ಹಾವೇರಿ: ರೀಲ್ಸ್ ಮಾಡುವ ನೆಪದಲ್ಲಿ ಭಾವಿ ಪತಿಯನ್ನು ಪಾರ್ಕ್ಗೆ ಕರೆದು ಕುತ್ತಿಗೆ ಇರಿದ 17 ವರ್ಷದ ಬಾಲಕಿ
ಹಾವೇರಿ, ಏಪ್ರಿಲ್. 09: ಹಾವೇರಿ ಜಿಲ್ಲೆಯ ಹದಿಹರೆಯದ ಯುವತಿಯೊಬ್ಬಳು ತಾನು ಮದುವರಯಾಗಬೇಕಿದ್ದ ವರನನ್ನು ಇನ್ಸ್ಟಾಗ್ರಾಮ್ ರೀಲ್ ಮಾಡುವ ನೆಪದಲ್ಲಿ ಪಾರ್ಕ್ಗೆ ಕರೆದು ನಂತರ ಚಾಕುವಿನಿಂದ ಇರಿದಿದ್ದಾಳೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ರಾಣೆಬೆನ್ನೂರು ಪೊಲೀಸರು 17 ವರ್ಷದ ಬಾಲಕಿಯನ್ನು ಬಂಧಿಸಿದ್ದು, ಸಂತ್ರಸ್ತ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಯ ಪ್ರಕಾರ, ಸಂತ್ರಸ್ತ ದೇವೇಂದ್ರ ಗೌಡ ಅವರಿಗೆ ಆರೋಪಿ ಬಾಲಕಿಯೊಂದಿಗೆ ಮಾರ್ಚ್ 3 ರಂದು ನಿಶ್ಚಿತಾರ್ಥ ನಡೆದಿತ್ತು. ಬಳಿಕ ಆಕೆ ಇನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಮಾಡೋಣ ಎಂದು ಭಾವಿ ಪತಿಯನ್ನು ರಾಣೆಬೆನ್ನೂರಿನ ಉದ್ಯಾನವನಕ್ಕೆ ಆಹ್ವಾನಿಸಿದ್ದಾರೆ. ಇನ್ಸ್ಟಾಗ್ರಾಮ್ ರೀಲ್ಗಳಿಗೆ ಒಟ್ಟಿಗೆ ಡ್ಯಾನ್ಸ್ ಮಾಡುವ ಕೆಲವು ಆಲೋಚನೆಗಳು ತನಗೆ ಇದೆ ಎಂದು ಯುವಕನಿಗೆ ತಿಳಿಸಿದ್ದಾರೆ.

ಇದರ ಜೊತೆಗೆ ಸರ್ಪ್ರೈಸ್ ಗಿಫ್ಟ್ ಕೊಡುವ ಯೋಜನೆ ಹಾಕಿಕೊಂಡಿದ್ದು, ಪಾರ್ಕ್ ಗೆ ಬಂದ ನಂತರ ಕೊಡುವುದಾಗಿ ಬಾಲಕಿ ಹೇಳಿದ್ದಾಳೆ. ದೇವೇಂದ್ರ ಗೌಡ ಉದ್ಯಾನವನಕ್ಕೆ ಬಂದು ಉಡುಗೊರೆ ಕೇಳಿದಾಗ, ಹುಡುಗಿ ಅವನ ಕೈಗಳನ್ನು ಹಗ್ಗದಿಂದ ಕಟ್ಟಿ ಕಣ್ಣು ಮುಚ್ಚಿದ್ದು, ಇದು ಸರ್ಪ್ರೈಸ್ ಗಿಫ್ಟ್ ಎಂದು ಹೇಳಿದ್ದಾಳೆ. ನಂತರ ಆಕೆಯು ಚಾಕುವಿನಿಂದ ಯುವಕನ ಕುತ್ತಿಗೆ ಇರಿದು ಪಾರ್ಕ್ನಿಂದ ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ.
ಪಾರ್ಕ್ನಲ್ಲಿದ್ದ ಇತರರು ಕೂಡಲೇ ಗಾಯಾಳು ದೇವೇಂದ್ರ ಗೌಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಾದ ಬಳಿಕ ಸಂತ್ರಸ್ತನಿಂದ ಮಾಹಿತಿ ಪಡೆದ ದೇವೇಂದ್ರ ಗೌಡನ ಪೋಷಕರು ಬಾಲಕಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಆಕೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಣೆಬೆನ್ನೂರು ಪಟ್ಟಣದ ಹೊರವಲಯದಲ್ಲಿರುವ ಓಂ ಪಬ್ಲಿಕ್ ಸ್ಕೂಲ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸಂತ್ರಸ್ತ ದೇವೇಂದ್ರ ಗೌಡ ಸ್ಥಿತಿ ಗಂಭೀರವಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಘಟನೆಗೆ ಕಾರಣವಾದ ವಿಷಯಯಾವುದು ಎಂಬ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications