ಚಿಟ್ ಫಂಡ್, ನೂರಾರು ಜನರಿಗೆ ಸಾವಿರಾರು ಕೋಟಿ ದೋಖಾ

ಕಲಘಟಗಿಯ ಹರ್ಷ ಎಂಟರ್ ಪ್ರೈಸಸ್ ಕಂಪೆನಿಯಲ್ಲಿ ಸಾವಿರಾರು ಜನ ಹಣ ಹೂಡಿದ್ದರು. ಆದರೆ ಏಕಾಏಕಿ ಕಂಪೆನಿ ಜಾಗ ಖಾಲಿ ಮಾಡಿಕೊಂಡು ಹೋಗೇ ಬಿಟ್ಟಿತು. ಇದರಿಂದ ಜನರೀಗ ತಮ್ಮ ಹಣ ಕಳೆದುಕೊಂಡು ನಡು ರಸ್ತೆಯಲ್ಲಿ ನಿಲ್ಲುವಂತಾಗಿದೆ.

ಕಲಘಟಗಿ, ಏಪ್ರಿಲ್ 17: ಭಾನುವಾರ ನೂರಾರು ಜನರು ಸಚಿವ ಸಂತೋಷ್ ಲಾಡ್ ಮನೆ ಮುಂದೆ ನೆರೆದಿದ್ದರು. ಇವರೆಲ್ಲಾ ಇಲ್ಲಿನ ಹರ್ಷ ಎಂಟರ್ ಪ್ರೈಸಸ್ ಕಂಪೆನಿಯಲ್ಲಿ ವಂಚನೆಗೆ ಒಳಗಾದವರು.

ಕಲಘಟಗಿಯ ಹರ್ಷ ಎಂಟರ್ ಪ್ರೈಸಸ್ ಕಂಪೆನಿಯಲ್ಲಿ ಸಾವಿರಾರು ಜನ ಹಣ ಹೂಡಿದ್ದರು. ಆದರೆ ಏಕಾಏಕಿ ಕಂಪೆನಿ ಜಾಗ ಖಾಲಿ ಮಾಡಿಕೊಂಡು ಹೋಗೇ ಬಿಟ್ಟಿತು. ಇದರಿಂದ ಜನರೀಗ ತಮ್ಮ ಹಣ ಕಳೆದುಕೊಂಡು ನಡು ರಸ್ತೆಯಲ್ಲಿ ನಿಲ್ಲುವಂತಾಗಿದೆ.

ಇಲ್ಲಿ ಹಣ ಹೂಡಿದ ಹೆಚ್ಚಿನವರು ಜಮೀನಿನ ಮೇಲೆ ಸಾಲ ಮಾಡಿ, ಸ್ತ್ರೀಶಕ್ತಿ ಸಂಘಗಳಿಂದ ಸಾಲ ತೆಗೆದು, ಎಮ್ಮೆ ಕರುಗಳನ್ನು ಮಾರಿ ಹಣ ಹೂಡಿದ್ದರು. ಹೀಗೆ ಹಣ ಹೂಡಿ ಅವರೆಲ್ಲಾ ಉತ್ತಮ ಬದುಕಿನ ಕನಸು ಕಾಣುತ್ತಿದ್ದರು.[ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಟಿವಿ ಕದ್ದೋನು ಮಾರ್ಕೆಟಿಂಗ್ ಮ್ಯಾನೇಜರ್!]

1600 crores cheating story of Harsha Enterprises

ಮನೆ ಕಟ್ಟುವ, ಮಗಳ ಮದುವೆ ಮಾಡುವ, ಮಕ್ಕಳ ವಿದ್ಯಾಭ್ಯಾಸ ಕೊಡಿಸುವ ಕನಸು ಹೆಚ್ಚಿನವರದಾಗಿತ್ತು. ಆದರೆ ಈಗ ಅವರೆಲ್ಲಾ ತಮ್ಮ ಹಣ ಕಳೆದುಕೊಂಡ ಪರಿತಪಿಸುವಂತಾಗಿದೆ.

ಈ ಹಿನ್ನಲೆಯಲ್ಲಿ ತಮ್ಮ ಅಳಲು ತೋಡಿಕೊಳ್ಳಲು ಮೋಸ ಹೋದವರು ಸಚಿವ ಸಂತೋಷ್ ಲಾಡ್ ಮನೆ ಮುಂದೆ ಭಾನುವಾರ ನೆರೆದಿದ್ದರು. ಮೋಸ ಹೋದವರ ಅಳಲು ನೋಡಲಾಗದೆ ಮುಖ್ಯಮಂತ್ರಿಗೆ ಈ ಕುರಿತು ಹೇಳಿ ಹೆಚ್ಚಿನ ತನಿಖೆಗೆ ಒತ್ತಾಯಿಸುತ್ತೇನೆ ಎಂದು ಸಂತೊಷ್ ಲಾಡ್ ಭರವಸೆ ನೀಡಿದ್ದಾರೆ.

ಜತೆಗೆ ಲಾಡ್ ಸೂಚನೆ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡರು. ಈ ವೇಳೆ ಸಂತ್ರಸ್ತರು ತಮ್ಮ ವಿಳಾಸ, ತಾವು ಹೂಡಿಕೆ ಮಾಡಿದ ಹಣದ ಮಾಹಿತಿಗಳನ್ನು ಪೊಲೀಸರಿಗೆ ನೀಡಿದರು.

4 ಜನರ ಬಂಧನ
ಹಣ ವಂಚಿಸಿದ ಆರೋಪ ಎದುರಿಸುತ್ತಿರುವ ಹರ್ಷ ಎಂಟರ್ ಪ್ರೈಸಸ್ ಮಾಲೀಕರ ಜತೆ ಕೆಲಸ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಧಾರವಾಡ ಪೊಲೀಸರು ತಿಳಿಸಿದ್ದಾರೆ.

ಆದರೆ ಕಂಪೆನಿಯ ಮಾಲಿಕರಾದ ಹರ್ಷ ಖಾಸನೀಸ ಅಲಿಯಾಸ್‌ ಸತ್ಯಬೋಧ, ಸಂಜೀವ ಖಾಸನೀಸ ಮತ್ತು ಶ್ರೀಕಾಂತ ಮಾತ್ರ ನಾಪತ್ತೆಯಾಗಿದ್ದಾರೆ. ಇವರು ಹೆಚ್ಚಿನ ಬಡ್ಡಿ ನೀಡುವುದಾಗಿ ಆಮಿಷ ಒಡ್ಡಿ ಸಾರ್ವಜನಿ ಕರಿಂದ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿದ ಆರೋಪ ಎದುರಿಸುತ್ತಿದ್ದಾರೆ.[ಉತ್ತರ ಕರ್ನಾಟಕದಲ್ಲಿ ನವಜಾತ ಶಿಶುಗಳಿಗೆ ಉಷ್ಣಾಂಶದ ಬಿಸಿ]

ಸಾವಿರಾರು ಕೋಟಿ ಹಗರಣ
ಹರ್ಷ ಎಂಟರ್ ಪ್ರೈಸಸ್ ಒಟ್ಟು ಸಾವಿರಾರು ಕೋಟಿ ರೂಪಾಯಿ ಹಣ ವಂಚಿಸಿದೆ ಎನ್ನಲಾಗುತ್ತಿದೆ. ಹುಬ್ಬಳ್ಳಿ, ಧಾರವಾಡ, ಕುಂದಗೋಳ, ಹಳಿಯಾಳ, ಮುಂಡಗೋಡ ಸೇರಿದಂತೆ ರಾಜ್ಯದಾದ್ಯಂತ ಹಲವು ಪ್ರದೇಶಗಳ ಜನರು ಇದರಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ.

ಇಲ್ಲಿವರೆಗೆ 34 ಮಂದಿ ದೂರು ನೀಡಿದ್ದಾರೆ. ಇವರು ತಾವು 1.26 ಕೋಟಿ ಹಣ ತೊಡಗಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನು ಹಲವಾರು ಜನ ಠಾಣೆಗೆ ಬಂದು ಹೋಗುತ್ತಿದ್ದಾರೆ. ಆದರೆ, ಬಹುತೇಕರು ದೂರು ನೀಡಲು ಮುಂದಾಗುತ್ತಿಲ್ಲ. ಎಂದು ಧಾರವಾಡ ಜಿಲ್ಲಾ ಎಸ್ಪಿ ಧರ್ಮೇಂದ್ರಕುಮಾರ ಮೀನಾ ಮಾಹಿತಿ ನೀಡಿದ್ದಾರೆ.

ಆರೋಪಿ ಸಹೋದರರು ಎಲ್ಲಿದ್ದಾರೆ ಎಂದು ಗೊತ್ತಿಲ್ಲ. ಆದರೆ ವಿದೇಶಕ್ಕೆ ಹೋಗದಂತೆ ಜಾಗ್ರತೆ ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+