ಹಾವೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡಿದ್ರೆ ಕಠಿಣ ಕ್ರಮ

|
Google Oneindia Kannada News

ಹಾವೇರಿ, ಏಪ್ರಿಲ್ 14: ''ರಸಗೊಬ್ಬರ ತಯಾರಿಕಾ ಸಂಸ್ಥೆಗಳು ಮತ್ತು ರಸಗೊಬ್ಬರ ಮಾರಾಟಗಾರರು ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಜರುಗಿಸಲಾಗುವುದು'' ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಅವರು ತಿಳಿಸಿದ್ದಾರೆ. '

ಏಪ್ರಿಲ್ 1 ರಿಂದ ರಸಗೊಬ್ಬರ ದರ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಹಾಲಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರ ಚೀಲದ ಮೇಲಿನ ಮುದ್ರಿತ ಎಂ.ಆರ್.ಪಿ. ದರಗಳಿಗಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ, ಒಂದು ವೇಳೆ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದು ಕಂಡುಬಂದಲ್ಲಿ ಅಂತಹ ರಸಗೊಬ್ಬರ ಮಾರಾಟಗಾರರ ಪರವಾನಿಗೆ ರದ್ದುಗೊಳಿಸಲಾಗುವುದು. ಮಾರಾಟ ಮಾಡಿದ ರಸಗೊಬ್ಬರಗಳಿಗೆ ಕಡ್ಡಾಯವಾಗಿ ಬಿಲ್ ನೀಡಲು ಸೂಚನೆ ನೀಡಲಾಗಿದೆ.

''ಕುಮಾರಸ್ವಾಮಿಗೆ ರಸಗೊಬ್ಬರ ಸಬ್ಸಿಡಿಯ ಎಬಿಸಿಡಿ ಗೊತ್ತಿಲ್ಲ''''ಕುಮಾರಸ್ವಾಮಿಗೆ ರಸಗೊಬ್ಬರ ಸಬ್ಸಿಡಿಯ ಎಬಿಸಿಡಿ ಗೊತ್ತಿಲ್ಲ''

ರೈತರು ರಸಗೊಬ್ಬರ ಖರೀದಿಸುವಾಗ ರಸಗೊಬ್ಬರ ಚೀಲದ ಮೇಲೆ ಮುದ್ರಿತ ದರ ಗಮನಿಸಿ ಖರೀದಿಸಬೇಕು. ರಸಗೊಬ್ಬರ ಮಾರಾಟಾಗಾರರು ಚೀಲದ ಮೇಲೆ ಮುದ್ರಿತ ಧಾರಣೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ ರೈತರು ಹತ್ತಿರದ ಕೃಷಿ ಇಲಾಖೆಯ ಕಚೇರಿ ಸಂಪರ್ಕಿಸಿ ದೂರು ನೀಡಬಹುದು. ಮತ್ತು ರೈತರು ಗರಿಷ್ಠ ಚಿಲ್ಲರೆ ಮಾರಾಟ ದರದಲ್ಲಿಯೇ ರಸಗೊಬ್ಬರ ಖರೀದಿ ಮಾಡಲು ವಿನಂತಿಸಿದೆ.

Strict action if fertilizer is sold at more than the fixed price: Agriculture Director

Recommended Video

ಕುಮಾರಣ್ಣನ ಬಗ್ಗೆ ಕಿಂಡಲ್ ಮಾಡಿದ ಸದಾನಂದ ಗೌಡ | Oneindia Kannada

ನಿಗದಿತ ದರಕ್ಕಿಂತ ಅಧಿಕ ದರದಲ್ಲಿ ರಸಗೊಬ್ಬರ ಮಾರಾಟದ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಸಮಿಪದ ರೈತ ಸಂಪರ್ಕ ಕೇಂದ್ರ, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು ಹಾವೇರಿ/ರಾಣೇಬೆನ್ನೂರು, ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ಕೋರಲಾಗಿದೆ.

English summary
Don't collect more money for stock fertilizer by increasing the price. Strict action if fertilizer is sold at more than the fixed price. Haveri Joint Agriculture Director Manjunath said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X