Heartattack: NDA ಗೆ ನಿರೀಕ್ಷಿತ ಸೀಟು ಬಾರದಿದ್ದಕ್ಕೆ ಬಿಜೆಪಿ ಕಟ್ಟಾಭಿಮಾನಿ ಸಾವು
ಹುಬ್ಬಳ್ಳಿ, ಜೂನ್ 04: ಭಾರತದ ಸಾರ್ವತ್ರಿಕ ಚುನಾವಣೆ 2024ಯ ಫಲಿತಾಂಶ ಇಂದು ಹೊರ ಬಿದ್ದಿದೆ, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಇದುವರೆಗಿನ ಮತ ಎಣಿಕೆಯಲ್ಲಿ NDA ಗೆ ಕಡಿಮೆ ಸ್ಥಾನ ಬಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕಟ್ಟಾಭಿಮಾನಿಗೆ ಹೃದಯಾಘಾತವಾಗಿದೆ.
ಹೌದು, ಬಿಜೆಪಿಯ ಕಟ್ಟಾಭಿಮಾನಿಯಾಗಿದ್ದ ಹುಬ್ಬಳ್ಳಿ ನಿವಾಸಿಗೆ, ಲೋಕಸಭಾ ಚುನಾವಣೆಯಲ್ಲಿಇಂದು ಎನ್ಡಿಎಗೆ ನಿರೀಕ್ಷಿತ ಬಹುಮತ ಸಿಗದ ಹಿನ್ನೆಲೆಯಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಇವರು ಹುಬ್ಬಳ್ಳಿಯ ಲಿಂಗರಾಜ ನಗರದ ಬಡಾವಣೆಯ ನಿವಾಸಿ ಎಂದು ತಿಳಿದು ಬಂದಿದೆ.

ಮೃತ ದುರ್ದೈವಿಯನ್ನು ಶಿವಪ್ರಕಾಶ್ ಹಿರೇಮಠ ಎಂದು ಗುರುತಿಸಲಾಗಿದೆ. ಮೊದಲಿಂದಲೂ ಅವರು ಬಿಜೆಪಿಯ ಕಟ್ಟಾ ಅಭಿಮಾನಿಯಾಗಿದ್ದರು. ಇಂದು (ಜೂನ್ 04) ಮನೆಯಲ್ಲಿ ಮತ ಎಣಿಕೆಯನ್ನು ಗಮನಿಸುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗರಿಷ್ಠ 400 ವರೆಗೆ ಸೀಟು ಗಳಿಸಲಿದೆ ಎಂದು ಹೇಳಲಾಗುತ್ತಾ ಬರಲಾಗಿತ್ತು.
ಇದೀಗ ನಿರೀಕ್ಷೆಯಂತೆ ಸ್ಥಾನಗಳು ಬಾರದ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದರು. ಇದರಿಂದ ಸೋಫಾ ಮೇಲೆ ಕೂತು ಟಿವಿ ನೋಡುತ್ತಿದ್ದ ಅವರು ಮಾನಸಿಕವಾಗಿ ತೀವ್ರ ಘಾಸಿಗೊಂಡ ಕಾರಣ ಹೃದಯಾಘಾತವಾಗಿದೆ. ಸೋಫಾ ಮೇಲಿಂದ ಕೆಳಕ್ಕೆ ಕುಸಿದು ಬಿದ್ದಿದ್ದಾರೆ.
ಮನೆಯಲ್ಲಿಯೇ ಹೃದಯಾಘಾತ ಆದ ಪರಿಣಾಮ ಕೂಡಲೇ ಕುಟುಂಬಸ್ಥರು ಅವರನ್ನು ಕೆಎಲ್ಇ ಸುಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯವೇ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಈ ಬಗ್ಗೆ ಆಸ್ಪತ್ರೆಯಲ್ಲಿ ವೈದ್ಯರು ದೃಢಪಡಿಸಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
ಎನ್ಡಿಗೆ 293 ಕೇವಲ ಸೀಟು
ಸದ್ಯ ಮಂಗಳವಾರ ಸಂಜೆವರೆಗಿನ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಗೆ 293 ಸೀಟುಗಳು ಬಂದರೆ, ಇಂಡಿಯಾ ಒಕ್ಕೂಟಕ್ಕೆ 233 ಸೀಟುಗಳು ಲಭಿಸಿವೆ. ಇನ್ನು ಅಧಿಕೃತ ಮಾಹಿತಿ ಬರಬೇಕಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications