ಇದು ಮನ ಮಿಡಿಯುವ ಕಥೆ: ಹುಬ್ಬಳ್ಳಿ ಟು ರಾಜಸ್ಥಾನ್...
ಹುಬ್ಬಳ್ಳಿ, ಮೇ 9: ಕೊರೊನಾ ಹಾವಳಿಯಿಂದ ದೇಶದಲ್ಲಿ ಲಾಕ್ಡೌನ್ ಜಾರಿಯಾಗಿ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದರಲ್ಲೂ ನಿರ್ಗತಿಕಕರು, ಬಡವರು, ಕಾರ್ಮಿಕರು, ಪೋಷಕರಿಂದ ದೂರವಾದ ಸಣ್ಣ ಮಕ್ಕಳ ಪರಿಸ್ಥಿತಿಯಂತೂ ಹೇಳತೀರದು.
ಲಾಕ್ಡೌನ್ ಜಾರಿಯಿಂದಾಗಿ ಹುಬ್ಬಳ್ಳಿಯಲ್ಲಿ ಸಿಲುಕಿಕೊಂಡು, ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ತೀವ್ರ ಆತಂಕಕ್ಕೀಡಾಗಿದ್ದ ಇಬ್ಬರು ಬಾಲಕಿಯರನ್ನು ಧಾರವಾಡ ಜಿಲ್ಲಾಡಳಿತ ಪಾಲಕರ ಬಳಿ ಸೇರಿಸಿ ಮಾನವೀಯತೆ ಮೆರದಿದೆ.
Recommended Video
ರಾಜಸ್ತಾನ್ ಮೂಲದ 10 ವರ್ಷದ ರೋಮುಕುಮಾರಿ, 8 ವರ್ಷದ ಪೋಸುಕುಮಾರಿ ಎಂಬ ಇಬ್ಬರು ಬಾಲಕಿಯರು ಲಾಕ್ಡೌನ್ ಜಾರಿಯಾಗುವಕ್ಕಿಂತ ಮುಂಚೆ ಅದೇಗೋ ಮನೆ ಬಿಟ್ಟು ಮುಂಬೈ ಮಾರ್ಗವಾಗಿ ಹುಬ್ಬಳ್ಳಿಗೆ ಬಂದಿದ್ದರು. ರೈಲ್ವೆ ಪೊಲೀಸರ ಸಹಾಯದಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಕಳೆದ ಐವತ್ತು ದಿನಗಳಿಂದ ತಮ್ಮ ಪೋಷಕರಿಗಾಗಿ ಅಳುತ್ತಾ ಕಾಲ ಕಳೆಯುತ್ತಿದ್ದರು.
ವಿಷಯ ತಿಳಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಮಕ್ಕಳನ್ನು ಪಾಲಕರ ಬಳಿ ಕಳಿಸಲು ವಿಶೇಷ ಆಸಕ್ತಿ ವಹಿಸಿದರು. ಹುಬ್ಬಳ್ಳಿಯ ರಮೇಶ್ ರಾವಲ್ ಎನ್ನುವರು ಜಿಲ್ಲಾಧಿಕಾರಿ ಒಪ್ಪಿಗೆ ಮೂಲಕ ತಮ್ಮ ಸ್ವಂತ ಕಾರನ್ನು ಚಾಲನೆ ಮಾಡಿಕೊಂಡು ಮಕ್ಕಳನ್ನು ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ತಂದೆ ತಾಯಿಗಳ ಮಡಿಲು ಸೇರಿಸಿದ್ದಾರೆ.

ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿ ಮಕ್ಕಳ ರಕ್ಷಣಾ ಘಟಕದಲ್ಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು.
ಮಕ್ಕಳು ತಲುಪಿರುವ ಕುರಿತು ರಾಜಸ್ಥಾನದ ಸಿರೋಹಿ ಜಿಲ್ಲಾಧಿಕಾರಿ ಭಗವತಿ ಪ್ರಸಾದ ಅವರು ಧಾರವಾಡ ಜಿಲ್ಲಾಧಿಕಾರಿಗಳಿಗೆ ಲಿಖಿತ ಪತ್ರವನ್ನೂ ಸಹ ಬರೆದು, ಧನ್ಯವಾದ ಸಲ್ಲಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications