂದಿ ಮುಚ್ಚಿದ ಕೆಂಡದಂತಾದ ರಟ್ಟಿಹಳ್ಳಿ ಪಟ್ಟಣ
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಮಂಗಳವಾರ ಸಾರ್ವಜನಿಕರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ರಟ್ಟಿಹಳ್ಳಿ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಹಾವೇರಿ, ಮಾರ್ಚ್ 14: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಮಂಗಳವಾರ ಸಾರ್ವಜನಿಕರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ರಟ್ಟಿಹಳ್ಳಿ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ನೂರಾರು ಹಿಂದೂ ಕಾರ್ಯಕರ್ತರು ನಡೆಸುತ್ತಿದ್ದ ಶೋಭಾ ಯಾತ್ರೆ ವೇಳೆ ಈ ಘಟನೆ ನಡೆದಿದ್ದು, ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡಿದ್ದಾರೆ.
ಒಂದು ವಾರಗಳ ಹಿಂದೆ ರಟ್ಟಿಹಟ್ಟಿ ಪಟ್ಟದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲೂ ತೂರಾಟ ನಡೆದಿತ್ತು ಎನ್ನಲಾಗಿದೆ. ಈ ಹಿನ್ನಲೆ ಮಂಗಳವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಲ್ಲೂ ತೂರಾಟ ಖಂಡಿಸಿ ಶೋಭಾಯಾತ್ರೆ ಹಮ್ಮಿಕೊಂಡಿದ್ದರು. ನೂರಾರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ರ್ಯಾಲಿಯಲ್ಲಿ ಭಾಗಿಯಾಗಿದ್ದು, ಮೆರವಣಿಗೆ ರಟ್ಟಿಹಳ್ಳಿ ಪಟ್ಟಣದ ಕಾರಂಜಿ ಸರ್ಕಲ್ ಬಳಿ ಬರುತ್ತಿದ್ದಂತೆ ಕಲ್ಲು ತೂರಾಟ ನಡೆದಿದೆ.

ರಾಯಣ್ಣ ಪುತ್ಥಳಿ ಮೆರವಣಿಗೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಗಲಾಟೆ ಆರಂಭವಾಗಿದ್ದು, ದುಷ್ಕರ್ಮಿಗಳು ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಕಿಡಿಗೇಡಿಗಳು ಮಸೀದಿ, ಅಂಗನವಾಡಿ ಸೇರಿದಂತೆ ಹಲವು ಅನ್ಯಕೋಮಿನ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ರ್ಯಾಲಿ ವೇಳೆ ಸಿಕ್ಕ ವಾಹನಗಳ ಮೇಲೂ ಕಲ್ಲು ಎಸೆದಿದ್ದು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸಿದ್ದಾರೆ.
ಘಟನೆಯಲ್ಲಿ ಮಕ್ಕಳು ಹಾಗೂ ಮಹಿಳೆಯರು ಗಾಯಗೊಂಡಿದ್ದು, ಕಾರು, ಆಟೋ ಹಾಗೂ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಈ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಗುಂಪುಗಳನ್ನು ಚದುರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಕಾರಂಜಿ ಸರ್ಕಲ್ನಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು, ಪೊಲೀಸ್ ಬಿಗಿಬಂದೋ ಬಸ್ತ್ ಮಾಡಲಾಗಿದೆ.
ರಟ್ಟಿಹಳ್ಳಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಗಲಭೆ ನಡೆಸಲೆಂದೇ ದುಷ್ಕರ್ಮಿಗಳು ಬೇರೆ ಭಾಗದಿಂದ ಬಂದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ರಾಯಣ್ಣ ಪ್ರತಿಮೆ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರ್ಚ್ 9ರಂದು ನಡೆದಿದ್ದ ಕಲ್ಲು ತೂರಾಟಕ್ಕೆ ಪ್ರತಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಲಭೆ ಆರಂಭಿಸಿದ ದುಷ್ಕರ್ಮಿಗಳಿಗಾಗಿ ತನಿಖೆ ಆರಂಭಿಸಿದ್ದಾರೆ.

ಸಚಿವ ಬಿ.ಸಿ ಪಾಟೀಲ್ ಹಾಗೂ ಸಚಿವ ಬೈರತಿ ಬಸವರಾಜ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂತಹ ಘಟನೆ ನಡೆದು ಮಹಿಳೆಯರು, ಮಕ್ಕಳು ಗಾಯಗೊಂಡಿರುವ ಕಾರಣ ಸ್ಥಳೀಯರು ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಸದ್ಯ ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿಬಂದೋ ಬಸ್ತ್ ಮಾಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications