ಕೇಂದ್ರ ಬಜೆಟ್-2021 ನಿರೀಕ್ಷೆ: ರಾಣೇಬೆನ್ನೂರು-ಶಿವಮೊಗ್ಗ ರೈಲು ಯೋಜನೆ ಕಾಮಗಾರಿ ಯಾವಾಗ?
ಹಾವೇರಿ, ಜನವರಿ 22: ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರು ಹಾಗೂ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಡುವಿನ ರೈಲು ಯೋಜನೆಗೆ ಕೇಂದ್ರ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿದೆ. ಆದರೆ ಈ ರೈಲು ಯೋಜನೆಯ ಕಾಮಗಾರಿ ಯಾವಾಗ ಎಂಬುದು ಈ ಭಾಗದ ಜನರ ಯಕ್ಷ ಪ್ರಶ್ನೆಯಾಗಿದೆ.
ಕಳೆದ ಬಾರಿಯ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಹಾವೇರಿ ಜಿಲ್ಲೆಗೆ ರೈಲ್ವೆಯಲ್ಲಿ ಬಂಪರ್ ಕೊಡುಗೆ ಲಭಿಸಿತ್ತು. ಸೀಡ್ಸ್ ಬೆಳೆಯಲ್ಲಿ ಏಷ್ಯಾ ಖಂಡಕ್ಕೆ ಹೆಸರುವಾಸಿಯಾಗಿರುವ ರಾಣೇಬೆನ್ನೂರಿನಿಂದ ಮಲೆನಾಡಿನ ತವರು ಶಿವಮೊಗ್ಗಕ್ಕೆ ನೇರ ರೈಲು ಸಂಪರ್ಕ ಲಭಿಸಿತ್ತು. ಕೇಂದ್ರ ಸರ್ಕಾರ ಈ ಯೋಜನೆಗೆ 150 ಕೋಟಿ ರೂ. ಮೀಸಲಿಟ್ಟಿದೆ.
ಶಿವಮೊಗ್ಗದಿಂದ ರೈಲು ಹಳಿ ಆರಂಭಗೊಂಡು ಸವಳಂಗ, ಶಿಕಾರಿಪುರ, ಮಾಸೂರು, ರಟ್ಟೀಹಳ್ಳಿ, ಹಲಗೇರಿ ಮಾರ್ಗವಾಗಿ ರಾಣೇಬೆನ್ನೂರು ತಲುಪಲಿದ್ದು, ರಾಣೇಬೆನ್ನೂರಿನಲ್ಲಿ ಜಂಕ್ಷನ್ ನಿರ್ಮಾಣವಾಗಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ್ ಉದಾಸಿ ಅವರುಗಳ ಪ್ರಯತ್ನದಿಂದ ಈ ರೈಲು ಯೋಜನೆ ಲಭಿಸಿದ್ದರೂ, ಯೋಜನೆ ಆರಂಭ ಯಾವಾಗ ಹಾಗೂ ಕಾಮಗಾರಿ ಮುಗಿಯುವ ನಿರ್ದಿಷ್ಟ ದಿನಾಂಕ ನಿಗದಿಯಾಗಿಲ್ಲ.
ಇನ್ನೂ ಭೂಸ್ವಾಧೀನ ಕಾರ್ಯ ನಡೆಯುತ್ತಿದ್ದು, ಆದಷ್ಟೂ ಬೇಗ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು, ೨೦೨೧ರ ಕೇಂದ್ರ ಬಜೆಟ್ ನಲ್ಲಿ ಶೀಘ್ರವಾಗಿ ಕಾಮಗಾರಿ ಆರಂಭಗೊಳ್ಳುವಂತೆ ನಿರ್ದೇಶಿಸಲಿ ಮತ್ತು ಈ ಭಾಗದ ಬಹುದಿನಗಳ ಕನಸಾಗಿರುವ ಬಯಲುಸೀಮೆ ಹಾಗೂ ಮಲೆನಾಡು ರೈಲು ಸಂಪರ್ಕ ಸಾಕಾರಗೊಳ್ಳಲಿ ಎಂಬುದಾಗಿದೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications