ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ
ಹಾವೇರಿ, ಏಪ್ರಿಲ್ 14: ''ರಸಗೊಬ್ಬರ ತಯಾರಿಕಾ ಸಂಸ್ಥೆಗಳು ಮತ್ತು ರಸಗೊಬ್ಬರ ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು'' ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ. '
ಏಪ್ರಿಲ್ 1 ರಿಂದ ರಸಗೊಬ್ಬರ ದರ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಹಾಲಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರ ಚೀಲದ ಮೇಲಿನ ಮುದ್ರಿತ ಎಂ.ಆರ್.ಪಿ. ದರಗಳಿಗಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ, ಒಂದು ವೇಳೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂತಹ ರಸಗೊಬ್ಬರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು. ಮಾರಾಟ ಮಾಡಿದ ರಸಗೊಬ್ಬರಗಳಿಗೆ ಕಡ್ಡಾಯವಾಗಿ ಬಿಲ್ ನೀಡಲು ಸೂಚನೆ ನೀಡಲಾಗಿದೆ.
ರೈತರು ರಸಗೊಬ್ಬರ ಖರೀದಿಸುವಾಗ ರಸಗೊಬ್ಬರ ಚೀಲದ ಮೇಲೆ ಮುದ್ರಿತ ದರ ಗಮನಿಸಿ ಖರೀದಿಸಬೇಕು. ರಸಗೊಬ್ಬರ ಮಾರಾಟಾಗಾರರು ಚೀಲದ ಮೇಲೆ ಮುದ್ರಿತ ಧಾರಣೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ ರೈತರು ಹತ್ತಿರದ ಕೃಷಿ ಇಲಾಖೆಯ ಕಚೇರಿ ಸಂಪರ್ಕಿಸಿ ದೂರು ನೀಡಬಹುದು. ಮತ್ತು ರೈತರು ಗರಿಷ್ಠ ಚಿಲ್ಲರೆ ಮಾರಾಟ ದರದಲ್ಲಿಯೇ ರಸಗೊಬ್ಬರ ಖರೀದಿ ಮಾಡಲು ವಿನಂತಿಸಿದೆ.

ನಿಗದಿತ ದರಕ್ಕಿಂತ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟದ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸಮಿಪದ ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು ಹಾವೇರಿ/ರಾಣೇಬೆನ್ನೂರು, ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications