4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್, ಯಾಕೆ?, ಇಲ್ಲಿದೆ ವಿವರ
ಹುಬ್ಬಳ್ಳಿ, ಆಗಸ್ಟ್, 20: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ..
ಕಳೆದ 15 ದಿನಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸುಮಾರು 4.59 ಲಕ್ಷ ಮೃತ ಫಲಾನುಭವಿಗಳ ಹೆಸರಿನಲ್ಲಿರುವ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲಾಗಿದೆ. ಅವರು ಕಳೆದ ತಿಂಗಳವರೆಗೆ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕಾರ್ಡ್ಗಳ ಅಡಿಯಲ್ಲಿ ಪಡಿತರವನ್ನು ಪಡೆಯುತ್ತಿದ್ದರು. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳನ್ನು ಪಡೆದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈಗ ಒಟ್ಟು 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಿದೆ.

ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್ ಕಾರ್ಡ್ಗಳಿದ್ದು, 4.36 ಕೋಟಿ ಜನರಿಗೆ ಅನುಕೂಲವಾಗಿದೆ. ಆದರೆ, ಬಿಪಿಎಲ್ಗೆ ಅರ್ಹರಲ್ಲದ ಫಲಾನುಭವಿಗಳು ಉಚಿತ ಆಹಾರ ಧಾನ್ಯ ಪಡೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದರು. ಈ ನಿಟ್ಟಿನಲ್ಲಿ ಸೂಕ್ತ ಕಾರ್ಯಾಚರಣೆ ಮೂಲಕ ಮೃತರ ಹೆಸರಿನಲ್ಲಿರುವ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಇಲಾಖೆಯ ಜಂಟಿ ನಿರ್ದೇಶಕ ಗ್ಯಾನೇಂದ್ರಕುಮಾರ್ ಗೋನ್ವಾರ್ ಮಾಹಿತಿ ನೀಡಿದ್ದಾರೆ.
ಇನ್ನು ಮೃತ ಫಲಾನುಭವಿಗಳ ಮಾಹಿತಿ ಕಲೆ ಹಾಕಲು, ಅಂತಹ ಹೆಸರುಗಳನ್ನು ಗುರುತಿಸಲು ಮತ್ತು ಅವುಗಳನ್ನು ದಾಖಲೆಗಳಿಂದ ಅಳಿಸಲು ಸರ್ಕಾರವು ಇಲಾಖೆಗೆ ಸೂಚನೆ ನೀಡಿತ್ತು. ಈ ನಿಟ್ಟಿನಲ್ಲಿ ಇಲಾಖೆ ಈಗ ಮಹತ್ವದ ಕಾರ್ಯವನ್ನು ಮಾಡಿದೆ. ಅಲ್ಲದೇ ಬಹುತೇಕ ಕುಟುಂಬಗಳು ಬಿಪಿಎಲ್ ಮಾನದಂಡಕ್ಕಿಂತ ಹೆಚ್ಚಿನ ಆದಾಯ ಹಾಗೂ ಆರ್ಥಿಕ ಸ್ಥಿತಿ ಹೊಂದಿದ್ದರೂ ಕೂಡ ಬಿಪಿಎಲ್ ಸೇವೆ ಪಡೆಯುತ್ತಿವೆ.
ಸೂಕ್ತ ಕಾರ್ಯಾಚರಣೆ ನಡೆಸಿ ಬಿಪಿಎಲ್ ಕಾರ್ಡ್ಗಳನ್ನು ದುರುಪಯೋಗಪಡಿಸಿಕೊಂಡವರ ಬಳಿ ದಂಡ ವಸೂಲಿ ಮಾಡುವ ಭರವಸೆ ನೀಡಿದ್ದಾರೆ. ಕಳೆದ ವರ್ಷ ಕೂಡ ನಾಲ್ಕು ಲಕ್ಷ ರೇಷನ್ ಕಾರ್ಡ್ ಡಿಲೀಟ್ ಮಾಡಿ 13 ಕೋಟಿ ರೂಪಾಯಿ ದಂಡವನ್ನು ವಸೂಲಿ ಕೂಡ ಮಾಡಲಾಗಿದೆ. ಇನ್ನು ಈ ವರ್ಷವೂ ಚುರುಕು ಕಾರ್ಯಾಚರಣೆ ನಡೆಸುವ ಭರವಸೆ ನೀಡಿದರು.
ಒಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೂಕ್ತ ಕಾರ್ಯಾಚರಣೆ ನಡೆಸಿ ಬಿಪಿಎಲ್ಗೆ ಅರ್ಹರಿಲ್ಲದ ರೇಷನ್ ಕಾರ್ಡ್ ಡಿಲೀಟ್ ಮಾಡುವ ಮೂಲಕ ಅರ್ಹ ಫಲಾನುಭವಿಗಳಿಗೆ ಲಾಭ ದೊರೆಯುವಂತೆ ಮಾಡಬೇಕಿದೆ. ಅಲ್ಲದೇ ಸರ್ಕಾರಿ ನೌಕರಿಯಲ್ಲಿದ್ದು, ಬಿಪಿಎಲ್ ಬಳಕೆ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಬೇಕಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
BPL Card: ಪಡಿತರ ಚೀಟಿ ನಿಯಮ ಪರಿಷ್ಕರಣೆ: ಆದಾಯ ಮಿತಿ ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion












Click it and Unblock the Notifications