ಲಿಂಗಾಯತ ಧರ್ಮ ವಿವಾದ ಕುರಿತ ಚರ್ಚೆಗೆ ಸಿದ್ಧ: ದಿಂಗಾಲೇಶ್ವರ ಸ್ವಾಮಿ

ಹಾವೇರಿ, ಜನವರಿ 01: ಲಿಂಗಾಯತ ಪ್ರತ್ಯೇಕ ಧರ್ಮ ವಿರೋಧಿ ಗುಂಪಿನ ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರ್ಮಿಕ ಚರ್ಚೆಗೆ ಸಿದ್ದರಿರುವುದಾಗಿ ಹೇಳಿದ್ದಾರೆ. ಈ ಮೂಲಕ ಚರ್ಚೆಗೆ ಬರುವಂತೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೀಡಿದ್ದ ಆಹ್ವಾನವನ್ನು ಸ್ವೀಕರಿಸಿದ್ದಾರೆ.

ಡಿಸೆಂಬರ್ 30-31ರಂದೇ ಚರ್ಚೆ ನಡೆಯಲು ಉದ್ದೇಶಿಸಲಾಗಿತ್ತು ಆದರೆ ಅಂದು ಭದ್ರತೆ ನೆಪ ಒಡ್ಡಿ ಚರ್ಚೆಗೆ ಪೊಲೀಸರು ಅವಕಾಶ ನೀಡಿರಲಿಲ್ಲ ಆದರೆ ಈಗ ಮತ್ತೆ ಚರ್ಚೆಯ ಮಾತುಗಳು ಕೇಳಿ ಬರುತ್ತಿದ್ದು, ದಿನಾಂಕ ಇನ್ನೂ ನಿಗದಿಯಾಗಬೇಕಿದೆ.

we are ready for Lingayatha debate: Dingaleshwar swami

ಬಸವರಾಜ್ ಹೊರಟ್ಟಿ ಅವರು ಲಿಂಗಾಯತ ಪ್ರತ್ಯೇಕ ಧರ್ಮ ಎಂಬ ಚರ್ಚೆಯನ್ನು ಮುಂದಿಡುವ 5 ಜನರ ಹೆಸರನ್ನೂ ಘೋಷಿಸಿದ್ದು, ಎದುರಾಳಿಗಳಿಗೆ ತಮ್ಮ ವಾದ ಹೂಡಲು ಪಂಥಾಹ್ವಾನ ಮಾಡಿದ್ದರು. ಇದೀಗ ದಿಂಗಾಲೇಶ್ವರ ಸ್ವಾಮಿ ಅವರು ಆಹ್ವಾನವನ್ನು ಸ್ವೀಕರಿಸಿದ್ದು, ಯಾವಾಗ ಕರೆದರೂ ಚರ್ಚೆಗೆ ಸಿದ್ದರಿದ್ದೇವೆ ಎಂದಿದ್ದಾರೆ.

ತಮ್ಮ ವಿರುದ್ಧ ಫೇಸ್‌ಬುಕ್, ವಾಟ್ಸ್‌ಆಪ್‌ಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ ಸ್ವಾಮೀಜಿ ಅವರು ನನಗೆ ಆ ರೀತಿಯ ಅಪಪ್ರಾಚಾರ ಮಾಡಲು ಬರುವುದಿಲ್ಲ ಅದಕ್ಕೆ ಬೇಕಾದ ಮೊಬೈಲ್ ಕೂಡ ನನ್ನ ಬಳಿ ಇಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+