ಸಿಂಗಪುರಕ್ಕೆ ಹಾರಿದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ 6 ಪೌರಕಾರ್ಮಿಕರು
ಹುಬ್ಬಳ್ಳಿ, ಜುಲೈ 04 : ಸಿಂಗಪುರಕ್ಕೆ ಪ್ರಯಾಣ ಬೆಳೆಸಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆರು ಪೌರಕಾರ್ಮಿಕರನ್ನು ನಗರ ಪಾಲಿಕೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಟ್ಟರು.
ವೆಂಕಟೇಶ ಟಗರಗುಂಟಿ, ದೊಡ್ಡಪ್ಪ ಗಬ್ಬೂರ, ಕೊಂಡಯ್ಯ ಆಲಮೂರು, ಪರಶುರಾಮ ಬಂಡಮಿಂದಪಲ್ಲಿ, ನಲ್ಲಪ್ಪ ನೀಲಗಿರಿ, ಕರಬಸಪ್ಪ ಮಾದರ ಅವರು ಮೊದಲ ಹಂತದಲ್ಲಿ ವಿದೇಶಕ್ಕೆ ಮಂಗಳವಾರ ಬೆಂಗಳೂರಿನಿಂದ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದರು

ಅಲ್ಲಿನ ಸ್ವಚ್ಛತಾ ಪ್ರಕ್ರಿಯೆ, ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ಸ್ವಚ್ಛತಾ ನಿರ್ವಹಣೆ ಕುರಿತು ಅಧ್ಯಯನ ನಡೆಸಲು ಪೌರಕಾರ್ಮಿಕರು ಸಿಂಗಪುರಕ್ಕೆ ಹೊರಟರು. ವಿಮಾನ ಪ್ರಯಾಣದ ವೆಚ್ಚ ಹಾಗೂ ಕಾರ್ಮಿಕರ ಸಂಪೂರ್ಣ ಖರ್ಚು ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.
ಜುಲೈ 4ರಂದು ಬೆಂಗಳೂರಿನಿಂದ ವಿಮಾನದ ಮೂಲಕ ಸಿಂಗಪುರಕ್ಕೆ ಪ್ರಯಾಣ ಬೆಳೆಸಿದ್ದು, ಜುಲೈ 8ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪಾಲಿಕೆಯ ಮೂಲಗಳು ತಿಳಿಸಿವೆ.

ರಾಜ್ಯದಾದ್ಯಂತ 1 ಸಾವಿರ ಪೌರಕಾರ್ಮಿಕರನ್ನು ವಿದೇಶಕ್ಕೆ ಕಳುಹಿಸಲು ನಿರ್ಧರಿಸಲಾಗಿದ್ದು, ಮೊದಲ ಹಂತದಲ್ಲಿ 40 ಜನರ ತಂಡದ ಪೈಕಿ 3 ಮಹಿಳಾ ಕಾರ್ಮಿಕರು ತಂಡದಲ್ಲಿದ್ದಾರೆ.
'ನಾವ್ಯಾರೂ ವಿಮಾನದಲ್ಲಿ ಪ್ರಯಾಣಿಸುವುದಿರಲಿ ಅದರ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿರಲಿಲ್ಲ. ನಮ್ಮ ತಂದೆ-ತಾಯಿ ಮಾಡಿದ ಪುಣ್ಯದಿಂದ ನನಗೆ ವಿಮಾನದಲ್ಲಿ ಪ್ರಯಾಣಿಸುವ ಅದೃಷ್ಟ ಬಂದಿದೆ. ಸಿಂಗಪುರದಲ್ಲಿನ ಕಾರ್ಮಿಕರ ಬಗ್ಗೆ ತಿಳಿದುಕೊಂಡು ಬರುತ್ತೇನೆ'ಎಂದು ಕರಬಸಪ್ಪ ಮಾದರ ಹರ್ಷ ವ್ಯಕ್ತಪಡಿಸಿದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications