ಗಾಜನೂರು ಜಲಾಶಯದಿಂದ ತುಂಗಾ ಮೇಲ್ದಂಡೆ ಕಾಲುವೆಗಳಿಗೆ ನೀರು: ಒಣಗುತ್ತಿರುವ ಬೆಳೆಗೆ ಆಸರೆ
ಹಾವೇರಿ, ಆಗಸ್ಟ್ 22: ತುಂಗಾ ಮೇಲ್ದಂಡೆಯಲ್ಲಿನ ಕಾಲುವೆಗಳಲ್ಲಿ ನೀರು ಹರಿಯುತ್ತಿದ್ದು, ಮಳೆಯಿಲ್ಲದೆ ಕಂಗಾಲಾಗಿದ್ದ ರೈತರು ನಿಟ್ಟುಸಿರು ಬಿಡುವಂತಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ, ಹಿರೇಕೆರೂರು, ರಾಣೆಬೆನ್ನೂರ, ಹಾವೇರಿ ತಾಲೂಕಿನ ರೈತರ ಜಮೀನುಗಳಿಗೆ ನೀರುಣಿಸುವ ಉದ್ದೇಶದಿಂದ ಗಾಜನೂರು ಜಲಾಶಯದಿಂದ ನೀರು ಹರಿಸಲಾಗುತ್ತಿದೆ.
ಕಳೆದ ತಿಂಗಳು ಸುರಿದ ಮಳೆ ನೆಚ್ಚಿಕೊಂಡು ಬಿತ್ತನೆ ಮಾಡಿದ್ದ ರೈತರಿಗೆ ಆಗಸ್ಟ್ನಲ್ಲಿ ಮಳೆ ಕೈಕೊಟ್ಟಿತು. ವಾಡಿಕೆ ಮಳೆಗಿಂತ ಕಡಿಮೆಯಾದ ಕಾರಣ ಬೆಳೆಗಳ ನಾಶಕ್ಕೆ ಮುಂದಾಗಿದ್ದ ರೈತರಿಗೆ ಕಾಲುವೆ ನೀರು ಜೀವ ಜಲವಾಗಿ ಪರಿಣಮಿಸಿದೆ. ಗಾಜನೂರ ಡ್ಯಾಮ್ಂದ ಬರುವ ತುಂಗಾ ನೀರು ಜಿಲ್ಲೆಯ 73,239 ಹೆಕ್ಟೇರ್ ಪ್ರದೇಶದ ಜಮೀನುಗಳಿಗೆ ನೀರು ತಲುಪುತ್ತದೆ.

ಕಳೆದ ತಿಂಗಳು ಬಿತ್ತನೆ ಮಾಡಿದ ಮೆಕ್ಕೆಜೋಳ, ಹತ್ತಿ, ಮೆಣಸಿನಕಾಯಿ, ಹೆಸರು, ಉಳ್ಳಾಗಡ್ಡಿ ಸೇರಿದಂತೆ ಇತರ ಬೆಳೆಗಳು ಮಳೆಯಿಲ್ಲದೆ ಒಣಗಲಾರಂಭಿಸಿದ್ದವು. ಆದರೆ, ಕಾಲುವೆ ಮೂಲಕ ನೀರು ಹರಿಯುತ್ತಿರುವುದರಿಂದ ಬೆಳೆಗಳಿಗೆ ಜೀವ ಕಳೆ ಬಂದಿದೆ. ಯೋಜನೆಯ 169 ಕಿ.ಮೀ. ಉದ್ದದ ಕಾಲುವೆಯ ಪೈಕಿ 143 ಕಿ.ಮೀ ಕಾಲುವೆಯಲ್ಲಿ ನೀರು ಹರಿಯುತ್ತಿದೆ. ಇದರಿಂದ ಹಿರೆಕೇರೂರು-ರಟ್ಟಿಹಳ್ಳಿ ತಾಲೂಕಿನ 9468 ಹೆಕ್ಟೇರ್, ರಾಣೆಬೆನ್ನೂರ ತಾಲೂಕಿನ 33,705 ಹೆಕ್ಟೇರ್ ಹಾಗೂ ಹಾವೇರಿ ತಾಲೂಕಿನ 27,908 ಹೆಕ್ಟೇರ್ಪ್ರದೇಶದ ಜಮೀನುಗಳಿಗೆ ಪ್ರಸ್ತುತ ನೀರು ದೊರೆಯುತ್ತಿದೆ.
ಹಾವೇರಿ ತಾಲೂಕಿನ ಹೊಸಳ್ಳಿ ಹಾಗೂ ಕನಕಾಪುರ ಗ್ರಾಮದ ಬಳಿ 600 ಮೀಟರ್ ಭೂ ಸ್ವಾಧೀನ ಪ್ರಕ್ರಿಯ ವಿಳಂಭವಾಗಿರುವ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ಹಾನಗಲ್ಲ ತಾಲೂಕಿನ 26 ಕಿ.ಮಿ. ಉದ್ದದ ಕಾಲುವೆಗೆ ನೀರು ಹರಿಯದ ಕಾರಣ 6 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಯುತ್ತಿಲ್ಲ. ಯೋಜನೆಯಲ್ಲಿನ ಬಹುತೇಕ ಕಾಲುವೆಗಳಲ್ಲಿ ಹೂಳು ತುಂಬಿದ್ದು, ಗಿಡಗಂಟಿಗಳು ಬೆಳೆದಿರುವ ಕಾರಣ ಕಿರು ಕಾಲುವೆಗಳಲ್ಲಿ ನೀರು ಹರಿದು ಬರುತ್ತಿಲ್ಲ.
ರೈತರ ಜಮೀನುಗಳಿಗೆ ನೀರುಣಿಸುವ ಉದ್ದೇಶದಿಂದ ಅನುಷ್ಠಾನವಾಗಿರುವ ಈ ಯೋಜನೆಯ ಮೂಲಕ ಪ್ರಸ್ತುತ 73,239 ಹೆಕ್ಟೇರ್ ಪ್ರದೇಶಕ್ಕೆ ನೀರು ಹರಿಯುತ್ತಿದೆ. ಕಾಲುವೆ ಅಚ್ಚುಕಟ್ಟು ಪ್ರದೇಶದ ಸಾವಿರಾರು ಹೆಕ್ಟೇರ್ ಪ್ರದೇಶದ ರೈತರು ವಿವಿಧ ರೀತಿಯಲ್ಲಿ ನೀರು ಪಡೆದುಕೊಳ್ಳುತ್ತಿದ್ದಾರೆ ಎಂದು ತುಂಗಾ ಮೇಲ್ದಂಡೆ ಯೋಜನೆ, ರಾಣೆಬೆನ್ನೂರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಕೆಲವು ಕಾಲುವೆಗಳಲ್ಲಿ ಹೂಳು ತುಂಬಿ ಗಿಡಗಂಟಿಗಳು ಬೆಳೆದಿವೆ. ಕಾಲುವೆಗಳನ್ನು ದುರಸ್ತಿ ಮಾಡದೆ ಇರುವುದರಿಂದ ನೀರು ಹರಿದು ಬರುತ್ತಿಲ್ಲ. ಮುಖ್ಯ ಕಾಲುವೆ ನಂತರ ಬರುವ ಒಂದೆರಡು ಕಾಲುವೆಗಳಿಗೆ ಮಾತ್ರ ನೀರು ಹರಿಯುತ್ತಿದೆ. ಸಣ್ಣ ಸಣ್ಣ ಕಾಲುವೆಗಳಿಗೆ ಇನ್ನೂ ನೀರು ಹರಿದು ಬರುತ್ತಿಲ್ಲ. ಆದ್ದರಿಂದ ಯುಟಿಪಿ ಅಧಿಕಾರಿಗಳು ಯೋಜನೆಯ ಎಲ್ಲ ಕಾಲುವೆಗಳಿಗೆ ನೀರು ಹರಿಯುವಂತೆ ಮಾಡಬೇಕು ಎಂದು ಪಟ್ಟಣ ಪಂಚಾಯತ್ ಸದಸ್ಯರು ಹೇಳಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications