ಹಿರೇಕೆರೂರು ಆಖಾಡದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ವಾಮೀಜಿ ಅಚ್ಚರಿ ಆಯ್ಕೆ
ಹಾವೇರಿ, ನವೆಂಬರ್ 18: ಡಿಸೆಂಬರ್ ೦೫ ರಂದು ನಡೆಯಲಿರುವ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದ್ದು, ಕೆಲವು ಕಡೆ ಅಭ್ಯರ್ಥಿಗಳೇ ಬದಲಾವಣೆಯಾಗುತ್ತಿದ್ದಾರೆ. ಹೌದು, ಹಿರೇಕೆರೂರು ವಿಧಾನಸಭಾ ಉಪ ಚುನಾವಣಾ ಆಖಾಡಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ರಟ್ಟಿಹಳ್ಳಿಯ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಣಕ್ಕಿಳಿಯಲಿದ್ದಾರೆ.
ಈ ಮೊದಲು ಉಜಿನೆಪ್ಪ ಕೋಡಿಹಳ್ಳಿಗೆ ಟಿಕೆಟ್ ನೀಡಿದ್ದ ಜೆಡಿಎಸ್, ಅಚ್ಚರಿಯ ಬೆಳವಣಿಗೆಯಲ್ಲಿ ಭಾನುವಾರ ರಾತ್ರಿ ಇದ್ದಕ್ಕಿಂದಂತೆಯೇ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿಗೆ ಟಿಕೆಟ್ ನೀಡಿದೆ. ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಇಂದೇ ನಾಮಪತ್ರ ಸಲ್ಲಿಸಲು ಸ್ವಾಮೀಜಿ ತಯಾರಾಗಿದ್ದಾರೆ. ಜೆಡಿಎಸ್ ನಿಂದ ಸ್ವಾಮೀಜಿ ಚುನಾವಣೆಗೆ ಸ್ಪರ್ಧಿಸುತ್ತಿರುವುದರಿಂದ ಬಾರತೀಯ ಜನತಾ ಪಕ್ಷಕ್ಕೆ ದೊಡ್ಡ ಆಘಾತವಾಗಿದೆ.
ಶಿವಾಚಾರ್ಯ ಸ್ವಾಮೀಜಿ ಮನವೊಲಿಕೆಗೆ ಬಿಜೆಪಿ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಶಾಸಕ ಯು.ಬಿ.ಬಣಕಾರ ಸಂಧಾನ ಸಭೆ ನಡೆಸಿದ್ದಾರೆ. ಸಿಎಂ ಪುತ್ರನ ಮನವೊಲಿಕೆಗೂ ಸ್ವಾಮೀಜಿ ಬಗ್ಗುತ್ತಿಲ್ಲ. ನಾಮಪತ್ರ ಸಲ್ಲಿಸಿ ಚುನಾವಣೆಗೂ ಸ್ಪರ್ಧಿಸುತ್ತೇನೆ ಎಂದಿದ್ದಾರೆ.

ಬಿಜೆಪಿಯಿಂದ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅಭ್ಯರ್ಥಿಯಾಗಿದ್ದರೆ, ಕಾಂಗ್ರೆಸ್ ನಿಂದ ಬಿ.ಹೆಚ್.ಬನ್ನಿಕೋಡ್ ಅಭ್ಯರ್ಥಿಯಾಗಿ ಉಪ ಚುನಾವಣಾ ಕಣದಲ್ಲಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿರುವ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ಪರ್ಧೆಯಿಂದ ಕಂಗಾಲಾಗಿರುವ ಬಿಜೆಪಿ, ಮತ ವಿಭಜನೆ ಎದುರಾಗುವ ಭೀತಿ ಎದುರಿಸುತ್ತಿದೆ.
ಈ ಬಗ್ಗೆ ಮಾತನಾಡಿರುವ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ "ಸ್ವಾಮೀಜಿ ಸ್ಪರ್ಧೆಯಿಂದ ಯಾವುದೇ ತೊಂದರೆ ಇಲ್ಲ, ನಮಗೇನೂ ಆಗುವುದಿಲ್ಲವೆಂದು" ತಿರುಗೇಟು ನೀಡಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications