ಯೋಗ ದೈಹಿಕ, ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿ; ಬಿಸಿ ಪಾಟೀಲ್
ಹಿರೇಕೆರೂರು, ಜೂ. 21: "ಯೋಗ ಎನ್ನುವುದು ಬರೀ ದೇಹದ ದಂಡನೆಯಲ್ಲ. ಇದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯಕ್ಕೂ ಅದ್ಭುತ ಕ್ರಿಯಾ ಸಾಧನ" ಎಂದು ಕೃಷಿ ಸಚಿವರೂ ಆಗಿರುವ ಗದಗ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳವಾರ ಹಾವೇರಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಯೋಗಾಸನ ಕ್ರೀಡಾ ಸಂಸ್ಥೆ ಇವರ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್ " ಹಿರೇಕೆರೂರಿನ ಅಬಲೂರು ಗ್ರಾಮದ ಬಸವೇಶ್ವರ ದೇವಸ್ಥಾನದ ಮೈದಾನದ ಆವರಣದಲ್ಲಿ ನಡೆದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮೈಸೂರು; ವೇದಿಕೆ ಇಳಿದು ಸಾರ್ವಜನಿಕರೊಂದಿಗೆ ಮೋದಿ ಯೋಗಾಭ್ಯಾಸ
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯ ಕೋರಿದ ಸಚಿವ ಬಿ. ಸಿ. ಪಾಟೀಲ್, "ಪ್ರಧಾನಿ ನರೇಂದ್ರ ಮೋದಿಯವರು ಹೇಳುವಂತೆ ಈ ಇಡೀ ವಿಶ್ವವು ನಮ್ಮ ದೇಹ ಮತ್ತು ಆತ್ಮದಿಂದ ಆರಂಭವಾಗುತ್ತದೆ. ವಿಶ್ವವು ನಮ್ಮಿಂದ ಪ್ರಾರಂಭವಾಗುತ್ತದೆ ಮತ್ತು ಯೋಗವು ನಮ್ಮೊಳಗಿನ ಎಲ್ಲವನ್ನೂ ಜಾಗೃತಗೊಳಿಸುತ್ತದೆ. ಅರಿವಿನ ಪ್ರಜ್ಞೆಯನ್ನು ನಿರ್ಮಿಸುತ್ತದೆ. ಈ ಬಾರಿ ಮಾನವೀಯತೆಗಾಗಿ ಯೋಗ ಮಾಡುತಿದ್ದೇವೆ. ಭಾರತದ ಯೋಗದ ಲಾಭವನ್ನು ವಿದೇಶಿಗರು ಸಹ ಅರಿತು ದೇಹ ಮತ್ತು ಮನಸಿನ ಆರೋಗ್ಯಕ್ಕಾಗಿ ಇಂದು ಯೋಗವನ್ನು ಒಪ್ಪಿ ಅನುಸರಿಸುತ್ತಿದ್ದಾರೆ" ಎಂದರು.
"ಯೋಗವು ಮೂಲಭೂತವಾಗಿ ಅತ್ಯಂತ ಸೂಕ್ಷ್ಮವಾದ ವಿಜ್ಞಾನವನ್ನು ಆಧರಿಸಿದ ಆಧ್ಯಾತ್ಮಿಕ ಶಿಸ್ತು ಕ್ರಮವಾಗಿದೆ. ಇದು ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯವನ್ನು ತರುವುದರ ಮೇಲೆ ಕೇಂದ್ರೀಕರಿಸುತ್ತದೆ. ಇದು ಆರೋಗ್ಯಕರ ಜೀವನ ಕಲೆ ಮತ್ತು ವಿಜ್ಞಾನವಾಗಿದೆ. ಎಲ್ಲರೂ ಯೋಗವನ್ನು ದಿನನಿತ್ಯ ಮಾಡುತ್ತಾ ಸುಯೋಗಿಗಳಾಗಲಿ" ಎಂದು ಕರೆ ನೀಡಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಯೋಗಾಭ್ಯಾಸ; ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಶುಭಾಶಯ ಕೋರಿದ್ದಾರೆ. ಮಾನವೀಯತೆಗಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ಜಗತ್ತಿನೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಯಾಗುತ್ತಿದೆ. ಬೆಂಗಳೂರು ನಿವಾಸದಲ್ಲಿ ಇಂದು ಯೋಗಾಭ್ಯಾಸ ಮಾಡಲಾಯಿತು ಎಂದು ಫೇಸ್ಬುಕ್ ಪೋಸ್ಟ್ ಹಾಕಿದಾರೆ.
ವಿಶ್ವ ಯೋಗ ದಿನಾಚರಣೆ ಅಂಗವಾಗಿ ತಿಪಟೂರಿನಲ್ಲಿ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಯೋಗಾಸನ ಮಾಡಿದರು.
ಡಾ. ಜಿಎಂ. ಸಿದ್ದೇಶ್ವರ್ ಯೋಗಾಭ್ಯಾಸ; ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಚನ್ನಗಿರಿ ತಾಲ್ಲೂಕು ಆಡಳಿತ ಮತ್ತು ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಆಶ್ರಯದಲ್ಲಿ ಚನ್ನಗಿರಿ ತಾಲ್ಲೂಕಿನ ಸಂತೆಬೆನ್ನೂರಿನ ಪುಷ್ಕರಣಿಯ ಆವರಣದಲ್ಲಿ ಏರ್ಪಡಿಸಿದ್ದ ಎಂಟನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಜಿ. ಎಂ. ಸಿದ್ದೇಶ್ವರ್ ಯೋಗಾಭ್ಯಾಸ ಮಾಡಿದರು.
ಯೋಗ ದಿನಾಚರಣೆ ಉದ್ಘಾಟಿಸಿದ ರಾಮುಲು; ಬಳ್ಳಾರಿಯ ಕೋಟೆಮಲ್ಲೇಶ್ವರ ದೇವಸ್ಥಾನದ ಕೋಟೆ ಪ್ರದೇಶದಲ್ಲಿ ಆಯುಷ್ ಇಲಾಖೆ ವತಿಯಿಂದ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಸಚಿವ ರಾಮುಲು ಉದ್ಘಾಟಿಸಿದರು.
ಬಳಿಕ ಮಾತನಾಡಿ, ನಾವೆಲ್ಲರೂ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಂಡು ದೀರ್ಘಾಯುಷ್ಯ ಪಡೆಯೋಣ ಹಾಗೂ ಯೋಗದ ಮಹತ್ವವನ್ನು ಸಾರೋಣ ಎಂದು ತಿಳಿಸಿದರು. ಬಳಿಕ ಯೋಗಪಟುಗಳೊಂದಿಗೆ ಯೋಗಾಸನ ಮಾಡಿ, ನಾವೆಲ್ಲರೂ ಮಾನವೀಯತೆಗಾಗಿ ಯೋಗ ಎಂಬುದನ್ನು ಸಾರೋಣ ಎಂಬ ಸಂದೇಶವನ್ನು ನೀಡಿದರು.
Recommended Video