ಜರ್ಮನಿಯ ಅಧಿಕಾರಿಗಳ ವಶದಲ್ಲಿ ಮುಂಬೈನ 7 ತಿಂಗಳ ಮಗು; ಹುಬ್ಬಳ್ಳಿಯಲ್ಲಿ ಜನಾಕ್ರೋಶ
ಹುಬ್ಬಳ್ಳಿ, ಸೆಪ್ಟೆಂಬರ್, 30: ಮುಂಬೈ ಮೂಲದ ಭವೇಶ್ ಷಾ, ಧಾರಾ ದಂಪತಿಗಳ 7 ತಿಂಗಳ ಮಗುವನ್ನು ಜರ್ಮನಿಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಅರಿಹಾ ಎಂಬ ಬಾಲಕಿಯನ್ನು ಭಾರತಕ್ಕೆ ವಾಪಸ್ ಕಳುಹಿಸಬೇಕು ಎಂದು ಒತ್ತಾಯಿಸಿ ಜೈನ ಸಮುದಾಯದ ವಿವಿಧ ಸಂಘಟನೆಗಳು ನಗರದಲ್ಲಿ ಬೃಹತ್ ರ್ಯಾಲಿ, ಪ್ರತಿಭಟನೆಯನ್ನು ನಡೆಸಿದವು.
ನಗರದ ಕಂಚಿಗಾರ ಗಲ್ಲಿಯಿಂದ ತಹಶೀಲ್ದಾರ್ ಕಚೇರಿಯವರೆಗೆ ನಡೆದ ರ್ಯಾಲಿಯಲ್ಲಿ ನೂರಾರು ಜೈನ ಸಮುದಾಯದ ಜನರು ಭಾಗವಹಿಸಿದ್ದರು. ಜರ್ಮನ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅರಿಹಾಳನ್ನು ವಾಪಾಸ್ ಭಾರತಕ್ಕೆ ಕರೆತರುವ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಜರ್ಮನಿ ಅಧಿಕಾರಿಗಳ ಅಟ್ಟಹಾಸ; ಜನಾಕ್ರೋಶ
ಇನ್ನು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ "ಭೇಟಿ ಪಡಾವೋ, ಭೇಟಿ ಬಚಾವೋ" ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ. ಮುಂಬೈ ಮೂಲದ ಭವೇಶ್ ಷಾ ಎಂಬುವವರು ಜರ್ಮನಿಯ ಘಾಟ್ಲೋಡಿಯಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಧಾರಾ ಅವರನ್ನು ವಿವಾಹವಾಗಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಅವರು ಬರ್ಲಿನ್ನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಅರಿಹಾ ಎಂಬ ಹೆಣ್ಣು ಮಗು ಜನಿಸಿದೆ. ಈ ಮಗು ಏಳು ತಿಂಗಳು ಇರುವಾಗ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಆಗ ಜರ್ಮನಿಯ ವೈದ್ಯರಲ್ಲಿ ತೋರಿಸಿದಾಗ ಮಗುವಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದ್ದರು. ಆದರೆ ವೈದ್ಯರು ಎರಡು ದಿನಗಳ ನಂತರ ಜರ್ಮನಿಯ ಅಧಿಕಾರಿಗಳನ್ನು ಕರೆಸಿ ಮಗುವನ್ನು ಪರಿಶೀಲಿಸಿ ದಂಪತಿ ಮೇಲೆ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ಬಳಿಕ ಅರಿಹಾಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದೀಗ ಭಾಷೆ ಸಮಸ್ಯೆಯಿಂದಾಗಿ ಅಧಿಕಾರಿಗಳಿಗೆ ಸರಿಯಾಗಿ ಮನವರಿಕೆ ಮಾಡಲು ದಂಪತಿ ವಿಫಲರಾಗಿದ್ದಾರೆ ಎನ್ನಲಾಗಿದೆ. ಕಾನೂನು ಹೋರಾಟ ನಡೆಸಿದ ದಂಪತಿ ಮೇಲಿನ ಆರೋಪ ತೆರೆವುಗೊಳಿಸಲಾಗಿದೆ ಎಂದು ತಿಳಿದುಬಂದಿದ್ದು, ಕೂಡಲೇ ವಶದಲ್ಲಿರುವ ಮಗುವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ "ಅರಿಹಾ ಬಚಾವೋ" ಅಭಿಯಾನದ ಅನ್ವಯ ರ್ಯಾಲಿಯನ್ನು ಈಗಾಗಲೇ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ನಡೆಸಲಾಗಿದ್ದು, ಅದರಂತೆ ಬೆಂಬಲವಾಗಿ ಹುಬ್ಬಳ್ಳಿಯಲ್ಲಿಯೂ ರ್ಯಾಲಿ ನಡೆಯಿತು.
ಈ ಸಂದರ್ಭದಲ್ಲಿ ಜೈನ ಸಮುದಾಯದ ಮುಖಂಡ ಮಹೇಂದ್ರ ಸಿಂಘಿ, ರಾಜೇಂದ್ರ ಬಿಳಗಿ, ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ, ಸಚಿನ ಕಟಾರೀಯಾ, ಮಹೇಶ ಬಂಡಾರಿ, ದಿಲಿಪ್ ಜೈನ್ ಸೇರಿದಂತೆ ಮುಂತಾದವರು ಇದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications