ಕಲಘಟಗಿಯ ಕುಂದ್ಲಿಯಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ
ಹುಬ್ಬಳ್ಳಿ, ಅಕ್ಟೋಬರ್, 20 : ಕಲಘಟಗಿ ತಾಲೂಕಿನಲ್ಲಿ ಬುಧವಾರ ಬೆಳಿಗ್ಗೆ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಇದೇನು ಮೊದಲಲ್ಲ. ಹಾಗಾಗಾ ಜಿಲ್ಲೆಯಲ್ಲಿ ಇಂತಹ ಗುಂಡಿನ ಸದ್ದು ಸಾಮಾನ್ಯವಾಗಿದೆ.
ಕಲಘಟಗಿ ತಾಲೂಕಿನ ಕಂದ್ಲಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಂಜುನಾಥ ಹೊಸಮನಿ (30) ಎಂಬವರ ಮೇಲೆ ಬುಧವಾರ ಬೆಳಗ್ಗೆ 9 ಗಂಟೆಯ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಮಂಜುನಾಥ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಸ್ಥಿತಿ ಗಂಭೀರವಾಗಿದೆ.
ಮಂಜುನಾಥ ತೊಳಸೂರು ಮತ್ತು ಮೂವರು ಸಹಚರರು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ, ಈ ದಾಳಿಯಿಂದ ಕುದ್ಲಿ ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.
ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸರು ತನಿಖೆ ನಡೆಸಿದ್ದಾರೆ. ಈ ಹಿಂದೆ ಜಿಲ್ಲಾ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು.
Comments
English summary
One person In Hubballi Strangers firing wednesday morning Oct 19, in kalaghatagi taluk Kudli village. Strangers fired on Manjunath Hosmane.