ವೀರೇಂದ್ರ ಹೆಗ್ಗಡೆ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು: ಸರ್ಕಾರಕ್ಕೆ ರಾಜಣ್ಣ ಕೊರವಿ ಮನವಿ
ಹುಬ್ಬಳ್ಳಿ, ಆಗಸ್ಟ್, 03: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮೇಲೆ ಇಲ್ಲಸಲ್ಲದ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಅಪಪ್ರಚಾರ ಮಾಡಲಾಗುತ್ತಿದ್ದು, ಇಂತಹ ಸುಳ್ಳು ವಿಷಯಗಳನ್ನು ಹರಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ರಾಜಣ್ಣ ಕೊರವಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳವು ಪವಿತ್ರ ಧಾರ್ಮಿಕ ಯಾತ್ರಾಸ್ಥಳವಾಗಿದೆ. ರಾಜ್ಯದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯೊಂದಿಗೆ ಹೆಸರುವಾಸಿಯಾಗಿದೆ. ಹೆಗ್ಗಡೆಯವರ ಯೋಜನಾ ಕೌಶಲ್ಯ ಅತ್ಯದ್ಭುತವಾದದ್ದು. ಧರ್ಮಸ್ಥಳದ ಚಾರಿತ್ರಿಕ ಮಹತ್ವ ಪರಂಪರೆ ಮತ್ತು ತಮ್ಮ ವ್ಯಕ್ತಿತ್ವಕ್ಕೆ ಸರಿದೂಗುವ ರೀತಿಯಲ್ಲಿ ಅವರು ಯೋಜನೆ ರೂಪಿಸುತ್ತಾ ಬರುತ್ತಿದ್ದಾರೆ. ಅವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯದಲ್ಲಿ 48 ಲಕ್ಷ ಕುಟುಂಬಗಳಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ ಎಂದರು.

ಇನ್ನು ಸ್ವ-ಸಹಾಯ ಸಂಘದ ಅಭಿವೃದ್ಧಿಯಲ್ಲದೇ "ನಮ್ಮೂರು ನಮ್ಮ ಕೆರೆ" ಕಾರ್ಯಕ್ರಮದ ಮೂಲಕ ಕೆರೆಗಳ ಮನಸ್ಸೇತನ, ರುದ್ರಭೂಮಿ ಅಭಿವೃದ್ಧಿ, ಮಹಿಳೆಯರ ಸಬಲೀಕರಣಕ್ಕಾಗಿ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಉತ್ಸಲ್ಯ ಕಾರ್ಯಕ್ರಮದಲ್ಲಿ ಅಸಹಾಯಕರಿಗೆ ಮಾಶಾಸನ, ಸುಜ್ಞಾನನಿಧಿ ಶಿಷ್ಯವೇತನ , ಹಾಲು ಉತ್ಪಾದಕ ಸಹಕಾರ ಸಂಘದ ಕಟ್ಟಡಗಳಿಗೆ ಅನುದಾನ, ಶಿಕ್ಷಕರ ಕೊರತೆ ಇದ್ದಲ್ಲಿ ಜ್ಞಾನದೀಪ ಶಿಕ್ಷಕರ ನಿಯೋಜನೆ, ಮುಗ್ಗಟಮುಕ್ತ ಸಮಾಜ ನಿರ್ಮಾಣಕ್ಕೆ ಮಧ್ಯವರ್ಜನ ಶಿಬಿರ, ಆರೋಗ್ಯರಕ್ಷಾ, ಸಂರ್ಪೂ ಸುರಕ್ಷಾ ಕಾರ್ಯಕ್ರಮಗಲನ್ನು ಜಾರಿ ಮಾಡಿದ್ದಾರೆ.
ಅಲ್ಲದೆ 87 ಲಕ್ಷ ಮಂದಿಗೆ ಆಯುಷ್ಠಾನ ಕಾರ್ಡ್, ರೈತ ಮಿತ್ರ ಯೋಜನೆಗಳು, ಬಡವರಿಗೆ ಆರ್ಥಿಕ ಸಹಕಾರ, ಪುರಾತನ ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಧನಸಹಾಯ ಸೇರಿದಂತೆ ರಾಜ್ಯದ ಜನರಿಗೆ ಅನುಕೂಲವಾಗಲು ನೂರಾರು ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ನಾಡಿನ ಸಮಸ್ತ ಜನರ ಆಶಯಗಳನ್ನು ಪೂರ್ಣಗೊಳಿಸಲಿಕ್ಕಾಗಿ ಸದಾ ಪಣತೊಟ್ಟು ಜನ ಸೇವೆಯೇ ಜನಾರ್ಧನ ಸೇವೆ ಎನ್ನುವ ತತ್ವದಡಿಯಲ್ಲಿ ಲಕ್ಷಾಂತರ ಕುಟುಂಬಗಳಲ್ಲಿ, ಆನಂದ, ಶಾಂತಿ, ನೆಮ್ಮದಿ, ದುಡಿಮೆ, ಸಕಲ ಸೌಕರ್ಯಗಳನ್ನು ಕೊಡಲು ಕಾರಣೀಭೂತರಾದ ವೀರೇಂದ್ರ ಹೆಗ್ಗಡೆ ಅವರ ಕುರಿತಾಗಿ ಕೆಲವು ಸಮಾಜ ದ್ರೋಹಿಗಳು ಮಾನಹಾನಿಕರ ನುಡಿಗಳನ್ನು ಹೇಳುತ್ತಿರುವುದು ನೋವುಂಟು ಮಾಡಿದೆ ಎಂದರು.
ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಒತ್ತಾಯ ಮಾಡಿ ನ್ಯಾಯಯುತ ತನಿಖೆಗೆ ಆಗ್ರಹಿಸಿರುವ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೇ ಕೆಲವರು ಅಪಪ್ರಚಾರ ಮಾಡುತ್ತಿದ್ದು, ಇಂತಹ ಸುಳ್ಳು ವಿಚಾರಗಳ ಬಗ್ಗೆ ಜನರು ಎಚ್ಚರವಹಿಸಬೇಕು. ಸರ್ಕಾರ ಇಂತಹ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಅಪಪ್ರಚಾರ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ವಿಷಯವನ್ನು ಜನಜಾಗೃತಿ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದರು.
ಮುಂದಿನ ದಿನದಲ್ಲಿ ಇಂತಹ ಅಪಪ್ರಚಾರಗಳು ಮರುಕಳಿಸಿದ್ದಲ್ಲಿ ವೀರೇಂದ್ರ ಹೆಗ್ಗಡೆ ಅವರ ಭಕ್ತ ವೃಂದ ಬೃಹತ್ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶವನ್ನು ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications