ಧಾರವಾಡದ ನೆಹರೂ ನಗರದಲ್ಲಿ ಅಕ್ಕನ ಸಾವಿನಿಂದ ನೊಂದು ತಮ್ಮ ಆತ್ಮಹತ್ಯೆ
ಧಾರವಾಡದ ನೆಹರೂ ನಗರದಲ್ಲಿ ಆ ಅಕ್ಕ-ತಮ್ಮ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅನಾರೋಗ್ಯದ ಕಾರಣಕ್ಕೆ ಆಕ್ಕ ಮೃತಪಟ್ಟರೆ, ಆ ಘಟನೆಯಿಂದ ನೊಂದು ತಮ್ಮ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಧಾರವಾಡ, ಮೇ 11: ಇಲ್ಲಿನ ನೆಹರೂ ನಗರದಲ್ಲಿ ಬುಧವಾರ ಹೃದಯ ಕರಗುವಂಥ ಘಟನೆ ನಡೆದಿದೆ. ಕಳೆದ ಕೆಲ ವರ್ಷಗಳಿಂದ ಕ್ಷಯ ರೋಗದಿಂದ ಬಳಲುತ್ತಿದ್ದ ಕಸ್ತೂರಿ ಬಡಿಗೇರ ಅವರು ಮೃತಪಟ್ಟರು. ಈ ಘಟನೆಯಿಂದ ನೊಂದಂಥ ಅವರ ತಮ್ಮ ರಮೇಶ ಬಡಿಗೇರ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಸ್ತೂರಿ ಅವರಿಗೆ ಮದುವೆ ಆಗಿರಲಿಲ್ಲ. ಆಕೆಯ ಯೋಗಕ್ಷೇಮವನ್ನು ರಮೇಶ ನೋಡಿಕೊಳ್ಳುತ್ತಿದ್ದರು. ಇಬ್ಬರೂ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಮನೆಯ ಬಾಗಿಲು ತೆರೆದಿದ್ದನ್ನು ನೋಡಿ ಮಾಲೀಕರುಮನೆಯ ಒಳಗೆ ಹೋಗಿ ನೋಡಿದ್ದಾರೆ. ಅಗ ಇಬ್ಬರೂ ಮೃತಪಟ್ಟಿರುವುದು ತಿಳಿದುಬಂದಿದೆ.[ಮದುವೆ ವಾರ್ಷಿಕೋತ್ಸವ ದಿನವೇ ಮಸಣ ಸೇರಿದ ಸಬ್ ಇನ್ ಸ್ಪೆಕ್ಟರ್]

ಆ ಕೂಡಲೇ ಮನೆಯ ಮಾಲೀಕರು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿಯನ್ನು ತಲುಪಿಸಿದ್ದಾರೆ. ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.
ಬಾಲಕ ನಾಪತ್ತೆ: ಹುಬ್ಬಳ್ಳಿಯ ಅದರಗುಂಚಿ ಗ್ರಾಮದ ಕ್ವಾರಿಯಲ್ಲಿ ಈಜಲು ತೆರಳಿದ್ದ ಬಾಲಕ ಬುಧವಾರ ನಾಪತ್ತೆಯಾಗಿದ್ದಾನೆ. ಉಮೇಶ ನಿಂಗಪ್ಪ ದೊಡ್ಡಮನಿ ನಾಪತ್ತೆಯಾದ ಬಾಲಕ. ಶಲೆಗೆ ರಜಾ ಇದ್ದುದರಿಂದ ಸ್ನೇಹಿತರ ಜತೆ ಸೇರಿ ಕ್ವಾರಿಗೆ ಈಜಲು ತೆರಳಿದ್ದಾಗ ನಾಪತ್ತೆಯಾಗಿದ್ದಾನೆ.[ಆತ ಊಟ-ನೀರಿಲ್ಲದೆ ತಂದೆ ಶವದ ಬಳಿಯೇ ಐದು ದಿನ ಇದ್ದ]
ಸಂಜೆಯವರೆಗೆ ಹುಡುಕಾಟ ನಡೆಸಿದರೂ ಬಾಲಕ ಪತ್ತೆಯಾಗಲಿಲ್ಲ. ಕತ್ತಲೆ ಆಗಿದ್ದರಿಂದ ಕಾರ್ಯಾಚರಣೆಯನ್ನು ನಿಲ್ಲಿಸಲಾಯಿತು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications